AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನೊಂದಿಗೆ ಮದುವೆ ಮಾಡಿಸಿ ಪಶ್ಚಾತಾಪ ಪಟ್ಟು ಮತ್ತೆ ಮನೆಗೆ ಪತ್ನಿಯ ಕರೆತಂದ ಪತಿ

ಇತ್ತೀಚೆಗಷ್ಟೇ ಬಬ್ಲೂ ಎಂಬ ವ್ಯಕ್ತಿ ತನ್ನ ಪತ್ನಿಯನ್ನು ಆಕೆಯ ಪ್ರಿಯರಕನಿಗೆ ಕೊಟ್ಟು ಮದುವೆ ಮಾಡಿದ್ದರು, ಆದರೆ ಮೂರೇ ದಿನಕ್ಕೆ ಅವರ ಮನೆಗೆ ಹೋಗಿ ಪತ್ನಿಯನ್ನು ವಾಪಸ್ ಕರೆತಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇದೀಗ ಪಶ್ಚಾತಾಪ ಪಟ್ಟು ಪತ್ನಿಯನ್ನು ಮತ್ತೆ ಮನೆಗೆ ಕರೆದುಕೊಂಡು ಬಂದಿದ್ದಾನೆ. ಈಗಾಗಲೇ ವೈರಲ್ ಆಗಿದ್ದ ಈ ಘಟನೆ, ಪತ್ನಿ ತನ್ನ ಮೊದಲ ಗಂಡನ ಬಳಿಗೆ ಮರಳಿದಾಗ ಮತ್ತೊಂದು ತಿರುವು ಪಡೆದುಕೊಂಡಿತು.

ಪ್ರಿಯಕರನೊಂದಿಗೆ ಮದುವೆ ಮಾಡಿಸಿ ಪಶ್ಚಾತಾಪ ಪಟ್ಟು ಮತ್ತೆ ಮನೆಗೆ ಪತ್ನಿಯ ಕರೆತಂದ ಪತಿ
ಬಬ್ಲುImage Credit source: India Today
Follow us
ನಯನಾ ರಾಜೀವ್
|

Updated on:Apr 02, 2025 | 9:14 AM

ಉತ್ತರ ಪ್ರದೇಶ, ಏಪ್ರಿಲ್ 02: ನಾನು ಮಕ್ಕಳನ್ನು ನೋಡಿಕೊಳ್ಳುತ್ತೇನೆ ನೀನು ಪ್ರಿಯಕರನೊಂದಿಗೆ ಮದುವೆ(Marriage)ಯಾಗಿ ಸುಖವಾಗಿರು ಎಂದು ಪತ್ನಿಯನ್ನು ಬೇರೊಬ್ಬನಿಗೆ ಕೊಟ್ಟು ಮದುವೆ ಮಾಡಿಸಿದ್ದ ಪತಿ, ಇದೀಗ ಪಶ್ಚಾತಾಪ ಪಟ್ಟು ಪತ್ನಿಯನ್ನು ಮತ್ತೆ ಮನೆಗೆ ಕರೆದುಕೊಂಡು ಬಂದಿದ್ದಾನೆ. ಈಗಾಗಲೇ ವೈರಲ್ ಆಗಿದ್ದ ಈ ಘಟನೆ, ಪತ್ನಿ ತನ್ನ ಮೊದಲ ಗಂಡನ ಬಳಿಗೆ ಮರಳಿದಾಗ ಮತ್ತೊಂದು ತಿರುವು ಪಡೆದುಕೊಂಡಿತು. ಪತ್ನಿ ರಾಧಿಕಾ ವಿಕಾಸ್ ಜತೆ ಸಂಬಂಧ ಹೊಂದಿದ್ದಾಳೆಂದು ಬಬ್ಲೂಗೆ ತಿಳಿದತ್ತು. ಜಗಳ ಮಾಡುವ ಮೊದಲು ಪತ್ನಿಯನ್ನು ಆಕೆಯ ಪ್ರಿಯಕರನಿಗೆ ಕೊಟ್ಟು ಮದುವೆ ಮಾಡಲು ನಿರ್ಧರಿಸಿದ್ದ.

ಮಾರ್ಚ್​ 25ರಂದು ದೇವಾಲಯದಲ್ಲಿ ವಿಕಾಸ್ ಜತೆ ರಾಧಿಕಾ ವಿವಾಹವನ್ನು ನೆರವೇರಿಸಿದ್ದ. ಇತ್ತೀಚೆಗೆ ಪತ್ನಿ ಪ್ರಯಕರನ ಜತೆ ಸೇರಿಕೊಂಡು ಗಂಡನನ್ನು ಕೊಲೆ ಮಾಡಿರುವ ಸಾಕಷ್ಟು ಘಟನೆಗಳು ನಡೆದಿವೆ, ಅದರಿಂದ ನಾನು ಭಯಗೊಂಡಿದ್ದೆ ಎಂದು ಬಬ್ಲೂ ಹೇಳಿದ್ದಾನೆ.

ನಾನು ಬದುಕಬೇಕೆಂದು ನನ್ನ ಹೆಂಡತಿಯನ್ನು ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಲು ನಿರ್ಧರಿಸಿದೆ. ಆದರೆ ಮದುವೆಯಾಗಿ ಕೆಲವೇ ದಿನಗಳಲ್ಲಿ ಮಾರ್ಚ್​ 28ರಂದು ಬಬ್ಲೂ ವಿಕಾಸ್ ಮನೆಗೆ ಹೋಗಿ ರಾಧಿಕಾರನ್ನು ವಾಪಸ್ ಕರೆದುಕೊಂಡು ಬಂದಿದ್ದಾರೆ.

ಇದನ್ನೂ ಓದಿ
Image
ಬೀದಿ ನಾಯಿಯನ್ನು ಮುದ್ದಾಡಲು ಹೋಗಿ ಫಜೀತಿಗೆ ಸಿಲುಕಿದ ವಾಚ್‌ಮ್ಯಾನ್
Image
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
Image
ಬೆಡ್ ಕೆಳಗೆ ಗುಮ್ಮನಿದ್ದಾನೆ ಎಂದ ಮಗು, ಮಂಚದ ಕೆಳಗೆ ನೋಡಿ ಬೆಚ್ಚಿದ ಶಿಕ್ಷಕಿ
Image
ಪತ್ನಿ ಇಷ್ಟ ಪಟ್ಟವನ ಜತೆ ಮದುವೆ ಮಾಡಿಸಿದ ಗಂಡ

ಏಳು ಮತ್ತು ಎರಡು ವರ್ಷದ ತಮ್ಮ ಇಬ್ಬರು ಮಕ್ಕಳನ್ನು ಒಬ್ಬಂಟಿಯಾಗಿ ನೋಡಿಕೊಳ್ಳಲು ಕಷ್ಟಪಡುತ್ತಿರುವುದಾಗಿ ಬಬ್ಲೂ ಹೇಳಿಕೊಂಡಿದ್ದರು ಎನ್ನಲಾಗಿದೆ. ನಂತರ ವಿಕಾಸ್ ಮತ್ತು ಅವರ ಕುಟುಂಬವು ರಾಧಿಕಾಗೆ ಬಬ್ಲೂ ಜೊತೆ ಮರಳಲು ಅವಕಾಶ ಮಾಡಿಕೊಟ್ಟಿತು.

ಮತ್ತಷ್ಟು ಓದಿ:  ಮಕ್ಕಳನ್ನು ನಾನು ನೋಡ್ಕೋತೀನಿ, ನೀನು ಇಷ್ಟಪಟ್ಟವನ ಜತೆ ಖುಷಿಯಾಗಿರು ಎಂದು ಪತ್ನಿಗೆ ಮದುವೆ ಮಾಡಿಸಿದ ಗಂಡ

ಅವಳನ್ನು ಬಲವಂತವಾಗಿ ಮದುವೆ ಮಾಡಿಕೊಡಲಾಗಿತ್ತು, ಮದುವೆಯಾದ ಕೆಲವೇ ದಿನಗಳಲ್ಲಿ ಆಕೆ ನಿಷ್ಕಳಂಕಳು ಎಂದು ನನಗೆ ತಿಳಿಯಿತು. ನಾನು ಆಕೆಯ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ. ನಾನು ಅವಳೊಂದಿಗೆ ಶಾಂತಿಯುತವಾಗಿ ಬದುಕಲು ಬಯಸುತ್ತೇನೆ ಎಂದು ಬಬ್ಲೂ ಹೇಳಿದ್ದಾನೆ.

ವಿಕಾಸ್ ಅವರ ತಾಯಿ ಗಾಯತ್ರಿ ಅವರ ಪ್ರಕಾರ, ಅವರ ಕುಟುಂಬವು ಮೊದಲಿನಿಂದಲೂ ಮದುವೆಗೆ ವಿರೋಧಿಸುತ್ತಿತ್ತು ಮತ್ತು ಬಬ್ಲೂ ತನ್ನ ಮಕ್ಕಳನ್ನು ಕರೆತಂದಾಗ, ರಾಧಿಕಾ ಮತ್ತೆ ಅವನ ಬಳಿಗೆ ಹೋಗುವುದನ್ನು ತಡೆಯಲು ಅವರಿಗೆ ಸಾಧ್ಯವಾಗಲಿಲ್ಲ.

ರಾಧಿಕಾ ಮದುವೆಯಾಗಿ ಮೂರು ದಿನಕ್ಕೇ ಹಿಂದಿರುಗಿದ್ದಾಳೆ. ಅವನು ಮಕ್ಕಳನ್ನು ಒಬ್ಬಂಟಿಯಾಗಿ ನೋಡಿಕೊಳ್ಳಲು ಸಾಧ್ಯವಿಲ್ಲ ಮತ್ತು ತನ್ನ ತಪ್ಪಿನ ಅರಿವಾಗಿದೆ ಎಂದು ಹೇಳಿದ್ದ, ಮಕ್ಕಳನ್ನು ನೋಡಿದಾಗ ಕಳುಹಿಸುವುದಿಲ್ಲ ಎಂದು ಹೇಳಲು ಸಾಧ್ಯವಾಗಲಿಲ್ಲ ಎಂದಿದ್ದಾರೆ. ರಾಧಿಕಾ ಬಬ್ಲೂ ಜೊತೆ ಜಿಲ್ಲೆಯ ದೂರ ಸ್ಥಳದಲ್ಲಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿದೆ, ವಿಕಾಸ್ ಬೇರೆಡೆ ಕೆಲಸ ಹುಡುಕಲು ಮನೆ ಬಿಟ್ಟಿದ್ದಾನೆ ಎನ್ನಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:07 am, Wed, 2 April 25

ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ