AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ವಿಟರ್​ ಇಂಡಿಯಾ ಎಂಡಿ ಮನೀಶ್​ ಮಹೇಶ್ವರಿಗೆ ನೀಡಿದ ಮಧ್ಯಂತರ ರಕ್ಷಣೆ ವಿರುದ್ಧ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಉತ್ತರ ಪ್ರದೇಶ ಪೊಲೀಸ್​

Manish Maheshwari: ಉತ್ತರ ಪ್ರದೇಶ ಪೊಲೀಸರ ಸಮನ್ಸ್​​ಗೆ ಉತ್ತರಿಸಲು ಮನೀಶ್ ಮಹೇಶ್ವರಿ ತಮ್ಮ ವಿರುದ್ಧ ಪ್ರಕರಣ ದಾಖಲಾದ ಲೋನಿ ಠಾಣೆಗೆ ಹೋಗಿರಲಿಲ್ಲ. ಬದಲಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕವೇ ವಿಚಾರಣೆಗೆ ಎದುರಿಸುವುದಾಗಿ ತಿಳಿಸಿದ್ದರು. ಅಷ್ಟರಲ್ಲಿ ಕರ್ನಾಟಕ ಹೈಕೋರ್ಟ್​​ನಿಂದ ಮಧ್ಯಂತರ ರಕ್ಷಣೆಯೂ ಸಿಕ್ಕಿತ್ತು.

ಟ್ವಿಟರ್​ ಇಂಡಿಯಾ ಎಂಡಿ ಮನೀಶ್​ ಮಹೇಶ್ವರಿಗೆ ನೀಡಿದ ಮಧ್ಯಂತರ ರಕ್ಷಣೆ ವಿರುದ್ಧ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಉತ್ತರ ಪ್ರದೇಶ ಪೊಲೀಸ್​
ಮನೀಶ್ ಮಹೇಶ್ವರಿ
TV9 Web
| Edited By: |

Updated on:Jun 29, 2021 | 12:22 PM

Share

ಟ್ವಿಟರ್​ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಅಂದರೆ ಮನೀಶ್​ ಮಹೇಶ್ವರಿ ಬಂಧನಕ್ಕೆ ಕರ್ನಾಟಕ ಹೈಕೋರ್ಟ್​ ನೀಡಿರುವ ತಾತ್ಕಾಲಿಕ ತಡೆ ಆದೇಶವನ್ನು ಪ್ರಶ್ನಿಸಿ, ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಉತ್ತರ ಪ್ರದೇಶ ಘಾಜಿಯಾಬಾದ್​​ನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ನಡೆದ ಹಲ್ಲೆ ಸಂಬಂಧ ಪ್ರಚೋದನಕಾರಿ ಟ್ವೀಟ್​ಗಳು ಟ್ವಿಟರ್​​ನಲ್ಲಿ ವೈರಲ್​ ಆದ ಬೆನ್ನಲ್ಲೇ, ಟ್ವಿಟರ್​ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್​ ಮಹೇಶ್ವರಿ ಸೇರಿ ಐದಾರು ಜನರ ವಿರುದ್ಧ ಉತ್ತರಪ್ರದೇಶದಲ್ಲಿ ಎಫ್​ಐಆರ್​ ದಾಖಲಾಗಿತ್ತು. ಹಾಗೇ, ಉತ್ತರಪ್ರದೇಶ ಪೊಲೀಸರು ಸಮನ್ಸ್​ ಜಾರಿ ಮಾಡಿದ್ದರು. ಆದರೆ ಬೆಂಗಳೂರು ನಿವಾಸಿಯಾಗಿರುವ ಮನೀಶ್​ ಮಹೇಶ್ವರಿ, ನಿರೀಕ್ಷಣಾ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್​ಗೆ ಮನವಿ ಮಾಡಿದ್ದರು. ಅದರಂತೆ ಅವರಿಗೆ ಬಂಧನದಿಂದ ತಾತ್ಕಾಲಿಕ ರಕ್ಷಣೆಯೂ ಸಿಕ್ಕಿತ್ತು.

ಉತ್ತರ ಪ್ರದೇಶ ಪೊಲೀಸರ ಸಮನ್ಸ್​​ಗೆ ಉತ್ತರಿಸಲು ಮನೀಶ್ ಮಹೇಶ್ವರಿ ತಮ್ಮ ವಿರುದ್ಧ ಪ್ರಕರಣ ದಾಖಲಾದ ಲೋನಿ ಠಾಣೆಗೆ ಹೋಗಿರಲಿಲ್ಲ. ಬದಲಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕವೇ ವಿಚಾರಣೆಗೆ ಎದುರಿಸುವುದಾಗಿ ತಿಳಿಸಿದ್ದರು. ಅಷ್ಟರಲ್ಲಿ ಕರ್ನಾಟಕ ಹೈಕೋರ್ಟ್​​ನಿಂದ ಮಧ್ಯಂತರ ರಕ್ಷಣೆಯೂ ಸಿಕ್ಕಿತ್ತು. ಆದರೀಗ ಅವರಿಗೆ ಮಧ್ಯಂತರ ರಕ್ಷಣೆ ನೀಡಿದ ಹೈಕೋರ್ಟ್ ಆದೇಶಕ್ಕೆ ಪ್ರತಿಯಾಗಿ ಉತ್ತರ ಪ್ರದೇಶ ಪೊಲೀಸರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಮನೀಶ್ ಮಹೇಶ್ವರಿ ಅರ್ಜಿಯನ್ನು ಹೈಕೋರ್ಟ್​ ನ್ಯಾಯಮೂರ್ತಿ ಜಿ.ನರೇಂದರ್ ವಿಚಾರಣೆ ಮಾಡಿದ್ದರು. ಪ್ರಸಕ್ತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರ್ಜಿಯನ್ನು ಇನ್ನಷ್ಟು ಪರಿಶೀಲಿಸಿ, ವಿಚಾರಣೆ ನಡೆಸಬೇಕಿದೆ. ಜೂ.29ಕ್ಕೆ ಅಂತಿಮ ತೀರ್ಪು ನೀಡಲಾಗುವುದು. ಅಲ್ಲಿಯವರೆಗೆ ಮನೀಶ್ ಮಹೇಶ್ವರಿ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಕಠಿಣ ಕ್ರಮ ಕೈಗೊಳ್ಳುವಂತಿಲ್ಲ. ಮನೀಶ್​ ಬೆಂಗಳೂರು ನಿವಾಸಿಯಾಗಿದ್ದು, ಸಮನ್ಸ್​ಗೆ ಉತ್ತರಿಸಲು ಉತ್ತರ ಪ್ರದೇಶಕ್ಕೆ ಪ್ರಯಾಣಿಸುವ ಅಗತ್ಯವಿಲ್ಲ ಎಂದು ನ್ಯಾ.ಜಿ.ನರೇಂದರ್​ ಹೇಳಿದ್ದರು. ಅಲ್ಲದೆ, ಪೊಲೀಸರು ವರ್ಚ್ಯುವಲ್​ ಆಗಿಯೇ ಮನೀಶ್​ ಮಹೇಶ್ವರಿ ವಿಚಾರಣೆ ನಡೆಸಬಹುದು ಎಂದೂ ಕೋರ್ಟ್​ ಹೇಳಿತ್ತು.

ಇದೀನ ಮನೀಶ್ ಮಹೇಶ್ವರಿ ವಿರುದ್ಧ ಇನ್ನೊಂದು ಪ್ರಕರಣದಡಿ ಉತ್ತರ ಪ್ರದೇಶದಲ್ಲೇ ಎಫ್​ಐಆರ್​ ದಾಖಲಾಗಿದೆ. ಭಾರತ ಭೂಪಟವನ್ನು ತಪ್ಪಾಗಿ ತೋರಿಸಿದ ಟ್ವಿಟರ್​ ಇಂಡಿಯಾದ್ದು ದೇಶದ್ರೋಹದ ಮನೋಭಾವ ಎಂದು, ಉತ್ತರ ಪ್ರದೇಶದ ಭಜರಂಗ ದಳದ ಮುಖಂಡ ಪ್ರವೀಣ್​ ಭಾಟಿ ದೂರು ನೀಡಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ‘ಬಲವಂತದ ಮತಾಂತರ ಮತ್ತು ವಿವಾಹ’ದ ವಿರುದ್ಧ ಸಿಖ್ ಸಮುದಾಯದ ಪ್ರತಿಭಟನೆ

(Uttar Pradesh Police Approach Supreme Court against Court Relief To Twitter India Chief Manish Maheshwari)

Published On - 12:21 pm, Tue, 29 June 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್