AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಪ್ರದೇಶ: ಕಸದ ಗಾಡಿಯಲ್ಲಿ ಯೋಗಿ ಆದಿತ್ಯನಾಥ, ಪ್ರಧಾನಿ ಮೋದಿ ಫೋಟೊ; ಪೌರಕಾರ್ಮಿಕ ವಜಾ

ಕಸದ ಗಾಡಿಯಲ್ಲಿ ಮೋದಿ, ಯೋಗಿ ಫೋಟೊ ಇರಿಸಿದ್ದನ್ನು ಯುವಕರ ಗುಂಪೊಂದು ಪ್ರಶ್ನಿಸಿದಾಗ, ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಅದು ಕಸದ ಜತೆ ಬಿದ್ದಿತ್ತು. ಅದನ್ನು ಗಾಡಿಯಲ್ಲಿ ಎತ್ತಿಟ್ಟೆ ಎಂದು ಪೌರ ಕಾರ್ಮಿಕ ಹೇಳಿದ್ದಾರೆ.

ಉತ್ತರಪ್ರದೇಶ: ಕಸದ ಗಾಡಿಯಲ್ಲಿ ಯೋಗಿ ಆದಿತ್ಯನಾಥ, ಪ್ರಧಾನಿ ಮೋದಿ ಫೋಟೊ; ಪೌರಕಾರ್ಮಿಕ ವಜಾ
ಕಸದ ಗಾಡಿಯಲ್ಲಿ ಮೋದಿ, ಯೋಗಿ ಫೋಟೊ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 18, 2022 | 12:35 PM

ದೆಹಲಿ: ಉತ್ತರ ಪ್ರದೇಶದ (Uttar Pradesh) ಮಥುರಾದಲ್ಲಿ (Mathura) ಪೌರ ಕಾರ್ಮಿಕರೊಬ್ಬರು ಕಸದ ಗಾಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (Yogi Adityanath) ಅವರ ಫೋಟೊ ಇರಿಸಿ ಗಾಡಿ ತಳ್ಳಿಕೊಂಡು ಹೋಗುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಮುನ್ಸಿಪಲ್ ಕಾರ್ಪೊರೇಷನ್ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಕಸದ ಗಾಡಿಯಲ್ಲಿ ಮೋದಿ, ಯೋಗಿ ಫೋಟೊ ಇರಿಸಿದ್ದನ್ನು ಯುವಕರ ಗುಂಪೊಂದು ಪ್ರಶ್ನಿಸಿದಾಗ, ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಅದು ಕಸದ ಜತೆ ಬಿದ್ದಿತ್ತು. ಅದನ್ನು ಗಾಡಿಯಲ್ಲಿ ಎತ್ತಿಟ್ಟೆ ಎಂದು ಪೌರ ಕಾರ್ಮಿಕ ಹೇಳಿದ್ದಾರೆ. ರಾಜಸ್ಥಾನದ ಆಲ್ವಾರ್​​ನಿಂದ ಬಂದ ಭಕ್ತರ ಗುಂಪೊಂದು ಪೌರ ಕಾರ್ಮಿಕ ಗಾಡಿಯಲ್ಲಿ ಈ ರೀತಿ ಫೋಟೊ ಇರಿಸಿದ್ದರ ವಿಡಿಯೊ ತೆಗೆದು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿದ್ದಾರೆ. ಗಾಡಿಯಲ್ಲಿದ್ದ ಫೋಟೊಗಳನ್ನು ತೆಗೆದಿಡುವಾಗ ಎಪಿಜೆ ಅಬ್ದುಲ್ ಕಲಾಂ ಅವರ ಫೋಟೊ ಕೂಡಾ ಇದೆ ಎಂದು ಆ ವ್ಯಕ್ತಿ ಹೇಳಿದ್ದಾರೆ. ಯುವಕರ ಗುಂಪು ಆ ಫೋಟೊವನ್ನು ತೊಳೆಯುತ್ತಿರುವುದು ವಿಡಿಯೊದಲ್ಲಿದೆ. ನಾವು ಈ ಫೋಟೊವನ್ನು ಆಲ್ವಾರ್​​ಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಮೋದಿಜೀ ಮತ್ತು ಯೋಗೀಜಿ ಈ ದೇಶದ ಆತ್ಮಗಳು ಎಂದು ಅವರು ಹೇಳಿದ್ದಾರೆ.

ವೈರಲ್ ವಿಡಿಯೊ ಬಗ್ಗೆ ಹಲವಾರು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ. ಇದು ತಪ್ಪು, ಮುಖ್ಯಮಂತ್ರಿ ಎಂಬುದು ಸಾಂವಿಧಾನಿಕ ಹುದ್ದೆ ನಾವು ಎಲ್ಲರನ್ನೂ ಗೌರವಿಸಲೇಬೇಕು ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಫೋಟೊ ಯಾರದ್ದಾದರೇನೂ ಅದು ಹಳೆಯದ್ದಾಗುತ್ತದೆ, ಕೆಲವೊಮ್ಮೆ ಹಾಳಾಗುತ್ತದೆ. ಹೀಗಿರುವಾಗ ಇಂಥಾ ಫೋಟೊಗಳನ್ನು ಬಿಸಾಡುವುದಕ್ಕೆ ಏನಾದರೂ ಪ್ರಕ್ರಿಯೆ ಇದೆಯೇ ಎಂದು ಇನ್ನೊಬ್ಬ ಬಳಕೆದಾರರು ಕೇಳಿದ್ದಾರೆ.

ಆ ವ್ಯಕ್ತಿ ಫೋಟೊಗಳನ್ನು ಅರಿವಿಲ್ಲದೆಯೇ ಗಾಡಿಯಲ್ಲಿರಿಸಿದ್ದು. ಆತನ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ತಕ್ಷಣಕ್ಕೆ ಜಾರಿಗೆ ಬರುವಂತೆ ಆತನನ್ನು ಕೆಲಸದಿಂದ ವಜಾ ಮಾಡಲಾಗದೆ ಎಂದು ನಗರ್ ನಿಗಮ್ ಮಥುರಾ-ವೃಂದಾವನ್ ಹೆಚ್ಚುವರಿ ಮುನ್ಸಿಪಲ್ ಕಮಿಷನರ್ ಸತ್ಯೇಂದ್ರ ಕುಮಾರ್ ತಿವಾರಿ ಟ್ವೀಟ್ ಮಾಡಿದ್ದಾರೆ.

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ