AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ನಡುರಸ್ತೆಯಲ್ಲೇ ವ್ಯಕ್ತಿಯನ್ನು ಹೊಡೆದು ಕೊಂದ ಜನ

ವ್ಯಕ್ತಿಯೊಬ್ಬನನ್ನು ಕಳ್ಳತನದ ಆರೋಪದ ಮೇರೆಗೆ ರಸ್ತೆಯಲ್ಲೇ ಜನರು ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಳ್ಳತನ ಆರೋಪ ಹೊರಿಸಿ ಫಿರೋಜ್ ಖುರೇಷಿ ಎಂಬ ವ್ಯಕ್ತಿಯನ್ನು ನಡುರಸ್ತೆಯಲ್ಲಿ ಥಳಿಸಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ನಡುರಸ್ತೆಯಲ್ಲೇ ವ್ಯಕ್ತಿಯನ್ನು ಹೊಡೆದು ಕೊಂದ ಜನ
ಪ್ರತಿಭಟನೆ
ನಯನಾ ರಾಜೀವ್
|

Updated on: Jul 07, 2024 | 9:04 AM

Share

ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ವ್ಯಕ್ತಿಯೊಬ್ಬನನ್ನು ಜನರು ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ. ಕಳ್ಳತನ ಆರೋಪ ಹೊರಿಸಿ ಫಿರೋಜ್ ಖುರೇಷಿ ಎಂಬ ವ್ಯಕ್ತಿಯನ್ನು ನಡುರಸ್ತೆಯಲ್ಲಿ ಥಳಿಸಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಫಿರೋಜ್ ಕೆಲಸದ ನಿಮಿತ್ತ ಗಂಗಾ ಗಂಗಾ ಆರ್ಯನಗರದ ಜಲಾಲಾಬಾದ್ ಪ್ರದೇಶಕ್ಕೆ ಹೋಗಿದ್ದಾಗ ಪಿಂಕಿ ಮತ್ತು ಪಂಕಜ್ ರಾಜೇಂದ್ರ ಎಂಬುವವರು ಅವರ ಮೇಲೆ ಕಳ್ಳತನದ ಆರೋಪ ಹೊರಿಸಿದ್ದರು.

ಕೆಲ ಸ್ಥಳೀಯರು ಆತನನ್ನು ರಕ್ಷಿಸಲು ಯತ್ನಿಸಿದರಾದರೂ ಫಿರೋಜ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಸಂಜೆ 5 ಗಂಟೆ ಸುಮಾರಿಗೆ ಅವರನ್ನು ಗುಂಪೊಂದು ಥಳಿಸಿತು ಮತ್ತು ತೀವ್ರವಾಗಿ ಗಾಯಗೊಂಡಿದ್ದರು. ಫಿರೋಜ್ ಯಾವುದೇ ಕ್ರಿಮಿನಲ್ ದಾಖಲೆಯಿಲ್ಲದ ಸ್ಕ್ರ್ಯಾಪ್ ವರ್ಕರ್ ಆಗಿದ್ದರು.

ಆದರೂ ಯಾಕೆ ಕೊಲೆ ಮಾಡಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ನಂತರ ಸಂತ್ರಸ್ತೆಯ ಕುಟುಂಬಸ್ಥರು ಸ್ಥಳೀಯ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಇದುವರೆಗೂ ಯಾರನ್ನೂ ಬಂಧಿಸಲಾಗಿದೆ.

ಮತ್ತಷ್ಟು ಓದಿ: ಉಡುಪಿ: ಕಳ್ಳತನ ಮಾಡ್ತಿದ್ದಾಗಲೇ ಸಿಕ್ಕಿಬಿದ್ದ ಕಳ್ಳ; ಮುಂದೇನಾಯ್ತು?

ಜನರು ಫಿರೋಜ್‌ನನ್ನು ಕೊಲ್ಲುವ ಉದ್ದೇಶವನ್ನು ಹೊಂದಿರಲಿಲ್ಲ, ಆದರೆ ಕಳ್ಳ ತಪ್ಪಿಸಿಕೊಂಡು ಹೋಗಬಹುದು ಎಂದು ಎನ್ನುವ ಕಾರಣಕ್ಕೆ ಥಳಿಸಲಾಗಿದೆ ಎಂದು ತಿಳಿಸಿದ್ದಾರೆ. ಜಲಾಲಾಬಾದ್‌ನ ಕುಟುಂಬ ಸದಸ್ಯರು ಮತ್ತು ಸ್ಥಳೀಯ ಮುಸ್ಲಿಂ ನಿವಾಸಿಗಳು ಫಿರೋಜ್‌ನ ಮೃತದೇಹದೊಂದಿಗೆ ಪೊಲೀಸ್ ಠಾಣೆಗೆ ಜಮಾಯಿಸಿ ಪಿಂಕಿ, ಪಂಕಜ್, ರಾಜೇಂದ್ರ ಮತ್ತು ಅವರ ಸಹಚರರ ವಿರುದ್ಧ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಬೇಕೆಂದು ಒತ್ತಾಯಿಸಿದರು.

ಮರಣೋತ್ತರ ಪರೀಕ್ಷೆಯನ್ನು ಮಾಡಿ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?