AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡ ಖರೀದಿಸಲು ಹಣ ಕೊಡಲಿಲ್ಲವೆಂದು ಅಮ್ಮನನ್ನೇ ಕೊಂದ ಮಗ

ಉತ್ತರ ಪ್ರದೇಶದಲ್ಲಿ ಆಲ್ಕೋಹಾಲ್ ಖರೀದಿಸಲು ಹಣ ನೀಡಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಹೆತ್ತ ತಾಯಿಯನ್ನೇ ಕೊಂದಿದ್ದಾನೆ. ಆಲ್ಕೋಹಾಲ್ ಖರೀದಿಸಲು ಹಣ ಕೇಳಿದಾಗ ಅಮ್ಮ ಇಲ್ಲ ಎಂದಿದ್ದಾರೆ. ಆಗ ಆತ ಮದ್ಯ ಖರೀದಿಸಲು ಆಭರಣಗಳನ್ನು ಮಾರಾಟ ಮಾಡುವಂತೆ ಒತ್ತಾಯಿಸಿದ್ದಾನೆ. ಇದೇ ವಿಷಯಕ್ಕೆ ಅಮ್ಮ-ಮಗನ ಮಧ್ಯೆ ಜಗಳವಾಗಿದೆ. ಇದರಿಂದ ಆತ ಕೊಲೆ ಮಾಡಿದ್ದಾನೆ.

ಹೆಂಡ ಖರೀದಿಸಲು ಹಣ ಕೊಡಲಿಲ್ಲವೆಂದು ಅಮ್ಮನನ್ನೇ ಕೊಂದ ಮಗ
Crime News
ಸುಷ್ಮಾ ಚಕ್ರೆ
|

Updated on: Sep 28, 2025 | 3:49 PM

Share

ಸಹಾರನ್‌ಪುರ, ಸೆಪ್ಟೆಂಬರ್ 28: ಉತ್ತರ ಪ್ರದೇಶದ ಸಹಾರನ್‌ಪುರದಲ್ಲಿ ಆಲ್ಕೋಹಾಲ್ (Alcohol) ಖರೀದಿಸಲು ಹಣ ನೀಡಲು ನಿರಾಕರಿಸಿದ್ದಕ್ಕಾಗಿ ವ್ಯಕ್ತಿಯೊಬ್ಬ 55 ವರ್ಷದ ತನ್ನ ತಾಯಿಯನ್ನು ಹೊಡೆದು ಕೊಂದಿದ್ದಾನೆ. ಈ ಕೃತ್ಯವೆಸಗಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಭಯಪುರಂ ಕಾಲೋನಿಯಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ.

ಅಕ್ಷಯ್ ಎಂಬಾತ ತನ್ನ ತಾಯಿ ಆಶಾ ದೇವಿಯ ಬಳಿ ಮದ್ಯ ಖರೀದಿಸಲು ಹಣ ಕೇಳಿದ. ಆಕೆ ತನ್ನ ಬಳಿ ಹಣವಿಲ್ಲ ಎಂದು ಹೇಳಿದರು. ದುಡ್ಡು ಇಲ್ಲದಿದ್ದರೆ ನಿನ್ನ ಆಭರಣಗಳನ್ನು ಮಾರಾಟ ಮಾಡಲು ಕೊಡು ಎಂದು ಆತ ಕೇಳಿದ. ಅದಕ್ಕೆ ಆಕೆ ಒಪ್ಪಲಿಲ್ಲ. ಹೀಗಾಗಿ, ಕೋಪದಿಂದ ಅಕ್ಷಯ್ ತನ್ನ ತಾಯಿಯನ್ನು ಕೊಲೆ ಮಾಡಿದ್ದಾನೆ.

ಇದನ್ನೂ ಓದಿ: ಸಹೋದರನ ಸ್ನೇಹಿತನ ತಾಯಿ ಜೊತೆಯೇ ಅನೈತಿಕ ಸಂಬಂಧ ಭೀಕರ ಕೊಲೆಯಲ್ಲಿ ಅಂತ್ಯ: ಒಂದೇ ಫೋನ್ ಕಾಲ್​ನಿಂದ ಬಯಲಾಯ್ತು ರಹಸ್ಯ!

“ತಾಯಿ ಮತ್ತು ಮಗನ ನಡುವಿನ ವಾಗ್ವಾದ ಎಷ್ಟು ತೀವ್ರವಾಯಿತು ಎಂದರೆ ಅಕ್ಷಯ್ ತನ್ನ ತಾಯಿಯನ್ನು ಹೊಡೆದು ತಲೆಯನ್ನು ಗೋಡೆಗೆ ಹಲವಾರು ಬಾರಿ ಚಚ್ಚಿದ್ದಾನೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಈ ಘಟನೆಯಿಂದ ಆಶಾ ದೇವಿ ಎಂಬ ಮಹಿಳೆಗೆ ಗಂಭೀರ ಗಾಯಗಳಾಗಿ ಕುಸಿದು ಬಿದ್ದರು.

ಅಪರಾಧದ ಸ್ಥಳದಲ್ಲಿ ಆರೋಪಿಯನ್ನು ಬಂಧಿಸಲಾಯಿತು ಮತ್ತು ಗಾಯಗೊಂಡ ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ವೈದ್ಯರು ಆಕೆ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಪೊಲೀಸರ ಪ್ರಕಾರ, ಅಕ್ಷಯ್ ಬಿಹಾರದಲ್ಲಿ ಮದುವೆಯಾದ ನಂತರ 15 ದಿನಗಳ ಹಿಂದೆ ಸಹರಾನ್‌ಪುರಕ್ಕೆ ಮರಳಿದ್ದ. ಆತನ ಪತ್ನಿ ಎರಡು ದಿನಗಳ ಹಿಂದೆ ತಮ್ಮ ಪೋಷಕರ ಮನೆಗೆ ತೆರಳಿದ್ದಳು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​