AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ರೋಗಿಯ ಕೂದಲು ಹಿಡಿದೆಳೆದು ಕೆಳಗೆ ತಳ್ಳಿದ ನರ್ಸ್​; ವೈರಲ್ ಆಯ್ತು ವಿಡಿಯೋ

ಸೀತಾಪುರ ಜಿಲ್ಲಾ ಆಸ್ಪತ್ರೆಯ ಮಹಿಳಾ ವಾರ್ಡ್‌ನಲ್ಲಿ ನಡೆದ ಗಲಾಟೆಯ ವಿಡಿಯೋ ಕ್ಲಿಪ್ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಒಬ್ಬಳು ನರ್ಸ್ ಮಹಿಳಾ ರೋಗಿಯ ಕೂದಲನ್ನು ಹಿಡಿದುಕೊಂಡು ಹಾಸಿಗೆಯ ಕಡೆಗೆ ತಳ್ಳುವುದನ್ನು ಕಾಣಬಹುದು.

ಮಹಿಳಾ ರೋಗಿಯ ಕೂದಲು ಹಿಡಿದೆಳೆದು ಕೆಳಗೆ ತಳ್ಳಿದ ನರ್ಸ್​; ವೈರಲ್ ಆಯ್ತು ವಿಡಿಯೋ
ರೋಗಿಯ ಕೂದಲು ಹಿಡಿದೆಳೆದ ನರ್ಸ್
TV9 Web
| Edited By: |

Updated on: Oct 28, 2022 | 5:22 PM

Share

ನವದೆಹಲಿ: ಉತ್ತರ ಪ್ರದೇಶದ (Uttar Pradesh) ಜಿಲ್ಲಾ ಆಸ್ಪತ್ರೆಯೊಂದರಲ್ಲಿ ನರ್ಸ್​ ಮಹಿಳೆಯೊಬ್ಬರ ಕೂದಲನ್ನು ಹಿಡಿದು ಹಾಸಿಗೆಯ ಮೇಲೆ ತಳ್ಳಿದ್ದಾರೆ. ಈ ಘಟನೆಯ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ (Social Media) ವೈರಲ್ ಆದ ನಂತರ, ಆಸ್ಪತ್ರೆಯ ಅಧಿಕಾರಿಗಳು ಆ ನರ್ಸ್​ ಮಾಡಿರುವ ಕೆಲಸವನ್ನು ಸಮರ್ಥಿಸಿಕೊಂಡಿದ್ದಾರೆ. ಆ ನರ್ಸ್​ ಆ ರೋಗಿಯ ಜೊತೆ ಯಾವುದೇ ರೀತಿ ಕೆಟ್ಟದಾಗಿ ವರ್ತಿಸಿಲ್ಲ ಎಂದಿದ್ದಾರೆ.

ಸೀತಾಪುರ ಜಿಲ್ಲಾ ಆಸ್ಪತ್ರೆಯ ಮಹಿಳಾ ವಾರ್ಡ್‌ನಲ್ಲಿ ನಡೆದ ಗಲಾಟೆಯ ವಿಡಿಯೋ ಕ್ಲಿಪ್ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಒಬ್ಬಳು ನರ್ಸ್ ಮಹಿಳಾ ರೋಗಿಯ ಕೂದಲನ್ನು ಹಿಡಿದುಕೊಂಡು ಹಾಸಿಗೆಯ ಕಡೆಗೆ ತಳ್ಳುವುದನ್ನು ಕಾಣಬಹುದು. ಅವಳ ಕೂದಲನ್ನು ಹಿಡಿದೆಳೆದ ನರ್ಸ್​ ಆಕೆಯನ್ನು ಹಾಸಿಗೆ ಮೇಲೆ ತಳ್ಳಿದ್ದಷ್ಟೇ ಅಲ್ಲದೆ ಹಾಸಿಗೆಯ ಇನ್ನೊಂದು ಬದಿಯಲ್ಲಿ ನಿಂತಿರುವ ವ್ಯಕ್ತಿಯ ಸಹಾಯದಿಂದ ಅವಳನ್ನು ಕೆಳಗೆ ಬೀಳಿಸುತ್ತಾರೆ.

ಇದನ್ನೂ ಓದಿ: Marta Temido: ಆಸ್ಪತ್ರೆಯಲ್ಲಿ ಹಾಸಿಗೆ ಸಿಗದೆ ಭಾರತ ಮೂಲದ ಗರ್ಭಿಣಿ ಸಾವು: ಪೋರ್ಚುಗಲ್ ಆರೋಗ್ಯ ಸಚಿವೆ ರಾಜೀನಾಮೆ

ಈ ವೈರಲ್ ವಿಡಿಯೋ ಕ್ಲಿಪ್ ಬಗ್ಗೆ ಪ್ರತಿಕ್ರಿಯಿಸಿದ ಸೀತಾಪುರದ ಮುಖ್ಯ ವೈದ್ಯಾಧಿಕಾರಿ ಡಾ.ಆರ್.ಕೆ. ಸಿಂಗ್, ಆ ರೋಗಿಯನ್ನು ಅಕ್ಟೋಬರ್ 18ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರುದಿನ ರಾತ್ರಿ ಆಕೆಯ ಕುಟುಂಬದ ಸದಸ್ಯರು ಆಸ್ಪತ್ರೆಯಿಂದ ಹೊರಹೋದ ನಂತರ ಆ ಮಹಿಳೆ 12ರಿಂದ 1 ಗಂಟೆಯ ನಡುವೆ ಬಾತ್​ ರೂಮ್ ಬಳಿ ಹೋದರು. ಅಲ್ಲಿ ಇದ್ದಕ್ಕಿದ್ದಂತೆ ವಿಚಿತ್ರವಾಗಿ ವರ್ತಿಸಲು ಪ್ರಾರಂಭಿಸಿದರು. ಅದರಿಂದಾಗಿ ನರ್ಸ್​ ಆಕೆಯನ್ನು ಎಳೆದುಕೊಂಡು ಹೋಗಿ ಮಲಗಿಸಿದ್ದಾರೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಆ ರೋಗಿ ತನ್ನ ಬಳೆಗಳನ್ನು ಒಡೆದು ಬಟ್ಟೆಗಳನ್ನು ಹರಿದುಕೊಳ್ಳಲು ಪ್ರಾರಂಭಿಸಿದಳು. ಇದು ವಾರ್ಡ್‌ನಲ್ಲಿರುವ ಇತರ ಮಹಿಳಾ ರೋಗಿಗಳಲ್ಲಿ ಭಯವನ್ನು ಉಂಟುಮಾಡಿತು. ಹೀಗಾಗಿ ಆಸ್ಪತ್ರೆಯ ಸಿಬ್ಬಂದಿ ಅವಳನ್ನು ತಡೆಯಲು ಮಧ್ಯ ಪ್ರವೇಶಿಸಬೇಕಾಯಿತು. ಆ ರೋಗಿಗೆ ಇಂಜೆಕ್ಷನ್ ನೀಡುವ ಸಲುವಾಗಿ ಆಕೆಯನ್ನು ಎಳೆದು ಹಾಸಿಗೆಯ ಮೇಲೆ ತಳ್ಳಿ ಹಿಡಿದುಕೊಳ್ಳಲಾಯಿತು ಎಂದು ಡಾ. ಸಿಂಗ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ