AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ವಿಟರ್​ ಇಂಡಿಯಾ ಎಂಡಿ ಮನೀಶ್​ ಮಹೇಶ್ವರಿಗೆ ನೀಡಿದ ಮಧ್ಯಂತರ ರಕ್ಷಣೆ ವಿರುದ್ಧ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಉತ್ತರ ಪ್ರದೇಶ ಪೊಲೀಸ್​

Manish Maheshwari: ಉತ್ತರ ಪ್ರದೇಶ ಪೊಲೀಸರ ಸಮನ್ಸ್​​ಗೆ ಉತ್ತರಿಸಲು ಮನೀಶ್ ಮಹೇಶ್ವರಿ ತಮ್ಮ ವಿರುದ್ಧ ಪ್ರಕರಣ ದಾಖಲಾದ ಲೋನಿ ಠಾಣೆಗೆ ಹೋಗಿರಲಿಲ್ಲ. ಬದಲಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕವೇ ವಿಚಾರಣೆಗೆ ಎದುರಿಸುವುದಾಗಿ ತಿಳಿಸಿದ್ದರು. ಅಷ್ಟರಲ್ಲಿ ಕರ್ನಾಟಕ ಹೈಕೋರ್ಟ್​​ನಿಂದ ಮಧ್ಯಂತರ ರಕ್ಷಣೆಯೂ ಸಿಕ್ಕಿತ್ತು.

ಟ್ವಿಟರ್​ ಇಂಡಿಯಾ ಎಂಡಿ ಮನೀಶ್​ ಮಹೇಶ್ವರಿಗೆ ನೀಡಿದ ಮಧ್ಯಂತರ ರಕ್ಷಣೆ ವಿರುದ್ಧ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಉತ್ತರ ಪ್ರದೇಶ ಪೊಲೀಸ್​
ಮನೀಶ್ ಮಹೇಶ್ವರಿ
TV9 Web
| Edited By: |

Updated on:Jun 29, 2021 | 12:22 PM

Share

ಟ್ವಿಟರ್​ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಅಂದರೆ ಮನೀಶ್​ ಮಹೇಶ್ವರಿ ಬಂಧನಕ್ಕೆ ಕರ್ನಾಟಕ ಹೈಕೋರ್ಟ್​ ನೀಡಿರುವ ತಾತ್ಕಾಲಿಕ ತಡೆ ಆದೇಶವನ್ನು ಪ್ರಶ್ನಿಸಿ, ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಉತ್ತರ ಪ್ರದೇಶ ಘಾಜಿಯಾಬಾದ್​​ನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ನಡೆದ ಹಲ್ಲೆ ಸಂಬಂಧ ಪ್ರಚೋದನಕಾರಿ ಟ್ವೀಟ್​ಗಳು ಟ್ವಿಟರ್​​ನಲ್ಲಿ ವೈರಲ್​ ಆದ ಬೆನ್ನಲ್ಲೇ, ಟ್ವಿಟರ್​ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್​ ಮಹೇಶ್ವರಿ ಸೇರಿ ಐದಾರು ಜನರ ವಿರುದ್ಧ ಉತ್ತರಪ್ರದೇಶದಲ್ಲಿ ಎಫ್​ಐಆರ್​ ದಾಖಲಾಗಿತ್ತು. ಹಾಗೇ, ಉತ್ತರಪ್ರದೇಶ ಪೊಲೀಸರು ಸಮನ್ಸ್​ ಜಾರಿ ಮಾಡಿದ್ದರು. ಆದರೆ ಬೆಂಗಳೂರು ನಿವಾಸಿಯಾಗಿರುವ ಮನೀಶ್​ ಮಹೇಶ್ವರಿ, ನಿರೀಕ್ಷಣಾ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್​ಗೆ ಮನವಿ ಮಾಡಿದ್ದರು. ಅದರಂತೆ ಅವರಿಗೆ ಬಂಧನದಿಂದ ತಾತ್ಕಾಲಿಕ ರಕ್ಷಣೆಯೂ ಸಿಕ್ಕಿತ್ತು.

ಉತ್ತರ ಪ್ರದೇಶ ಪೊಲೀಸರ ಸಮನ್ಸ್​​ಗೆ ಉತ್ತರಿಸಲು ಮನೀಶ್ ಮಹೇಶ್ವರಿ ತಮ್ಮ ವಿರುದ್ಧ ಪ್ರಕರಣ ದಾಖಲಾದ ಲೋನಿ ಠಾಣೆಗೆ ಹೋಗಿರಲಿಲ್ಲ. ಬದಲಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕವೇ ವಿಚಾರಣೆಗೆ ಎದುರಿಸುವುದಾಗಿ ತಿಳಿಸಿದ್ದರು. ಅಷ್ಟರಲ್ಲಿ ಕರ್ನಾಟಕ ಹೈಕೋರ್ಟ್​​ನಿಂದ ಮಧ್ಯಂತರ ರಕ್ಷಣೆಯೂ ಸಿಕ್ಕಿತ್ತು. ಆದರೀಗ ಅವರಿಗೆ ಮಧ್ಯಂತರ ರಕ್ಷಣೆ ನೀಡಿದ ಹೈಕೋರ್ಟ್ ಆದೇಶಕ್ಕೆ ಪ್ರತಿಯಾಗಿ ಉತ್ತರ ಪ್ರದೇಶ ಪೊಲೀಸರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಮನೀಶ್ ಮಹೇಶ್ವರಿ ಅರ್ಜಿಯನ್ನು ಹೈಕೋರ್ಟ್​ ನ್ಯಾಯಮೂರ್ತಿ ಜಿ.ನರೇಂದರ್ ವಿಚಾರಣೆ ಮಾಡಿದ್ದರು. ಪ್ರಸಕ್ತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರ್ಜಿಯನ್ನು ಇನ್ನಷ್ಟು ಪರಿಶೀಲಿಸಿ, ವಿಚಾರಣೆ ನಡೆಸಬೇಕಿದೆ. ಜೂ.29ಕ್ಕೆ ಅಂತಿಮ ತೀರ್ಪು ನೀಡಲಾಗುವುದು. ಅಲ್ಲಿಯವರೆಗೆ ಮನೀಶ್ ಮಹೇಶ್ವರಿ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಕಠಿಣ ಕ್ರಮ ಕೈಗೊಳ್ಳುವಂತಿಲ್ಲ. ಮನೀಶ್​ ಬೆಂಗಳೂರು ನಿವಾಸಿಯಾಗಿದ್ದು, ಸಮನ್ಸ್​ಗೆ ಉತ್ತರಿಸಲು ಉತ್ತರ ಪ್ರದೇಶಕ್ಕೆ ಪ್ರಯಾಣಿಸುವ ಅಗತ್ಯವಿಲ್ಲ ಎಂದು ನ್ಯಾ.ಜಿ.ನರೇಂದರ್​ ಹೇಳಿದ್ದರು. ಅಲ್ಲದೆ, ಪೊಲೀಸರು ವರ್ಚ್ಯುವಲ್​ ಆಗಿಯೇ ಮನೀಶ್​ ಮಹೇಶ್ವರಿ ವಿಚಾರಣೆ ನಡೆಸಬಹುದು ಎಂದೂ ಕೋರ್ಟ್​ ಹೇಳಿತ್ತು.

ಇದೀನ ಮನೀಶ್ ಮಹೇಶ್ವರಿ ವಿರುದ್ಧ ಇನ್ನೊಂದು ಪ್ರಕರಣದಡಿ ಉತ್ತರ ಪ್ರದೇಶದಲ್ಲೇ ಎಫ್​ಐಆರ್​ ದಾಖಲಾಗಿದೆ. ಭಾರತ ಭೂಪಟವನ್ನು ತಪ್ಪಾಗಿ ತೋರಿಸಿದ ಟ್ವಿಟರ್​ ಇಂಡಿಯಾದ್ದು ದೇಶದ್ರೋಹದ ಮನೋಭಾವ ಎಂದು, ಉತ್ತರ ಪ್ರದೇಶದ ಭಜರಂಗ ದಳದ ಮುಖಂಡ ಪ್ರವೀಣ್​ ಭಾಟಿ ದೂರು ನೀಡಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ‘ಬಲವಂತದ ಮತಾಂತರ ಮತ್ತು ವಿವಾಹ’ದ ವಿರುದ್ಧ ಸಿಖ್ ಸಮುದಾಯದ ಪ್ರತಿಭಟನೆ

(Uttar Pradesh Police Approach Supreme Court against Court Relief To Twitter India Chief Manish Maheshwari)

Published On - 12:21 pm, Tue, 29 June 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ