AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

50ವರ್ಷದ ಮಹಿಳೆಗೆ ಒಟ್ಟಿಗೇ 2 ಡೋಸ್​ ಲಸಿಕೆ ನೀಡಿದ ನರ್ಸ್​; ಯಾಕೆ ಅಂತ ಕೇಳಿದ್ರೆ ತಿರುಗಿ ಬಯ್ಯೋದು ಬೇರೆ !

ವಿಷಯ ತಿಳಿದು ಸ್ಥಳಕ್ಕೆ ಬಂದ ಮಹಿಳೆಯ ಕುಟುಂಬದವರು ತುಂಬ ಗಲಾಟೆ ಮಾಡಿದ್ದಾರೆ. ನಂತರ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ, ಜಿಲ್ಲಾಧಿಕಾರಿಗೂ ವಿಷಯ ತಿಳಿಸಲಾಗಿದೆ. ಈ ಮಧ್ಯೆ ಕಮಲೇಶ್ವರಿ ಕೈಯಿ ಸ್ವಲ್ಪ ಪ್ರಮಾಣದಲ್ಲಿ ಊದಿಕೊಂಡಿದೆ.

50ವರ್ಷದ ಮಹಿಳೆಗೆ ಒಟ್ಟಿಗೇ 2 ಡೋಸ್​ ಲಸಿಕೆ ನೀಡಿದ ನರ್ಸ್​; ಯಾಕೆ ಅಂತ ಕೇಳಿದ್ರೆ ತಿರುಗಿ ಬಯ್ಯೋದು ಬೇರೆ !
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Apr 03, 2021 | 7:32 PM

Share

ಲಖನೌ: ಉತ್ತರ ಪ್ರದೇಶದಲ್ಲಿ ನರ್ಸ್​ ಒಬ್ಬರು ಮಹಿಳೆಗೆ ಲಸಿಕೆ ನೀಡುವಾಗ ಎಡವಟ್ಟು ಮಾಡಿಕೊಂಡಿದ್ದಾರೆ. ಫೋನ್​ನಲ್ಲಿ ಮಾತನಾಡುತ್ತ ಇತ್ತ ಮಹಿಳೆಗೆ ಎರಡು ಡೋಸ್​ ಲಸಿಕೆ ನೀಡಿದ್ದಾಳೆ. ಅಷ್ಟೇ ಅಲ್ಲ, ಎರಡು ಬಾರಿ ಇಂಜೆಕ್ಷನ್ ಯಾಕೆ ಕೊಟ್ಟಿರಿ ಎಂದು ಪ್ರಶ್ನಿಸಿದ್ದಕ್ಕೆ, ಆ ಮಹಿಳೆ ವಿರುದ್ಧವೇ ತಿರುಗಿಬಿದ್ದಿದ್ದಾಳೆ. ಘಟನೆ ನಡೆದದ್ದು ಕಾನ್ಪುರ ದೇಹಟ್​ ಜಿಲ್ಲೆಯ ಅಕ್ಬರ್​ಪುರ ಏರಿಯಾದಲ್ಲಿ ಎಂದು ಪಿಟಿಐ ವರದಿ ಮಾಡಿದೆ.

ಇಂದು ಕಮಲೇಶ್ ಕುಮಾರಿ(50) ಲಸಿಕೆ ಪಡೆಯಲು ಸ್ಥಳೀಯ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಹೋಗಿದ್ದರು. ನಿಯಮದ ಪ್ರಕಾರ ಅವರಿಗೆ ಇಂದು ಒಂದು ಡೋಸ್​ ಲಸಿಕೆ ಕೊಟ್ಟು, 28ದಿನಗಳ ಬಳಿಕೆ ಇನ್ನೊಂದು ಡೋಸ್​ ನೀಡಬೇಕಿತ್ತು. ಆದರೆ ಇವರಿಗೆ ಲಸಿಕೆ ನೀಡುತ್ತಿದ್ದ ನರ್ಸ್ ನಿರ್ಲಕ್ಷ್ಯದಿಂದ ಒಂದೇ ಬಾರಿಗೆ ಎರಡು ಡೋಸ್ ಪಡೆಯುವಂತಾಗಿದೆ. ಫೋನ್​ನಲ್ಲಿ ಮಾತನಾಡುತ್ತಿದ್ದ ನರ್ಸ್ ಎರಡು ಬಾರಿ ಇಂಜೆಕ್ಟ್​ ಮಾಡಿದ್ದಾಳೆ.

ಗಲಾಟೆ ಮಾಡಿದ ಕುಟುಂಬದವರು ವಿಷಯ ತಿಳಿದು ಸ್ಥಳಕ್ಕೆ ಬಂದ ಮಹಿಳೆಯ ಕುಟುಂಬದವರು ತುಂಬ ಗಲಾಟೆ ಮಾಡಿದ್ದಾರೆ. ನಂತರ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ, ಜಿಲ್ಲಾಧಿಕಾರಿಗೂ ವಿಷಯ ತಿಳಿಸಲಾಗಿದೆ. ಈ ಮಧ್ಯೆ ಕಮಲೇಶ್ವರಿ ಕೈಯಿ ಸ್ವಲ್ಪ ಪ್ರಮಾಣದಲ್ಲಿ ಊದಿಕೊಂಡಿದೆ ಎಂದು ಮನೆಯವರು ಆರೋಪ ಮಾಡಿದ್ದಾರೆ. ಅದನ್ನು ಬಿಟ್ಟರೆ ದೊಡ್ಡ ಪ್ರಮಾಣದಲ್ಲಿ ಯಾವುದೇ ರಿಯಾಕ್ಷನ್ ಆಗಿಲ್ಲ ಎಂದು ಹೇಳಲಾಗಿದೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ನರ್ಸ್ ಮಾಡಿದ್ದು ತಪ್ಪು. ಹಾಗಾಗಿ ಸ್ವಯಂ ಪ್ರೇರಿತವಾಗಿ ತನಿಖೆಗೆ ಎತ್ತಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿತೇಂದ್ರ ಪ್ರತಾಪ್​ ಸಿಂಗ್ ಹೇಳಿದ್ದಾರೆ. ವಾಸ್ತವ ವರದಿಯನ್ನು ಸಲ್ಲಿಸುವಂತೆ ಮುಖ್ಯ ವೈದ್ಯಾಧಿಕಾರಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: ಸಿಡಿ ಪ್ರಕರಣಕ್ಕೆ ರೋಚಕ ತಿರುವು; ಸಿಡಿ ಬಿಡುಗಡೆಗೂ ಮುನ್ನ ಯುವತಿ ಜತೆ ಹಣಕಾಸು ವ್ಯವಹಾರ ನಡೆಸಿದ್ದ ಮಾಜಿ ಸಚಿವ ಡಿ.ಸುಧಾಕರ್​?

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆಯನ್ನು ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ; ಯೋಜನೆಗಳು, ಅಸಮಾಧಾನ, ಸೋನಿಯಾ ಗಾಂಧಿ ಪತ್ರದ ಬಗ್ಗೆ ಚರ್ಚೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!