AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೀಲ್ಸ್​ಗಾಗಿ ರೈಲ್ವೆ ಹಳಿ ಮೇಲೆ ಸಿಲಿಂಡರ್​, ಸೈಕಲ್ ​ಸೇರಿ ಅಪಾಯಕಾರಿ ವಸ್ತುಗಳನ್ನು ಇರಿಸಿದ್ದ ಯೂಟ್ಯೂಬರ್​ ಬಂಧನ

ರೈಲ್ವೆ ಹಳಿಗಳ ಮೇಲೆ ಅಪಾಯಕಾರಿ ವಸ್ತುಗಳನ್ನು ಇರಿಸಿದ್ದ ಯೂಟ್ಯೂಬರ್​ನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ರೀಲ್ಸ್​ಗಾಗಿ ರೈಲ್ವೆ ಹಳಿ ಮೇಲೆ ಸಿಲಿಂಡರ್​, ಸೈಕಲ್ ​ಸೇರಿ ಅಪಾಯಕಾರಿ ವಸ್ತುಗಳನ್ನು ಇರಿಸಿದ್ದ ಯೂಟ್ಯೂಬರ್​ ಬಂಧನ
ಯೂಟ್ಯೂಬರ್
ನಯನಾ ರಾಜೀವ್
|

Updated on: Aug 02, 2024 | 10:59 AM

Share

ಯುವ ಜನತೆಗೆ ರೀಲ್ಸ್​ ಗೀಳು ಹೆಚ್ಚಾಗಿದೆ, ತಾನು ಕೂಡ ರಾತ್ರೋ ರಾತ್ರಿ ಫೇಮಸ್​ ಆಗಬೇಕು ಎಂದು ಕನಸು ಕಾಣುತ್ತಾ ಬೇರೆಯವರ ಜೀವಕ್ಕೆ ಸಂಚಕಾರ ತರುತ್ತಿದ್ದಾರೆ. ಯೂಟ್ಯೂಬರ್ ಗುಲ್ಜಾರ್ ಶೇಖ್​ ಎಂಬಾತ ರೀಲ್ಸ್​ಗಾಗಿ ರೈಲ್ವೆ ಹಳಿ ಮೇಲೆ ಸೈಕಲ್, ಸಿಲಿಂಡರ್​, ಕಲ್ಲುಗಳು ಸೇರಿದಂತೆ ಅಪಾಯಕಾರಿ ವಸ್ತುಗಳನ್ನು ಇಟ್ಟಿದ್ದಕ್ಕಾಗಿ ಆತನನ್ನು ಬಂಧಿಸಲಾಗಿದೆ.

ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಲೀಗಲ್ ಹಿಂದೂ ಡಿಫೆನ್ಸ್ ಶೇಖ್ ಅವರ ಅಪಾಯಕಾರಿ ಚಟುವಟಿಕೆಗಳ ವಿರುದ್ಧ ದೂರು ದಾಖಲಿಸಿದ ನಂತರ ಬಂಧಿಸಲಾಗಿದೆ. ಆರ್‌ಪಿಎಫ್ ಕೂಡಲೇ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಉತ್ತರ ಪ್ರದೇಶದ ಖಂಡ್ರೌಲಿ ಗ್ರಾಮದ ಆತನ ನಿವಾಸದಿಂದ ಬಂಧಿಸಿದ್ದಾರೆ.

ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ಬಿಜೆಪಿ ನಾಯಕ, ಆರೋಪಿಯನ್ನು ರೈಲ್ ಜಿಹಾದಿ ಎಂದು ಉಲ್ಲೇಖಿಸಿದ್ದಾರೆ ಮತ್ತು ಯೂಟ್ಯೂಬರ್ ಅನ್ನು ಬಂಧಿಸಲಾಗಿದೆ ಎಂದು ಖಚಿತಪಡಿಸಿದ್ದಾರೆ. ತ್ವರಿತ ಕ್ರಮಕ್ಕಾಗಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಯುಪಿ ಪೊಲೀಸ್, ರೈಲ್ವೇ ಸಚಿವ ಅಶ್ವಿನಿ ವೈಷ್ಣವ್​ಗೆ ಧನ್ಯವಾದ ಅರ್ಪಿಸಿದರು.

ದೂರಿನಲ್ಲಿ ರೈಲ್ವೆ ಕಾಯ್ದೆಯ ಸೆಕ್ಷನ್ 147,145,153 ಮತ್ತು ಭಾರತೀಯ ನ್ಯಾಯ ಸಂಹಿತೆಯ ನಿರ್ದಿಷ್ಟ ವಿಭಾಗಗಳ ಅಡಿಯಲ್ಲಿ ಉಲ್ಲಂಘನೆಗಳನ್ನು ಉಲ್ಲೇಖಿಸಲಾಗಿದೆ, ಇದು ಸಾರ್ವಜನಿಕ ಕಿಡಿಗೇಡಿತನ ಮತ್ತು ಸಂಭಾವ್ಯ ರೈಲು ಹಳಿತಪ್ಪುವಿಕೆಯ ಅಪಾಯವನ್ನು ಎತ್ತಿ ತೋರಿಸುತ್ತದೆ.

ಮತ್ತಷ್ಟು ಓದಿ: Video: ರೈಲ್ವೆ ಹಳಿಯ ಮೇಲೆ ಸೈಕಲ್‌, ಸಿಲಿಂಡರ್ ಇಟ್ಟು ವಿಡಿಯೋ ಮಾಡಿದ ಯೂಟ್ಯೂಬರ್, ಲೈಕ್ಸ್‌, ವೀವ್ಸ್‌ಗಾಗಿ ಜನರ ಜೀವದ ಜತೆ ಚೆಲ್ಲಾಟ

ಯೂಟ್ಯೂಬರ್ ತನ್ನ ಚಾನೆಲ್‌ನಲ್ಲಿ ರೈಲ್ವೇ ಹಳಿಗಳ ಅನೇಕ ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋಗಳು ಎಲ್ಲರನ್ನು ಬೆಚ್ಚಿ ಬೀಳುವಂತೆ ಮಾಡಿದೆ.

ರೈಲು ಹಳಿ ಮೇಲೆ ಕಲ್ಲು, ಸೈಕಲ್, ಸಿಲಿಂಡರ್, ಇಟ್ಟಿಗೆ, ಮೊಬೈಲ್, ಸಾಬೂನು, ಮೋಟಾರ್, ಸುತ್ತಿಗೆ, ಕಬ್ಬಿಣ ಇತ್ಯಾದಿಗಳನ್ನು ಇಟ್ಟು ಹಲವು ವಿಡಿಯೋಗಳನ್ನು ಬಾಲಕ ಮಾಡಿದ್ದಾನೆ.

ರೈಲ್ವೆ ಹಳಿ ಮೇಲಿರುವ ಈ ವಸ್ತುಗಳ ಮೇಲೆ ರೈಲು ಹಾದುಹೋದರೆ ಏನಾಗುತ್ತೆ ಎಂದು ತೋರಿಸುವ ವಿಡಿಯೋ ಇದಾಗಿದೆ. ಈ ಯೂಟ್ಯೂಬರ್‌ಗೆ ರೈಲ್ವೆ ಹಳಿಯಲ್ಲಿ ಯಾವುದೇ ಅಪಘಾತ ಸಂಭವಿಸಿದರೆ, ರೈಲಿನೊಳಗೆ ಕುಳಿತಿರುವ ಸಾವಿರಾರು ಜನರ ಜೀವಕ್ಕೆ ಅಪಾಯವಿದೆ ಎಂದು ತಿಳಿದಿಲ್ಲವೇ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ