AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಐವರು ಮಕ್ಕಳಿದ್ರೂ 1.5 ಕೋಟಿ ರೂ. ಮೊತ್ತದ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಬರೆದ ವೃದ್ಧ

85 ವರ್ಷದ ವೃದ್ಧರೊಬ್ಬರು ತಮಗೆ ಐವರು ಮಕ್ಕಳಿದ್ದರೂ 1.5 ಕೋಟಿ ಬೆಲೆ ಬಾಳುವ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಬರೆದಿದ್ದಾರೆ. ನಾಥು ಸಿಂಗ್ ಅವರ ತಮ್ಮ ದೇಹವನ್ನು ವೈದ್ಯಕೀಯ ಕಾಲೇಜಿಗೆ ದಾನ ಮಾಡಿದ್ದಾರೆ ಮತ್ತು ಮಗ ಹಾಗೂ ನಾಲ್ವರು ಪುತ್ರಿಯರನ್ನು ಅವರ ಅಂತಿಮ ವಿಧಿಗಳಲ್ಲಿ ಪಾಲ್ಗೊಳ್ಳದಿರುವಂತೆ ತಿಳಿಸಿದ್ದಾರೆ.

Uttar Pradesh: ಐವರು ಮಕ್ಕಳಿದ್ರೂ 1.5 ಕೋಟಿ ರೂ. ಮೊತ್ತದ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಬರೆದ ವೃದ್ಧ
ನಾಥು ಸಿಂಗ್Image Credit source: NDTV
ನಯನಾ ರಾಜೀವ್
|

Updated on:Mar 06, 2023 | 3:04 PM

Share

85 ವರ್ಷದ ವೃದ್ಧರೊಬ್ಬರು ತಮಗೆ ಐವರು ಮಕ್ಕಳಿದ್ದರೂ 1.5 ಕೋಟಿ ಬೆಲೆ ಬಾಳುವ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಬರೆದಿದ್ದಾರೆ. ನಾಥು ಸಿಂಗ್ ಅವರ ತಮ್ಮ ದೇಹವನ್ನು ವೈದ್ಯಕೀಯ ಕಾಲೇಜಿಗೆ ದಾನ ಮಾಡಿದ್ದಾರೆ ಮತ್ತು ಮಗ ಹಾಗೂ ನಾಲ್ವರು ಪುತ್ರಿಯರನ್ನು ಅವರ ಅಂತಿಮ ವಿಧಿಗಳಲ್ಲಿ ಪಾಲ್ಗೊಳ್ಳದಿರುವಂತೆ ತಿಳಿಸಿದ್ದಾರೆ. ನಾಥು ಸಿಂಗ್ ಮುಜಾಫರ್​ನಗರದ ನಿವಾಸಿಯಾಗಿದ್ದಾರೆ. ಅವರು 1.5 ಕೋಟಿ ಮೌಲ್ಯದ ಮನೆ ಹಾಗೂ ಜಮೀನು ಹೊಂದಿದ್ದಾರೆ. ಅವರಿಗೆ ಒಬ್ಬ ಮಗ ಇದ್ದು, ಅವರು ಶಾಲಾ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ನಾಲ್ವರು ಹೆಣ್ಣುಮಕ್ಕಳಿದ್ದು ಎಲ್ಲರಿಗೂ ವಿವಾಹವಾಗಿದೆ.

ಪತ್ನಿಯ ಸಾವಿನ ಬಳಿಕ ವೃದ್ಧರು ಒಬ್ಬರೇ ಜೀವನ ನಡೆಸುತ್ತಿದ್ದರು, ಏಳು ತಿಂಗಳುಗಳ ಕಾಲ ತಮ್ಮ ಗ್ರಾಮದ ವೃದ್ಧಾಶ್ರಮದಲ್ಲಿದ್ದರು. ತಮ್ಮ ಕುಟುಂಬದ ಯಾರೂ ಅವರನ್ನು ಭೇಟಿಯಾಗಲು ಬಾರದ ಕಾರಣ ಅವರ ಮನಸ್ಸಿಗೆ ತುಂಬಾ ನೋವಾಗಿತ್ತು. ತನ್ನ ಆಸ್ತಿಯ ವಿಲ್ ಮಾಡಿ, ಅವರ ಮರಣ ನಂತರ ಆಸ್ಪತ್ರೆ ಅಥವಾ ಶಾಲೆಯನ್ನು ನಿರ್ಮಿಸುವಂತೆ ಕೇಳಿದ್ದಾರೆ.

ಈ ವಯಸ್ಸಿನಲ್ಲಿ ನಾನು ಮಗ ಹಾಗೂ ಸೊಸೆಯೊಂದಿಗೆ ವಾಸಿಸಬೇಕಿತ್ತು, ಆದರೆ ಅವರು ನನ್ನನ್ನು ಚೆನ್ನಾಗಿ ನಡೆಸಿಕೊಳ್ಳಲಿಲ್ಲ, ಹಾಗಾಗಿ ನನ್ನ ಆಸ್ತಿಯನ್ನು ಸರ್ಕಾರಕ್ಕೆ ನೀಡುವ ನಿರ್ಧಾರ ಮಾಡಿದೆ. ವೃದ್ಧಾಶ್ರಮಕ್ಕೆ ಬಂದು 7 ತಿಂಗಳಾದರೂ ಕುಟುಂಬದವರು ಯಾರೂ ಕೂಡ ಅವರು ಹೇಗಿದ್ದಾರೆ ಎಂದು ತಿಳಿಯಲು ವೃದ್ಧಾಶ್ರಮಕ್ಕೆ ಆಗಮಿಸಿಲ್ಲ ಎಂದು ಮ್ಯಾನೇಜರ್ ರೇಖಾ ಸಿಂಗ್ ಹೇಳಿದ್ದಾರೆ. ಆ ಪ್ರದೇಶದ ಸಬ್​ ರಿಜಿಸ್ಟ್ರಾರ್ ಅವರು ಸಿಂಗ್​ ಅವರ ಅಫಿಡವಿಟ್ ಅನ್ನು ಸ್ವೀಕರಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Mon, 6 March 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!