AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಯುವಕನನ್ನು ಥಳಿಸಿ ಬಾಯಿಯೊಳಗೆ ಮೂತ್ರ ಮಾಡಿದ್ದ ವ್ಯಕ್ತಿಯ ಬಂಧನ

ಯುವಕನೊಬ್ಬನನ್ನು ಥಳಿಸಿ ಬಾಯಿಯೊಳಗೆ ಮೂತ್ರ ಮಾಡಿರುವ ಹೇಯ ಕೃತ್ಯ ಉತ್ತರ ಪ್ರದೇಶದ ಸೋನ್​ಭದ್ರಾ ಜಿಲ್ಲೆಯಲ್ಲಿ ನಡೆದಿದೆ. ವಿಡಿಯೋ ವೈರಲ್ ಆಗಿದ್ದು, ವ್ಯಕ್ತಿಯೊಬ್ಬ ಯುವಕನನ್ನು ಕೆಟ್ಟದಾಗಿ ಥಳಿಸಿ, ಮುಖ, ಬಾಯಿಗೆ ಮೂತ್ರ ವಿಸರ್ಜಿಸಿದ್ದಲ್ಲದೇ ಘಟನೆಯ ವಿಡಿಯೋವನ್ನು ರೆಕಾರ್ಡ್​ ಮಾಡಿಕೊಂಡಿದ್ದಾನೆ.

ಉತ್ತರ ಪ್ರದೇಶ: ಯುವಕನನ್ನು ಥಳಿಸಿ ಬಾಯಿಯೊಳಗೆ ಮೂತ್ರ ಮಾಡಿದ್ದ ವ್ಯಕ್ತಿಯ ಬಂಧನ
ಪೊಲೀಸ್
ನಯನಾ ರಾಜೀವ್
|

Updated on: Oct 03, 2024 | 9:40 AM

Share

ಯುವಕನೊಬ್ಬನನ್ನು ಥಳಿಸಿ ಬಾಯಿಯೊಳಗೆ ಮೂತ್ರ ಮಾಡಿರುವ ಹೇಯ ಕೃತ್ಯ ಉತ್ತರ ಪ್ರದೇಶದ ಸೋನ್​ಭದ್ರಾ ಜಿಲ್ಲೆಯಲ್ಲಿ ನಡೆದಿದೆ. ವಿಡಿಯೋ ವೈರಲ್ ಆಗಿದ್ದು, ವ್ಯಕ್ತಿಯೊಬ್ಬ ಯುವಕನನ್ನು ಕೆಟ್ಟದಾಗಿ ಥಳಿಸಿ, ಮುಖ, ಬಾಯಿಗೆ ಮೂತ್ರ ವಿಸರ್ಜಿಸಿದ್ದಲ್ಲದೇ ಘಟನೆಯ ವಿಡಿಯೋವನ್ನು ರೆಕಾರ್ಡ್​ ಮಾಡಿಕೊಂಡಿದ್ದಾನೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಮುಖ ಆರೋಪಿಯನ್ನೂ ಬಂಧಿಸಲಾಗಿದೆ. ಶಕ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯುವಕನನ್ನು 22 ವರ್ಷದ ಪವನ್ ಖಾರ್ವಾರ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಸೆಪ್ಟೆಂಬರ್ 26 ರ ಸಂಜೆ, ಅಂಕಿತ್ ಭಾರ್ತಿ ಎಂಬ ವ್ಯಕ್ತಿ ಮತ್ತು ಅವನ ಕೆಲವು ಸಹಚರರು ಪವನ್ ಮೇಲೆ ಹಲ್ಲೆ ನಡೆಸಿದ್ದಾರೆ.

ಮತ್ತಷ್ಟು ಓದಿ: ಹನುಮಾನ್ ದೇವಾಲಯದಲ್ಲಿ ಅರ್ಚಕನ ಕೊಲೆ; ಕಳ್ಳತನದ ದೂರು ನೀಡಿದ್ದರೂ ತಲೆಕೆಡಿಸಿಕೊಳ್ಳದ ಪೊಲೀಸರು

ಈ ವೇಳೆ ಬಾಯಿ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ರಕ್ತಸಿಕ್ತವಾಗಿದ್ದ ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಘಟನೆಯ ಬಳಿಕ ಯುವಕ ಸಹೋದರ ಶಿವಕುಮಾರ್ ಖಾರ್ವಾರ್ ಅವರೊಂದಿಗೆ ಮಧ್ಯಪ್ರದೇಶದ ಬೈದಾನ್‌ಗೆ ಹೋಗಿದ್ದರು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಲು ಸಿಂಗ್ ಹೇಳಿದ್ದಾರೆ.

ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದ ಕಾರಣ ಪೊಲೀಸರಿಗೆ ವಿಷಯವನ್ನು ತಿಳಿಸಲಿಲ್ಲ, ಘಟನೆ ನಡೆದ ಸುಮಾರು ಒಂದು ವಾರದ ನಂತರ, ಶಿವಕುಮಾರ್ ಎಕ್ಸ್​ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು.

ಸಿಎಂ, ಡಿಜಿಪಿ ಮತ್ತು ಇತರ ಅಧಿಕಾರಿಗಳನ್ನು ಟ್ಯಾಗ್ ಮಾಡಿ ಕ್ರಮಕ್ಕೆ ಒತ್ತಾಯಿಸಿದರು ಆಗ ಪೊಲೀಸರ ಗಮನಕ್ಕೆ ಈ ವಿಷಯ ಬಂದಿದೆ. ಆರೋಪಿ ಅಂಕಿತ್ ಭಾರ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ