AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಯುವಕನನ್ನು ಥಳಿಸಿ ಬಾಯಿಯೊಳಗೆ ಮೂತ್ರ ಮಾಡಿದ್ದ ವ್ಯಕ್ತಿಯ ಬಂಧನ

ಯುವಕನೊಬ್ಬನನ್ನು ಥಳಿಸಿ ಬಾಯಿಯೊಳಗೆ ಮೂತ್ರ ಮಾಡಿರುವ ಹೇಯ ಕೃತ್ಯ ಉತ್ತರ ಪ್ರದೇಶದ ಸೋನ್​ಭದ್ರಾ ಜಿಲ್ಲೆಯಲ್ಲಿ ನಡೆದಿದೆ. ವಿಡಿಯೋ ವೈರಲ್ ಆಗಿದ್ದು, ವ್ಯಕ್ತಿಯೊಬ್ಬ ಯುವಕನನ್ನು ಕೆಟ್ಟದಾಗಿ ಥಳಿಸಿ, ಮುಖ, ಬಾಯಿಗೆ ಮೂತ್ರ ವಿಸರ್ಜಿಸಿದ್ದಲ್ಲದೇ ಘಟನೆಯ ವಿಡಿಯೋವನ್ನು ರೆಕಾರ್ಡ್​ ಮಾಡಿಕೊಂಡಿದ್ದಾನೆ.

ಉತ್ತರ ಪ್ರದೇಶ: ಯುವಕನನ್ನು ಥಳಿಸಿ ಬಾಯಿಯೊಳಗೆ ಮೂತ್ರ ಮಾಡಿದ್ದ ವ್ಯಕ್ತಿಯ ಬಂಧನ
ಪೊಲೀಸ್
ನಯನಾ ರಾಜೀವ್
|

Updated on: Oct 03, 2024 | 9:40 AM

Share

ಯುವಕನೊಬ್ಬನನ್ನು ಥಳಿಸಿ ಬಾಯಿಯೊಳಗೆ ಮೂತ್ರ ಮಾಡಿರುವ ಹೇಯ ಕೃತ್ಯ ಉತ್ತರ ಪ್ರದೇಶದ ಸೋನ್​ಭದ್ರಾ ಜಿಲ್ಲೆಯಲ್ಲಿ ನಡೆದಿದೆ. ವಿಡಿಯೋ ವೈರಲ್ ಆಗಿದ್ದು, ವ್ಯಕ್ತಿಯೊಬ್ಬ ಯುವಕನನ್ನು ಕೆಟ್ಟದಾಗಿ ಥಳಿಸಿ, ಮುಖ, ಬಾಯಿಗೆ ಮೂತ್ರ ವಿಸರ್ಜಿಸಿದ್ದಲ್ಲದೇ ಘಟನೆಯ ವಿಡಿಯೋವನ್ನು ರೆಕಾರ್ಡ್​ ಮಾಡಿಕೊಂಡಿದ್ದಾನೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಮುಖ ಆರೋಪಿಯನ್ನೂ ಬಂಧಿಸಲಾಗಿದೆ. ಶಕ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯುವಕನನ್ನು 22 ವರ್ಷದ ಪವನ್ ಖಾರ್ವಾರ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಸೆಪ್ಟೆಂಬರ್ 26 ರ ಸಂಜೆ, ಅಂಕಿತ್ ಭಾರ್ತಿ ಎಂಬ ವ್ಯಕ್ತಿ ಮತ್ತು ಅವನ ಕೆಲವು ಸಹಚರರು ಪವನ್ ಮೇಲೆ ಹಲ್ಲೆ ನಡೆಸಿದ್ದಾರೆ.

ಮತ್ತಷ್ಟು ಓದಿ: ಹನುಮಾನ್ ದೇವಾಲಯದಲ್ಲಿ ಅರ್ಚಕನ ಕೊಲೆ; ಕಳ್ಳತನದ ದೂರು ನೀಡಿದ್ದರೂ ತಲೆಕೆಡಿಸಿಕೊಳ್ಳದ ಪೊಲೀಸರು

ಈ ವೇಳೆ ಬಾಯಿ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ರಕ್ತಸಿಕ್ತವಾಗಿದ್ದ ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಘಟನೆಯ ಬಳಿಕ ಯುವಕ ಸಹೋದರ ಶಿವಕುಮಾರ್ ಖಾರ್ವಾರ್ ಅವರೊಂದಿಗೆ ಮಧ್ಯಪ್ರದೇಶದ ಬೈದಾನ್‌ಗೆ ಹೋಗಿದ್ದರು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಲು ಸಿಂಗ್ ಹೇಳಿದ್ದಾರೆ.

ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದ ಕಾರಣ ಪೊಲೀಸರಿಗೆ ವಿಷಯವನ್ನು ತಿಳಿಸಲಿಲ್ಲ, ಘಟನೆ ನಡೆದ ಸುಮಾರು ಒಂದು ವಾರದ ನಂತರ, ಶಿವಕುಮಾರ್ ಎಕ್ಸ್​ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು.

ಸಿಎಂ, ಡಿಜಿಪಿ ಮತ್ತು ಇತರ ಅಧಿಕಾರಿಗಳನ್ನು ಟ್ಯಾಗ್ ಮಾಡಿ ಕ್ರಮಕ್ಕೆ ಒತ್ತಾಯಿಸಿದರು ಆಗ ಪೊಲೀಸರ ಗಮನಕ್ಕೆ ಈ ವಿಷಯ ಬಂದಿದೆ. ಆರೋಪಿ ಅಂಕಿತ್ ಭಾರ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!