AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಚಾರ್ಜ್​ಗೆ ಹಾಕುವಾಗ ವಿದ್ಯುತ್ ಪ್ರವಹಿಸಿ ಮೃತಪಟ್ಟ ಬಾಲಕ, ಆತನನ್ನು ರಕ್ಷಿಸಲು ಹೋದ ತಾಯಿಯೂ ಸಾವು

ಮೊಬೈಲ್​ ಚಾರ್ಜ್​ಗೆ ಇಡುವ ವೇಳೆ ವಿದ್ಯುತ್ ಪ್ರವಹಿಸಿ ಬಾಲಕನೊಬ್ಬ ಮೃತಪಟ್ಟಿದ್ದು, ಆತನ್ನು ರಕ್ಷಿಸಲು ಹೋದ ತಾಯಿಯು ಕೂಡ ಕೊನೆಯುಸಿರೆಳೆದಿದ್ದಾರೆ

ಮೊಬೈಲ್ ಚಾರ್ಜ್​ಗೆ ಹಾಕುವಾಗ ವಿದ್ಯುತ್ ಪ್ರವಹಿಸಿ ಮೃತಪಟ್ಟ ಬಾಲಕ, ಆತನನ್ನು ರಕ್ಷಿಸಲು ಹೋದ ತಾಯಿಯೂ ಸಾವು
ಮೊಬೈಲ್
Follow us
ನಯನಾ ರಾಜೀವ್
|

Updated on: Aug 09, 2023 | 1:14 PM

ಮೊಬೈಲ್​ ಚಾರ್ಜ್​ಗೆ ಇಡುವ ವೇಳೆ ವಿದ್ಯುತ್ ಪ್ರವಹಿಸಿ ಬಾಲಕನೊಬ್ಬ ಮೃತಪಟ್ಟಿದ್ದು, ಆತನ್ನು ರಕ್ಷಿಸಲು ಹೋದ ತಾಯಿಯು ಕೂಡ ಕೊನೆಯುಸಿರೆಳೆದಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಭವಾನಿಪುರ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ತಾಯಿ-ಮಗ ಸಾವನ್ನಪ್ಪಿರುವ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿ ಮಹೇಶ್ ಪಾಂಡೆ ತಿಳಿಸಿದ್ದಾರೆ.

ರೋಹಿತ್ ಜೈಸ್ವಾಲ್ (15) ರಾತ್ರಿ ತನ್ನ ತಾಯಿ ರಾಮ್ ಸಹೇಲಿಯೊಂದಿಗೆ ತಮ್ಮ ಮನೆಯೊಳಗೆ ಮಲಗಿದ್ದರು. ರಾತ್ರಿ ಎಚ್ಚರಗೊಂಡು ಮೋಬೈಲ್ ಚಾರ್ಜ್​ ಮಾಡಲು ಹೋಗಿದ್ದ, ಆ ವೇಳೆ ರೋಹಿತ್​ಗೆ ವಿದ್ಯುತ್ ಶಾಕ್ ಹೊಡೆದಿದೆ. ಇದನ್ನು ಕಂಡ ತಾಯಿ ಆತನನ್ನು ರಕ್ಷಿಸಲು ಯತ್ನಿಸಿದರಾದರೂ ಆಕೆಯೂ ಕೂಡ ವಿದ್ಯುತ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: Belagavi News: ಮೊಬೈಲ್​ ಚಾರ್ಜ್ ಹಾಕುವಾಗ ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು, ಅಯ್ಯೋ ವಿಧಿಯೇ!

ಕುಟುಂಬ ಸದಸ್ಯರು ಕೋಣೆಯಲ್ಲಿ ತಾಯಿ-ಮಗ ಇಬ್ಬರೂ ಶವವಾಗಿ ಬಿದ್ದಿರುವುದನ್ನು ಕಂಡರು. ಕುಟುಂಬದವರು ಶವಪರೀಕ್ಷೆಗೆ ನಿರಾಕರಿಸಿ ಅಂತಿಮ ವಿಧಿವಿಧಾನ ನೆರವೇರಿಸಿದರು.

ಮತ್ತೊಂದು ಘಟನೆ: ಮೊಬೈಲ್ ಚಾರ್ಜ್​ಗೆ ಹಾಕಿ ಸ್ವಿಚ್ ಆಫ್ ಮಾಡದಿದ್ದ ಚಾರ್ಜರ್​ನನ್ನು ಬಾಯಿಗೆ ಹಾಕಿ, ವಿದ್ಯುತ್ ಪ್ರವಹಿಸಿ 8 ತಿಂಗಳ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಾರವಾರದಲ್ಲಿ ಇತ್ತೀಚೆಗೆ ನಡೆದಿದೆ.

ಸಂತೋಷ ಹಾಗೂ ಸಂಜನಾ ದಂಪತಿಯ ಮಗು ದುರಂತ ಅಂತ್ಯಕಂಡಿದೆ. ಮನೆಯಲ್ಲಿ ಪೋಷಕರು ಮೊಬೈಲ್ ಚಾರ್ಜ್ ಹಾಕಿ ನಂತರ ಮೊಬೈಲ್‌ ತೆಗೆದುಕೊಂಡು ಸ್ವಿಚ್ ಆಫ್ ಮಾಡಿರಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ