AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಲಿಂಗದ ಬಳಿ ಕೈ ತೊಳೆದ ಉತ್ತರ ಪ್ರದೇಶ ಸಚಿವ ಸತೀಶ್ ಶರ್ಮಾ, ಟೀಕೆಗಳ ಸುರಿಮಳೆ

ಉತ್ತರ ಪ್ರದೇಶ ಸಚಿವ ಸತೀಶ್ ಶರ್ಮಾ ಶಿವಲಿಂಗದ ಬಳಿಯೇ ಕೈತೊಳೆದಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು, ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿವೆ. ಬಾರಾಬಂಕಿಯ ರಾಮ್‌ಪುರದಲ್ಲಿರುವ ಪೌರಾಣಿಕ ಲೋಧೇಶ್ವರ ಮಹಾದೇವ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದಾಗ ಈ ಘಟನೆ ನಡೆದಿದೆ. ಈ ವಿಡಿಯೋ ಕುರಿತು ವಿರೋಧ ಪಕ್ಷದ ನಾಯಕರು ಬಿಜೆಪಿ ಹಾಗೂ ಸಚಿವ ಸತೀಶ್ ಶರ್ಮಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶಿವಲಿಂಗದ ಬಳಿ ಕೈ ತೊಳೆದ ಉತ್ತರ ಪ್ರದೇಶ ಸಚಿವ ಸತೀಶ್ ಶರ್ಮಾ, ಟೀಕೆಗಳ ಸುರಿಮಳೆ
ಸತೀಶ್ ಶರ್ಮಾ
ನಯನಾ ರಾಜೀವ್
|

Updated on: Sep 04, 2023 | 12:16 PM

Share

ಉತ್ತರ ಪ್ರದೇಶ ಸಚಿವ ಸತೀಶ್ ಶರ್ಮಾ ಶಿವಲಿಂಗದ ಬಳಿಯೇ ಕೈತೊಳೆದಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು, ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿವೆ. ಬಾರಾಬಂಕಿಯ ರಾಮ್‌ಪುರದಲ್ಲಿರುವ ಪೌರಾಣಿಕ ಲೋಧೇಶ್ವರ ಮಹಾದೇವ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದಾಗ ಈ ಘಟನೆ ನಡೆದಿದೆ. ಈ ವಿಡಿಯೋ ಕುರಿತು ವಿರೋಧ ಪಕ್ಷದ ನಾಯಕರು ಬಿಜೆಪಿ ಹಾಗೂ ಸಚಿವ ಸತೀಶ್ ಶರ್ಮಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮತ್ತೊಂದೆಡೆ, ಸಮಾಜವಾದಿ ಪಕ್ಷದ ನಾಯಕ ಸುನೀಲ್ ಸಿಂಗ್ ಯಾದವ್ ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನು ಬೇರೆ ಯಾವುದೇ ಜಾತಿಯ ನಾಯಕರು ಮಾಡಿದ್ದರೆ, ಬಿಜೆಪಿ ಅವರನ್ನು ಪಕ್ಷದಿಂದ ಹೊರಹಾಕುತ್ತಿತ್ತು, ಈ ವಿಚಾರದಲ್ಲಿ ಸಿಎಂ ಯೋಗಿ ಮೌನವೇಕೆ ಎಂದು ಪ್ರಶ್ನಿಸಿದರು.

ಸಚಿವ ಸತೀಶ್ ಶರ್ಮಾ ಶಿವಲಿಂಗದ ಬಳಿ ಕೈತೊಳೆದುಕೊಳ್ಳುತ್ತಿರುವ ವಿಡಿಯೋವನ್ನು ಶೇರ್ ಮಾಡುವ ಮೂಲಕ ಕಟುವಾಗಿ ವಾಗ್ದಾಳಿ ನಡೆಸಿದ ಎಸ್‌ಪಿ ನಾಯಕ ಸುನೀಲ್ ಸಿಂಗ್ ಯಾದವ್, ಲೋಧೇಶ್ವರ ಶಿವಲಿಂಗಕ್ಕೆ ಕೈತೊಳೆದುಕೊಳ್ಳುವ ಅನ್ಯಾಯದ ಸತೀಶ್ ಶರ್ಮಾ ಅವರು ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ರಾಜ್ಯ ಸಚಿವರಾಗಿದ್ದಾರೆ.

ವಾಸ್ತವವಾಗಿ, ಸಚಿವ ಸತೀಶ್ ಶರ್ಮಾ ಅವರು ಬಾರಾಬಂಕಿಯ ರಾಮ್‌ಪುರದಲ್ಲಿರುವ ಪೌರಾಣಿಕ ಲೋಧೇಶ್ವರ ಮಹಾದೇವ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿರುವಾಗ ನಡೆದಿರುವ ಘಟನೆಯ ವಿಇಡಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವೀಡಿಯೊದಲ್ಲಿ ಅವರು ಶಿವಲಿಂಗದ ಬಳಿ ಕೈ ತೊಳೆಯುತ್ತಿರುವುದನ್ನು ಕಾಣಬಹುದು. ಪಕ್ಕದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿತಿನ್ ಪ್ರಸಾದ್ ಕೂಡ ಕಾಣಿಸಿಕೊಂಡಿದ್ದಾರೆ.

ಮತ್ತಷ್ಟು ಓದಿ: ದೆಹಲಿಯಲ್ಲಿ ಜಿ20 ಶೃಂಗಸಭೆಗಾಗಿ ಸಿದ್ಧತೆ: ಧೌಲಾ ಕುವಾನ್‌ನಲ್ಲಿ ಶಿವಲಿಂಗ ಆಕಾರದ ಕಾರಂಜಿ ಸ್ಥಾಪಿಸಿದ್ದಕ್ಕೆ ಬಿಜೆಪಿ-ಎಎಪಿ ನಡುವೆ ವಾಕ್ಸಮರ

ಸತೀಶ್ ಶರ್ಮಾ ಅರ್ಚಕರಿಗೆ ಕೆಲವು ಸೂಚನೆಗಳನ್ನು ನೀಡುತ್ತಾರೆ. ಇದಾದ ನಂತರ, ಅರ್ಚಕರೊಬ್ಬರು ಒಂದು ಪಾತ್ರೆಯಲ್ಲಿ ನೀರು ಕೊಡುತ್ತಾರೆ ಮತ್ತು ಸತೀಶ್ ಶರ್ಮಾ ಶಿವಲಿಂಗದ ಬಳಿ ಕೈತೊಳೆಯುತ್ತಿರುವುದನ್ನು ಕಾಣಬಹುದು. ಈ ವಿಡಿಯೋಗೆ ಹಲವು ರೀತಿಯ ಪ್ರತಿಕ್ರಿಯೆಗಳು ಬರುತ್ತಿವೆ.

ಈ ವೀಡಿಯೋಗೆ ಕಾಂಗ್ರೆಸ್‌ನಿಂದಲೂ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರಿಗೆ ಶಿವಲಿಂಗದ ಬಳಿ ಕೈತೊಳೆದುಕೊಳ್ಳಬಾರದು ಎನ್ನುವ ಸಾಮಾನ್ಯ ಜ್ಞಾನವಿಲ್ಲ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!