AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಪ್ರದೇಶ: ಕಸದ ಗಾಡಿಯಲ್ಲಿ ಯೋಗಿ ಆದಿತ್ಯನಾಥ, ಪ್ರಧಾನಿ ಮೋದಿ ಫೋಟೊ; ಪೌರಕಾರ್ಮಿಕ ವಜಾ

ಕಸದ ಗಾಡಿಯಲ್ಲಿ ಮೋದಿ, ಯೋಗಿ ಫೋಟೊ ಇರಿಸಿದ್ದನ್ನು ಯುವಕರ ಗುಂಪೊಂದು ಪ್ರಶ್ನಿಸಿದಾಗ, ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಅದು ಕಸದ ಜತೆ ಬಿದ್ದಿತ್ತು. ಅದನ್ನು ಗಾಡಿಯಲ್ಲಿ ಎತ್ತಿಟ್ಟೆ ಎಂದು ಪೌರ ಕಾರ್ಮಿಕ ಹೇಳಿದ್ದಾರೆ.

ಉತ್ತರಪ್ರದೇಶ: ಕಸದ ಗಾಡಿಯಲ್ಲಿ ಯೋಗಿ ಆದಿತ್ಯನಾಥ, ಪ್ರಧಾನಿ ಮೋದಿ ಫೋಟೊ; ಪೌರಕಾರ್ಮಿಕ ವಜಾ
ಕಸದ ಗಾಡಿಯಲ್ಲಿ ಮೋದಿ, ಯೋಗಿ ಫೋಟೊ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 18, 2022 | 12:35 PM

Share

ದೆಹಲಿ: ಉತ್ತರ ಪ್ರದೇಶದ (Uttar Pradesh) ಮಥುರಾದಲ್ಲಿ (Mathura) ಪೌರ ಕಾರ್ಮಿಕರೊಬ್ಬರು ಕಸದ ಗಾಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (Yogi Adityanath) ಅವರ ಫೋಟೊ ಇರಿಸಿ ಗಾಡಿ ತಳ್ಳಿಕೊಂಡು ಹೋಗುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಮುನ್ಸಿಪಲ್ ಕಾರ್ಪೊರೇಷನ್ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಕಸದ ಗಾಡಿಯಲ್ಲಿ ಮೋದಿ, ಯೋಗಿ ಫೋಟೊ ಇರಿಸಿದ್ದನ್ನು ಯುವಕರ ಗುಂಪೊಂದು ಪ್ರಶ್ನಿಸಿದಾಗ, ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಅದು ಕಸದ ಜತೆ ಬಿದ್ದಿತ್ತು. ಅದನ್ನು ಗಾಡಿಯಲ್ಲಿ ಎತ್ತಿಟ್ಟೆ ಎಂದು ಪೌರ ಕಾರ್ಮಿಕ ಹೇಳಿದ್ದಾರೆ. ರಾಜಸ್ಥಾನದ ಆಲ್ವಾರ್​​ನಿಂದ ಬಂದ ಭಕ್ತರ ಗುಂಪೊಂದು ಪೌರ ಕಾರ್ಮಿಕ ಗಾಡಿಯಲ್ಲಿ ಈ ರೀತಿ ಫೋಟೊ ಇರಿಸಿದ್ದರ ವಿಡಿಯೊ ತೆಗೆದು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿದ್ದಾರೆ. ಗಾಡಿಯಲ್ಲಿದ್ದ ಫೋಟೊಗಳನ್ನು ತೆಗೆದಿಡುವಾಗ ಎಪಿಜೆ ಅಬ್ದುಲ್ ಕಲಾಂ ಅವರ ಫೋಟೊ ಕೂಡಾ ಇದೆ ಎಂದು ಆ ವ್ಯಕ್ತಿ ಹೇಳಿದ್ದಾರೆ. ಯುವಕರ ಗುಂಪು ಆ ಫೋಟೊವನ್ನು ತೊಳೆಯುತ್ತಿರುವುದು ವಿಡಿಯೊದಲ್ಲಿದೆ. ನಾವು ಈ ಫೋಟೊವನ್ನು ಆಲ್ವಾರ್​​ಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಮೋದಿಜೀ ಮತ್ತು ಯೋಗೀಜಿ ಈ ದೇಶದ ಆತ್ಮಗಳು ಎಂದು ಅವರು ಹೇಳಿದ್ದಾರೆ.

ವೈರಲ್ ವಿಡಿಯೊ ಬಗ್ಗೆ ಹಲವಾರು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ. ಇದು ತಪ್ಪು, ಮುಖ್ಯಮಂತ್ರಿ ಎಂಬುದು ಸಾಂವಿಧಾನಿಕ ಹುದ್ದೆ ನಾವು ಎಲ್ಲರನ್ನೂ ಗೌರವಿಸಲೇಬೇಕು ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಫೋಟೊ ಯಾರದ್ದಾದರೇನೂ ಅದು ಹಳೆಯದ್ದಾಗುತ್ತದೆ, ಕೆಲವೊಮ್ಮೆ ಹಾಳಾಗುತ್ತದೆ. ಹೀಗಿರುವಾಗ ಇಂಥಾ ಫೋಟೊಗಳನ್ನು ಬಿಸಾಡುವುದಕ್ಕೆ ಏನಾದರೂ ಪ್ರಕ್ರಿಯೆ ಇದೆಯೇ ಎಂದು ಇನ್ನೊಬ್ಬ ಬಳಕೆದಾರರು ಕೇಳಿದ್ದಾರೆ.

ಆ ವ್ಯಕ್ತಿ ಫೋಟೊಗಳನ್ನು ಅರಿವಿಲ್ಲದೆಯೇ ಗಾಡಿಯಲ್ಲಿರಿಸಿದ್ದು. ಆತನ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ತಕ್ಷಣಕ್ಕೆ ಜಾರಿಗೆ ಬರುವಂತೆ ಆತನನ್ನು ಕೆಲಸದಿಂದ ವಜಾ ಮಾಡಲಾಗದೆ ಎಂದು ನಗರ್ ನಿಗಮ್ ಮಥುರಾ-ವೃಂದಾವನ್ ಹೆಚ್ಚುವರಿ ಮುನ್ಸಿಪಲ್ ಕಮಿಷನರ್ ಸತ್ಯೇಂದ್ರ ಕುಮಾರ್ ತಿವಾರಿ ಟ್ವೀಟ್ ಮಾಡಿದ್ದಾರೆ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ