AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ತಿಂಗಳ ಹಿಂದೆ ಪ್ರೇಯಸಿಯನ್ನು ಕೊಂದು, ಪೊಲೀಸರೆದುರು ಹೊಸ ಕತೆ ಕಟ್ಟಿದ ಪ್ರಿಯಕರ!

7 ತಿಂಗಳ ಹಿಂದೆಯೇ ರಾಮನ್ ತನ್ನ ಜೊತೆ ವಾಸವಾಗಿದ್ದ ಮಹಿಳೆಯನ್ನು ಕೊಂದಿದ್ದಾನೆ. ನಂತರ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ನನ್ನ ಲಿವ್ ಇನ್ ಪಾರ್ಟನರ್ ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದಾನೆ.

7 ತಿಂಗಳ ಹಿಂದೆ ಪ್ರೇಯಸಿಯನ್ನು ಕೊಂದು, ಪೊಲೀಸರೆದುರು ಹೊಸ ಕತೆ ಕಟ್ಟಿದ ಪ್ರಿಯಕರ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 25, 2022 | 2:37 PM

Share

ಘಾಜಿಯಾಬಾದ್: 7 ತಿಂಗಳ ಹಿಂದೆ ತನ್ನ ಲಿವ್-ಇನ್ ಸಂಗಾತಿಯನ್ನು (Live-In Partner) ಕೊಂದು ಆಕೆ ನಾಪತ್ತೆಯಾಗಿದ್ದಾಳೆಂದು ಸುಳ್ಳು ಕೇಸ್ ದಾಖಲಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಉತ್ತರ ಪ್ರದೇಶ (Uttar Pradesh Police) ಪೊಲೀಸರು ಬಂಧಿಸಿದ್ದಾರೆ. ಆರೋಪಿ ರಾಮನ್ ಜೊತೆ ವಾಸವಾಗಿದ್ದ ಮಹಿಳೆ ಮೇ 20ರಂದು ನಾಪತ್ತೆಯಾಗಿದ್ದು, ಆಕೆಗೆ 2 ವರ್ಷದ ಮಗಳಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

7 ತಿಂಗಳ ಹಿಂದೆಯೇ ರಾಮನ್ ತನ್ನ ಜೊತೆ ವಾಸವಾಗಿದ್ದ ಮಹಿಳೆಯನ್ನು ಕೊಂದಿದ್ದಾನೆ. ನಂತರ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ನನ್ನ ಲಿವ್ ಇನ್ ಪಾರ್ಟನರ್ ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದಾನೆ. ರಾಮನ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ: Viral Video: ಪೊಲೀಸ್ ಯುನಿಫಾರಂ ಧರಿಸಿ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್

ತನಿಖೆಯ ವೇಳೆ ರಾಮನ್ ಹಾಗೂ ಆ ಮಹಿಳೆ ಮದುವೆಗೆ ಸಂಬಂಧಿಸಿದಂತೆ ಜಗಳವಾಡಿದ್ದರು ಎಂಬ ವಿಚಾರ ಬೆಳಕಿಗೆ ಬಂದಿತ್ತು. ಈ ಬಗ್ಗೆ ವಿಚಾರಣೆ ನಡೆಸಿದಾಗ ಮೇ ತಿಂಗಳಲ್ಲಿ ರಾಮನ್ ತನ್ನ ಪಾರ್ಟನರ್ ಜೊತೆ ಹಿಮಾಚಲ ಪ್ರದೇಶದ ಕುಲುಗೆ ಹೋಗುತ್ತಿದ್ದಾಗ ಆಕೆಯ ಕತ್ತು ಹಿಸುಕಿ ಕೊಂದು, ಅಲ್ಲಿ ಕಾಡಿನಲ್ಲಿ ಶವವನ್ನು ಎಸೆದಿದ್ದಾನೆ ಎಂದು ಪೊಲೀಸರು ಪತ್ತೆಹಚ್ಚಿದ್ದರು.

ಈಗಾಗಲೇ ಕೊಲೆ ಪ್ರಕರಣ ದಾಖಲಾಗಿದ್ದು, ಕುಲುವಿನ ಅರಣ್ಯದಲ್ಲಿ ಮಹಿಳೆ ಶವ ಪತ್ತೆಯಾಗಿದೆ ಎಂದು ಡಿಸಿಪಿ ಶರ್ಮಾ ತಿಳಿಸಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Bird Flu: ಕೇರಳದಲ್ಲಿ ಹೆಚ್ಚಿದ ಹಕ್ಕಿ ಜ್ವರ; ಕೊಟ್ಟಾಯಂನಲ್ಲಿ 6,000ಕ್ಕೂ ಹೆಚ್ಚು ಪಕ್ಷಿಗಳ ಹತ್ಯೆ

ರಾಷ್ಟ್ರ ರಾಜಧಾನಿಯಲ್ಲಿ ಶ್ರದ್ಧಾ ವಾಕರ್ ಅವರನ್ನು ಆಕೆಯ ಲಿವ್-ಇನ್ ಪಾರ್ಟನರ್ ಅಫ್ತಾಬ್ ಪೂನಾವಾಲಾ ಅಮಾನುಷವಾಗಿ ಕೊಂದ ಪ್ರಕರಣವು ದೇಶವನ್ನು ಬೆಚ್ಚಿ ಬೀಳಿಸಿದ ಬೆನ್ನಲ್ಲೇ ಈ ಪ್ರಕರಣ ಮುನ್ನೆಲೆಗೆ ಬಂದಿದೆ. ಕಾಕತಾಳೀಯವಾಗಿ, ಶ್ರದ್ಧಾ ಮತ್ತು ಅಫ್ತಾಬ್ ಕೂಡ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದರು. ಅದಾದ ನಂತರ ಆತ ಆಕೆಯನ್ನು ಕೊಂದು ಆಕೆಯ ದೇಹವನ್ನು 35 ಭಾಗಗಳಾಗಿ ಕತ್ತರಿಸಿ, ಬಿಸಾಡಿದ್ದ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Sun, 25 December 22

Follow Us
Web contact
Web contact

TV9 Kannada

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ