AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

500 ರೂಪಾಯಿಯ ಕಂತೆ ಕಂತೆ ನೋಟುಗಳ​ ಜತೆ ಪತ್ನಿ, ಮಕ್ಕಳ ಸೆಲ್ಫಿ, ಸಂಕಷ್ಟಕ್ಕೆ ಸಿಲುಕಿದ ಪೊಲೀಸ್ ಅಧಿಕಾರಿ

500 ರೂಪಾಯಿಯ ಕಂತೆ ಕಂತೆ ನೋಟುಗಳ ಜತೆ ಪತ್ನಿ ಹಾಗೂ ಮಕ್ಕಳು ತೆಗೆದುಕೊಂಡ ಸೆಲ್ಫಿಯಿಂದಾಗಿ ಪೊಲೀಸ್ ಅಧಿಕಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

500 ರೂಪಾಯಿಯ ಕಂತೆ ಕಂತೆ ನೋಟುಗಳ​ ಜತೆ ಪತ್ನಿ, ಮಕ್ಕಳ ಸೆಲ್ಫಿ, ಸಂಕಷ್ಟಕ್ಕೆ ಸಿಲುಕಿದ ಪೊಲೀಸ್ ಅಧಿಕಾರಿ
ನೋಟುImage Credit source: India Today
ನಯನಾ ರಾಜೀವ್
|

Updated on: Jun 30, 2023 | 8:21 AM

Share

500 ರೂಪಾಯಿಯ ಕಂತೆ ಕಂತೆ ನೋಟುಗಳ ಜತೆ ಪತ್ನಿ ಹಾಗೂ ಮಕ್ಕಳು ತೆಗೆದುಕೊಂಡ ಸೆಲ್ಫಿಯಿಂದಾಗಿ ಪೊಲೀಸ್ ಅಧಿಕಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉತ್ತರ ಪ್ರದೇಶದ ಉನ್ನಾವೊದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಕುಟುಂಬವು ಕಂತೆ ಕಂತೆ ನೋಟುಗಳೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದ ಪರಿಣಾಮ ಅಧಿಕಾರಿಯನ್ನು ಕೂಡಲೇ ವರ್ಗಾವಣೆ ಮಾಡಲಾಗಿದೆ.

ಪತ್ನಿ ಮತ್ತು ಮಕ್ಕಳು ತೆಗೆದ ಸೆಲ್ಫಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, 500 ರೂಪಾಯಿ ನೋಟುಗಳ ಬಂಡಲ್‌ಗಳೊಂದಿಗೆ ಪೋಸ್ ನೀಡುತ್ತಿರುವುದನ್ನು ನೋಡಿದ ನಂತರ ಪೊಲೀಸರ ವಿರುದ್ಧ ತನಿಖೆ ಆರಂಭಿಸಲಾಗಿದೆ.

ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಛಾಯಾಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪತ್ನಿ ಮತ್ತು ಇಬ್ಬರು ಮಕ್ಕಳು ಹಾಸಿಗೆಯ ಮೇಲೆ 14 ಲಕ್ಷ ರೂ. ನೋಟುಗಳನ್ನು ಹರಡಿಕೊಂಡು ಕುಳಿತಿರುವುದನ್ನು ಕಾಣಬಹುದು. ಠಾಣಾ ಉಸ್ತುವಾರಿ ರಮೇಶ್ ಚಂದ್ರ ಸಹಾನಿ ಅವರನ್ನು ಪೊಲೀಸ್ ಲೈನ್‌ಗೆ ವರ್ಗಾಯಿಸಲಾಗಿದೆ.

ಮತ್ತಷ್ಟು ಓದಿ: 51 ಡಿವೈಎಸ್​ಪಿ, 292 ಪೊಲೀಸ್ ಇನ್ಸ್​ಪೆಕ್ಟರ್​ಗಳ ವರ್ಗಾವಣೆ, ಕರ್ನಾಟಕ ಸರ್ಕಾರದಿಂದ ಆದೇಶ

ರಮೇಶ್ ಚಂದ್ರ ಸಹಾನಿ ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ ಮತ್ತು ಈ ಚಿತ್ರವನ್ನು ನವೆಂಬರ್ 14ರಂದ ಅವರು ಕುಟುಂಬದ ಆಸ್ತಿಯನ್ನು ಮಾರಾಟ ಮಾಡಿದಾಗ ಬಂದ ಹಣದ ಚಿತ್ರ ಎಂದು ಹೇಳಿದ್ದಾರೆ.

ಘಟನೆಯ ವಿವರಗಳನ್ನು ನೀಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಠಾಣೆಯ ಅಧಿಕಾರಿಯ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಇದು ಪೊಲೀಸರ ಹೆಂಡತಿ ಮತ್ತು ಅವರ ಮಕ್ಕಳನ್ನು ನೋಟುಗಳ ಬಂಡಲ್​ಗಳೊಂದಿಗೆ ಕುಳಿತಿರುವುದು ಕಾಣಿಸುತ್ತಿದೆ. ನಾವು ವಿಷಯದ ಬಗ್ಗೆ ಗಮನ ಹರಿಸಿದ್ದೇವೆ. ಅವರನ್ನು ವರ್ಗಾವಣೆ ಮಾಡಲಾಗಿದೆ, ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ