AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ತಿಂಗಳ ಹಿಂದೆ ಪ್ರೇಯಸಿಯನ್ನು ಕೊಂದು, ಪೊಲೀಸರೆದುರು ಹೊಸ ಕತೆ ಕಟ್ಟಿದ ಪ್ರಿಯಕರ!

7 ತಿಂಗಳ ಹಿಂದೆಯೇ ರಾಮನ್ ತನ್ನ ಜೊತೆ ವಾಸವಾಗಿದ್ದ ಮಹಿಳೆಯನ್ನು ಕೊಂದಿದ್ದಾನೆ. ನಂತರ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ನನ್ನ ಲಿವ್ ಇನ್ ಪಾರ್ಟನರ್ ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದಾನೆ.

7 ತಿಂಗಳ ಹಿಂದೆ ಪ್ರೇಯಸಿಯನ್ನು ಕೊಂದು, ಪೊಲೀಸರೆದುರು ಹೊಸ ಕತೆ ಕಟ್ಟಿದ ಪ್ರಿಯಕರ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 25, 2022 | 2:37 PM

Share

ಘಾಜಿಯಾಬಾದ್: 7 ತಿಂಗಳ ಹಿಂದೆ ತನ್ನ ಲಿವ್-ಇನ್ ಸಂಗಾತಿಯನ್ನು (Live-In Partner) ಕೊಂದು ಆಕೆ ನಾಪತ್ತೆಯಾಗಿದ್ದಾಳೆಂದು ಸುಳ್ಳು ಕೇಸ್ ದಾಖಲಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಉತ್ತರ ಪ್ರದೇಶ (Uttar Pradesh Police) ಪೊಲೀಸರು ಬಂಧಿಸಿದ್ದಾರೆ. ಆರೋಪಿ ರಾಮನ್ ಜೊತೆ ವಾಸವಾಗಿದ್ದ ಮಹಿಳೆ ಮೇ 20ರಂದು ನಾಪತ್ತೆಯಾಗಿದ್ದು, ಆಕೆಗೆ 2 ವರ್ಷದ ಮಗಳಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

7 ತಿಂಗಳ ಹಿಂದೆಯೇ ರಾಮನ್ ತನ್ನ ಜೊತೆ ವಾಸವಾಗಿದ್ದ ಮಹಿಳೆಯನ್ನು ಕೊಂದಿದ್ದಾನೆ. ನಂತರ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ನನ್ನ ಲಿವ್ ಇನ್ ಪಾರ್ಟನರ್ ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದಾನೆ. ರಾಮನ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ: Viral Video: ಪೊಲೀಸ್ ಯುನಿಫಾರಂ ಧರಿಸಿ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್

ತನಿಖೆಯ ವೇಳೆ ರಾಮನ್ ಹಾಗೂ ಆ ಮಹಿಳೆ ಮದುವೆಗೆ ಸಂಬಂಧಿಸಿದಂತೆ ಜಗಳವಾಡಿದ್ದರು ಎಂಬ ವಿಚಾರ ಬೆಳಕಿಗೆ ಬಂದಿತ್ತು. ಈ ಬಗ್ಗೆ ವಿಚಾರಣೆ ನಡೆಸಿದಾಗ ಮೇ ತಿಂಗಳಲ್ಲಿ ರಾಮನ್ ತನ್ನ ಪಾರ್ಟನರ್ ಜೊತೆ ಹಿಮಾಚಲ ಪ್ರದೇಶದ ಕುಲುಗೆ ಹೋಗುತ್ತಿದ್ದಾಗ ಆಕೆಯ ಕತ್ತು ಹಿಸುಕಿ ಕೊಂದು, ಅಲ್ಲಿ ಕಾಡಿನಲ್ಲಿ ಶವವನ್ನು ಎಸೆದಿದ್ದಾನೆ ಎಂದು ಪೊಲೀಸರು ಪತ್ತೆಹಚ್ಚಿದ್ದರು.

ಈಗಾಗಲೇ ಕೊಲೆ ಪ್ರಕರಣ ದಾಖಲಾಗಿದ್ದು, ಕುಲುವಿನ ಅರಣ್ಯದಲ್ಲಿ ಮಹಿಳೆ ಶವ ಪತ್ತೆಯಾಗಿದೆ ಎಂದು ಡಿಸಿಪಿ ಶರ್ಮಾ ತಿಳಿಸಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Bird Flu: ಕೇರಳದಲ್ಲಿ ಹೆಚ್ಚಿದ ಹಕ್ಕಿ ಜ್ವರ; ಕೊಟ್ಟಾಯಂನಲ್ಲಿ 6,000ಕ್ಕೂ ಹೆಚ್ಚು ಪಕ್ಷಿಗಳ ಹತ್ಯೆ

ರಾಷ್ಟ್ರ ರಾಜಧಾನಿಯಲ್ಲಿ ಶ್ರದ್ಧಾ ವಾಕರ್ ಅವರನ್ನು ಆಕೆಯ ಲಿವ್-ಇನ್ ಪಾರ್ಟನರ್ ಅಫ್ತಾಬ್ ಪೂನಾವಾಲಾ ಅಮಾನುಷವಾಗಿ ಕೊಂದ ಪ್ರಕರಣವು ದೇಶವನ್ನು ಬೆಚ್ಚಿ ಬೀಳಿಸಿದ ಬೆನ್ನಲ್ಲೇ ಈ ಪ್ರಕರಣ ಮುನ್ನೆಲೆಗೆ ಬಂದಿದೆ. ಕಾಕತಾಳೀಯವಾಗಿ, ಶ್ರದ್ಧಾ ಮತ್ತು ಅಫ್ತಾಬ್ ಕೂಡ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದರು. ಅದಾದ ನಂತರ ಆತ ಆಕೆಯನ್ನು ಕೊಂದು ಆಕೆಯ ದೇಹವನ್ನು 35 ಭಾಗಗಳಾಗಿ ಕತ್ತರಿಸಿ, ಬಿಸಾಡಿದ್ದ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Sun, 25 December 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ