AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಚಾರ್ಜ್​ಗೆ ಹಾಕುವಾಗ ವಿದ್ಯುತ್ ಪ್ರವಹಿಸಿ ಮೃತಪಟ್ಟ ಬಾಲಕ, ಆತನನ್ನು ರಕ್ಷಿಸಲು ಹೋದ ತಾಯಿಯೂ ಸಾವು

ಮೊಬೈಲ್​ ಚಾರ್ಜ್​ಗೆ ಇಡುವ ವೇಳೆ ವಿದ್ಯುತ್ ಪ್ರವಹಿಸಿ ಬಾಲಕನೊಬ್ಬ ಮೃತಪಟ್ಟಿದ್ದು, ಆತನ್ನು ರಕ್ಷಿಸಲು ಹೋದ ತಾಯಿಯು ಕೂಡ ಕೊನೆಯುಸಿರೆಳೆದಿದ್ದಾರೆ

ಮೊಬೈಲ್ ಚಾರ್ಜ್​ಗೆ ಹಾಕುವಾಗ ವಿದ್ಯುತ್ ಪ್ರವಹಿಸಿ ಮೃತಪಟ್ಟ ಬಾಲಕ, ಆತನನ್ನು ರಕ್ಷಿಸಲು ಹೋದ ತಾಯಿಯೂ ಸಾವು
ಮೊಬೈಲ್
ನಯನಾ ರಾಜೀವ್
|

Updated on: Aug 09, 2023 | 1:14 PM

Share

ಮೊಬೈಲ್​ ಚಾರ್ಜ್​ಗೆ ಇಡುವ ವೇಳೆ ವಿದ್ಯುತ್ ಪ್ರವಹಿಸಿ ಬಾಲಕನೊಬ್ಬ ಮೃತಪಟ್ಟಿದ್ದು, ಆತನ್ನು ರಕ್ಷಿಸಲು ಹೋದ ತಾಯಿಯು ಕೂಡ ಕೊನೆಯುಸಿರೆಳೆದಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಭವಾನಿಪುರ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ತಾಯಿ-ಮಗ ಸಾವನ್ನಪ್ಪಿರುವ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿ ಮಹೇಶ್ ಪಾಂಡೆ ತಿಳಿಸಿದ್ದಾರೆ.

ರೋಹಿತ್ ಜೈಸ್ವಾಲ್ (15) ರಾತ್ರಿ ತನ್ನ ತಾಯಿ ರಾಮ್ ಸಹೇಲಿಯೊಂದಿಗೆ ತಮ್ಮ ಮನೆಯೊಳಗೆ ಮಲಗಿದ್ದರು. ರಾತ್ರಿ ಎಚ್ಚರಗೊಂಡು ಮೋಬೈಲ್ ಚಾರ್ಜ್​ ಮಾಡಲು ಹೋಗಿದ್ದ, ಆ ವೇಳೆ ರೋಹಿತ್​ಗೆ ವಿದ್ಯುತ್ ಶಾಕ್ ಹೊಡೆದಿದೆ. ಇದನ್ನು ಕಂಡ ತಾಯಿ ಆತನನ್ನು ರಕ್ಷಿಸಲು ಯತ್ನಿಸಿದರಾದರೂ ಆಕೆಯೂ ಕೂಡ ವಿದ್ಯುತ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: Belagavi News: ಮೊಬೈಲ್​ ಚಾರ್ಜ್ ಹಾಕುವಾಗ ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು, ಅಯ್ಯೋ ವಿಧಿಯೇ!

ಕುಟುಂಬ ಸದಸ್ಯರು ಕೋಣೆಯಲ್ಲಿ ತಾಯಿ-ಮಗ ಇಬ್ಬರೂ ಶವವಾಗಿ ಬಿದ್ದಿರುವುದನ್ನು ಕಂಡರು. ಕುಟುಂಬದವರು ಶವಪರೀಕ್ಷೆಗೆ ನಿರಾಕರಿಸಿ ಅಂತಿಮ ವಿಧಿವಿಧಾನ ನೆರವೇರಿಸಿದರು.

ಮತ್ತೊಂದು ಘಟನೆ: ಮೊಬೈಲ್ ಚಾರ್ಜ್​ಗೆ ಹಾಕಿ ಸ್ವಿಚ್ ಆಫ್ ಮಾಡದಿದ್ದ ಚಾರ್ಜರ್​ನನ್ನು ಬಾಯಿಗೆ ಹಾಕಿ, ವಿದ್ಯುತ್ ಪ್ರವಹಿಸಿ 8 ತಿಂಗಳ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಾರವಾರದಲ್ಲಿ ಇತ್ತೀಚೆಗೆ ನಡೆದಿದೆ.

ಸಂತೋಷ ಹಾಗೂ ಸಂಜನಾ ದಂಪತಿಯ ಮಗು ದುರಂತ ಅಂತ್ಯಕಂಡಿದೆ. ಮನೆಯಲ್ಲಿ ಪೋಷಕರು ಮೊಬೈಲ್ ಚಾರ್ಜ್ ಹಾಕಿ ನಂತರ ಮೊಬೈಲ್‌ ತೆಗೆದುಕೊಂಡು ಸ್ವಿಚ್ ಆಫ್ ಮಾಡಿರಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ