AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ಪಿಯಿಂದ ಆಕಾಶ್​ ಆನಂದ್​ರನ್ನು ಮಾಯಾವತಿ ಮತ್ತೆ ಹೊರಹಾಕಿದ್ದೇಕೆ?

ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ(Mayawati) ತಮ್ಮ ಸೋದರಳಿಯ ಆಕಾಶ್​ ಆನಂದ್ ಅವರನ್ನು ಮತ್ತೆ ಪಕ್ಷದಿಂದ ಹೊರಹಾಕಿದ್ದಾರೆ. ಆಕಾಶ್​ ಆನಂದ್ ಅವರ ಮಾವ ಅಶೋಕ್ ಸಿದ್ಧಾರ್ಥ್​ ಅವರ ಪ್ರಭಾವವೇ ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ. ಮಾಯಾವತಿ ಅವರು ಎಕ್ಸ್ ಪೋಸ್ಟ್‌ನಲ್ಲಿ ಇದನ್ನು ದೃಢಪಡಿಸಿದ್ದು, ಪಕ್ಷದ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಬಿಎಸ್​ಪಿಯಿಂದ ಆಕಾಶ್​ ಆನಂದ್​ರನ್ನು ಮಾಯಾವತಿ ಮತ್ತೆ ಹೊರಹಾಕಿದ್ದೇಕೆ?
ಆಕಾಶ್ ಆನಂದ್ Image Credit source: The tribune
ನಯನಾ ರಾಜೀವ್
|

Updated on:Mar 04, 2025 | 8:16 AM

Share

ಲಕ್ನೋ, ಮಾರ್ಚ್​ 04: ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ(Mayawati) ತಮ್ಮ ಸೋದರಳಿಯ ಆಕಾಶ್​ ಆನಂದ್ ಅವರನ್ನು ಮತ್ತೆ ಪಕ್ಷದಿಂದ ಹೊರಹಾಕಿದ್ದಾರೆ. ಆಕಾಶ್​ ಆನಂದ್ ಅವರ ಮಾವ ಅಶೋಕ್ ಸಿದ್ಧಾರ್ಥ್​ ಅವರ ಪ್ರಭಾವವೇ ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ. ಮಾಯಾವತಿ ಅವರು ಎಕ್ಸ್ ಪೋಸ್ಟ್‌ನಲ್ಲಿ ಇದನ್ನು ದೃಢಪಡಿಸಿದ್ದು, ಪಕ್ಷದ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ರಾಜ್ಯಸಭಾ ಸಂಸದ ಅಶೋಕ್ ಸಿದ್ಧಾರ್ಥ್ ಅವರನ್ನು ಪಕ್ಷದಿಂದ ಹೊರಹಾಕಿದ ಕೆಲವೇ ದಿನಗಳಲ್ಲಿ ಮಾಯಾವತಿಯವರ ನಿರ್ಧಾರ ಹೊರಬಿದ್ದಿದೆ. ಅಶೋಕ್ ಸಿದ್ಧಾರ್ಥ್ ಅವರು ಆಕಾಶ್ ಆನಂದ್ ಅವರ ಮಾವ.

ಆಕಾಶ್ ಆನಂದ್ ತಮ್ಮ ಮಾವನ ಪ್ರಭಾವದಿಂದಾಗಿ ಪಕ್ಷದ ಹಿತಾಸಕ್ತಿಯನ್ನು ನಿರ್ಲಕ್ಷಿಸುತ್ತಿದ್ದಾರೆ ಎನ್ನುವ ನಿರ್ಣಯಕ್ಕೆ ಬರಲಾಯಿತು. ಇದರಿಂದಾಗಿ, ಅವರನ್ನು ರಾಷ್ಟ್ರೀಯ ಸಂಯೋಜಕರು ಸೇರಿದಂತೆ ಎಲ್ಲಾ ಜವಾಬ್ದಾರಿಗಳಿಂದ ಬಿಡುಗಡೆ ಮಾಡಲಾಯಿತು.

ನಿನ್ನೆ ನಡೆದ ಬಿಎಸ್‌ಪಿಯ ಅಖಿಲ ಭಾರತ ಸಭೆಯಲ್ಲಿ, ಆಕಾಶ್ ಆನಂದ್ ಅವರನ್ನು ರಾಷ್ಟ್ರೀಯ ಸಂಯೋಜಕರು ಸೇರಿದಂತೆ ಎಲ್ಲಾ ಜವಾಬ್ದಾರಿಗಳಿಂದ ಬಿಡುಗಡೆ ಮಾಡಲಾಯಿತು ಏಕೆಂದರೆ ಅವರು ಪಕ್ಷದ ಹಿತಾಸಕ್ತಿಗಿಂತ ಹೆಚ್ಚಾಗಿ ಪಕ್ಷದಿಂದ ಹೊರಹಾಕಲ್ಪಟ್ಟ ತಮ್ಮ ಮಾವ ಅಶೋಕ್ ಸಿದ್ಧಾರ್ಥ್ ಅವರ ಪ್ರಭಾವಕ್ಕೆ ಒಳಗಾಗಿದ್ದರು ಎಂದು ಮಾಯಾವತಿ ಪೋಸ್ಟ್​ ಮಾಡಿದ್ದಾರೆ.

ಮತ್ತಷ್ಟು ಓದಿ: ಬಿಎಸ್​ಪಿಗೆ ತನ್ನ ಸೋದರಳಿಯನನ್ನು ಉತ್ತರಾಧಿಕಾರಿಯಾಗಿ ನೇಮಿಸಿದ ಮಾಯಾವತಿ

ಆನಂದ್ ಅವರನ್ನು ಕಳೆದ ವರ್ಷ ವಜಾಗೊಳಿಸಿದ್ದರು, ನಂತರ ಅವರನ್ನು ಮತ್ತೆ ತಮ್ಮ ರಾಜಕೀಯ ಉತ್ತರಾಧಿಕಾರಿಯಾಗಿ ನೇಮಿಸಿದರು. ಹಾಗಾದರೆ, ಮಾಯಾವತಿ ಆನಂದ್ ಅವರನ್ನು ಎರಡನೇ ಬಾರಿಗೆ ಏಕೆ ಉಚ್ಛಾಟಿಸಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲಿದೆ.

ಫೆಬ್ರವರಿ 17 ರಂದು ದೆಹಲಿಯಲ್ಲಿ ನಡೆದ ಬಿಎಸ್ಪಿಯ ರಾಷ್ಟ್ರವ್ಯಾಪಿ ಸಂಯೋಜಕರ ಸಭೆಯಲ್ಲಿ, ಮಾಯಾವತಿ ಆನಂದ್ ಇನ್ನು ಮುಂದೆ ರಾಷ್ಟ್ರೀಯ ಸಂಯೋಜಕರಾಗಿ ಸೇವೆ ಸಲ್ಲಿಸುವುದಿಲ್ಲ ಎಂದು ಹೇಳಿದರು. ಮಾರ್ಚ್ 2 ರಂದು ಲಕ್ನೋದಲ್ಲಿ ನಡೆದ ಪ್ರಮುಖ ಸಭೆಯ ನಂತರ, ಅವರು ತಮ್ಮ ನಿರ್ಧಾರವನ್ನು ಪುನರುಚ್ಚರಿಸಿದರು ಮತ್ತು ಆನಂದ್ ಅವರನ್ನು ಅವರ ಎಲ್ಲಾ ಹುದ್ದೆಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ಘೋಷಿಸಿದರು.

ದಕ್ಷಿಣ ರಾಜ್ಯಗಳಲ್ಲಿ ಪಕ್ಷದ ವ್ಯವಹಾರಗಳನ್ನು ಸಿದ್ಧಾರ್ಥ್ ನೋಡಿಕೊಂಡರು, ದೇಣಿಗೆಗಳಿಂದ ಹಿಡಿದು ಸಂಘಟನಾ ವಿಷಯಗಳವರೆಗೆ ಎಲ್ಲದರಲ್ಲೂ ಗಮನಾರ್ಹ ಪ್ರಭಾವ ಬೀರಿದರು. ಕಾಲಾನಂತರದಲ್ಲಿ, ಮಾಯಾವತಿ ಅವರು ಪಕ್ಷದೊಳಗೆ ಸಮಾನಾಂತರ ಅಧಿಕಾರ ರಚನೆಯನ್ನು ನಡೆಸುತ್ತಿದ್ದಾರೆ ಎನ್ನುವ ಅನುಮಾನ ಬಂದಿತ್ತು. ಸಿದ್ಧಾರ್ಥ್ ಅವರನ್ನು ಒಂದು ಕಾಲದಲ್ಲಿ ಮಾಯಾವತಿಯವರ ಆಪ್ತ ವಲಯದಲ್ಲಿ ಪ್ರಮುಖ ವ್ಯಕ್ತಿ ಎಂದು ಪರಿಗಣಿಸಲಾಗಿತ್ತು, ಆದರೆ ನಂತರದ ದಿನಗಳಲ್ಲಿ ಆ ಸ್ಥಾನವನ್ನು ರಾಮ್‌ಜಿ ಗೌತಮ್ ವಹಿಸಿಕೊಂಡಿದ್ದಾರೆ, ಅವರನ್ನು ಈಗ ರಾಷ್ಟ್ರೀಯ ಸಂಯೋಜಕರಾಗಿ ನೇಮಿಸಲಾಗಿದೆ.

ಆನಂದ್ ಅವರನ್ನು ಪಕ್ಷದಿಂದ ಹಿಂದೆ ಹೊರಹಾಕಿದಾಗ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದ್ದರೂ, ಈಗ ಬಿಎಸ್‌ಪಿಯ ಬಾಗಿಲುಗಳು ಅವರಿಗೆ ದೃಡವಾಗಿ ಮುಚ್ಚಿರುವಂತೆ ಕಾಣುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:11 am, Tue, 4 March 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ