AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

500 ರೂಪಾಯಿಯ ಕಂತೆ ಕಂತೆ ನೋಟುಗಳ​ ಜತೆ ಪತ್ನಿ, ಮಕ್ಕಳ ಸೆಲ್ಫಿ, ಸಂಕಷ್ಟಕ್ಕೆ ಸಿಲುಕಿದ ಪೊಲೀಸ್ ಅಧಿಕಾರಿ

500 ರೂಪಾಯಿಯ ಕಂತೆ ಕಂತೆ ನೋಟುಗಳ ಜತೆ ಪತ್ನಿ ಹಾಗೂ ಮಕ್ಕಳು ತೆಗೆದುಕೊಂಡ ಸೆಲ್ಫಿಯಿಂದಾಗಿ ಪೊಲೀಸ್ ಅಧಿಕಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

500 ರೂಪಾಯಿಯ ಕಂತೆ ಕಂತೆ ನೋಟುಗಳ​ ಜತೆ ಪತ್ನಿ, ಮಕ್ಕಳ ಸೆಲ್ಫಿ, ಸಂಕಷ್ಟಕ್ಕೆ ಸಿಲುಕಿದ ಪೊಲೀಸ್ ಅಧಿಕಾರಿ
ನೋಟುImage Credit source: India Today
Follow us
ನಯನಾ ರಾಜೀವ್
|

Updated on: Jun 30, 2023 | 8:21 AM

500 ರೂಪಾಯಿಯ ಕಂತೆ ಕಂತೆ ನೋಟುಗಳ ಜತೆ ಪತ್ನಿ ಹಾಗೂ ಮಕ್ಕಳು ತೆಗೆದುಕೊಂಡ ಸೆಲ್ಫಿಯಿಂದಾಗಿ ಪೊಲೀಸ್ ಅಧಿಕಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉತ್ತರ ಪ್ರದೇಶದ ಉನ್ನಾವೊದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಕುಟುಂಬವು ಕಂತೆ ಕಂತೆ ನೋಟುಗಳೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದ ಪರಿಣಾಮ ಅಧಿಕಾರಿಯನ್ನು ಕೂಡಲೇ ವರ್ಗಾವಣೆ ಮಾಡಲಾಗಿದೆ.

ಪತ್ನಿ ಮತ್ತು ಮಕ್ಕಳು ತೆಗೆದ ಸೆಲ್ಫಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, 500 ರೂಪಾಯಿ ನೋಟುಗಳ ಬಂಡಲ್‌ಗಳೊಂದಿಗೆ ಪೋಸ್ ನೀಡುತ್ತಿರುವುದನ್ನು ನೋಡಿದ ನಂತರ ಪೊಲೀಸರ ವಿರುದ್ಧ ತನಿಖೆ ಆರಂಭಿಸಲಾಗಿದೆ.

ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಛಾಯಾಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪತ್ನಿ ಮತ್ತು ಇಬ್ಬರು ಮಕ್ಕಳು ಹಾಸಿಗೆಯ ಮೇಲೆ 14 ಲಕ್ಷ ರೂ. ನೋಟುಗಳನ್ನು ಹರಡಿಕೊಂಡು ಕುಳಿತಿರುವುದನ್ನು ಕಾಣಬಹುದು. ಠಾಣಾ ಉಸ್ತುವಾರಿ ರಮೇಶ್ ಚಂದ್ರ ಸಹಾನಿ ಅವರನ್ನು ಪೊಲೀಸ್ ಲೈನ್‌ಗೆ ವರ್ಗಾಯಿಸಲಾಗಿದೆ.

ಮತ್ತಷ್ಟು ಓದಿ: 51 ಡಿವೈಎಸ್​ಪಿ, 292 ಪೊಲೀಸ್ ಇನ್ಸ್​ಪೆಕ್ಟರ್​ಗಳ ವರ್ಗಾವಣೆ, ಕರ್ನಾಟಕ ಸರ್ಕಾರದಿಂದ ಆದೇಶ

ರಮೇಶ್ ಚಂದ್ರ ಸಹಾನಿ ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ ಮತ್ತು ಈ ಚಿತ್ರವನ್ನು ನವೆಂಬರ್ 14ರಂದ ಅವರು ಕುಟುಂಬದ ಆಸ್ತಿಯನ್ನು ಮಾರಾಟ ಮಾಡಿದಾಗ ಬಂದ ಹಣದ ಚಿತ್ರ ಎಂದು ಹೇಳಿದ್ದಾರೆ.

ಘಟನೆಯ ವಿವರಗಳನ್ನು ನೀಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಠಾಣೆಯ ಅಧಿಕಾರಿಯ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಇದು ಪೊಲೀಸರ ಹೆಂಡತಿ ಮತ್ತು ಅವರ ಮಕ್ಕಳನ್ನು ನೋಟುಗಳ ಬಂಡಲ್​ಗಳೊಂದಿಗೆ ಕುಳಿತಿರುವುದು ಕಾಣಿಸುತ್ತಿದೆ. ನಾವು ವಿಷಯದ ಬಗ್ಗೆ ಗಮನ ಹರಿಸಿದ್ದೇವೆ. ಅವರನ್ನು ವರ್ಗಾವಣೆ ಮಾಡಲಾಗಿದೆ, ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್