AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP Accident: ಶಹಜಹಾನ್‌ಪುರದಲ್ಲಿ ಬಸ್​ ಮೇಲೆ ಉರುಳಿಬಿದ್ದ ಲಾರಿ, 11 ಮಂದಿ ಸಾವು, 25 ಮಂದಿಗೆ ಗಾಯ

ಉತ್ತರ ಪ್ರದೇಶದ ಶಹಜಹಾನ್​ಪುರದಲ್ಲಿ ಲಾರಿಯೊಂದು ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದು, 25 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

UP Accident: ಶಹಜಹಾನ್‌ಪುರದಲ್ಲಿ ಬಸ್​ ಮೇಲೆ ಉರುಳಿಬಿದ್ದ ಲಾರಿ, 11 ಮಂದಿ ಸಾವು, 25 ಮಂದಿಗೆ ಗಾಯ
ಅಪಘಾತ
ನಯನಾ ರಾಜೀವ್
|

Updated on: May 26, 2024 | 8:23 AM

Share

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತ(Accident)ದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಓವರ್ ಲೋಡ್ ಡಂಪರ್ ನಿಯಂತ್ರಣ ತಪ್ಪಿ ಬಸ್ ಮೇಲೆ ಉರುಳಿಬಿದ್ದು, ಅಪಘಾತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಇವರೆಲ್ಲರೂ ಉತ್ತರ ಪ್ರದೇಶದ ಸೀತಾಪುರದಿಂದ ಉತ್ತರಾಖಂಡದ ಪೂರ್ಣಂಗಿರಿಗೆ ಹೋಗುತ್ತಿದ್ದರು. ಶನಿವಾರ ರಾತ್ರಿ 12.15ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಈ ರಸ್ತೆ ಅಪಘಾತದಲ್ಲಿ 25 ಭಕ್ತರು ಗಾಯಗೊಂಡಿದ್ದಾರೆ.

ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ, ಬಸ್ ಪ್ರಯಾಣಿಕರು ರಾತ್ರಿ ಶಹಜಹಾನ್‌ಪುರದಲ್ಲಿ ಊಟಕ್ಕೆಂದು ಇಳಿದಿದ್ದರು. ಆಗ ಹಿಂಬದಿಯಿಂದ ಬಂದ ಡಂಪರ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಈ ರಸ್ತೆ ಅಪಘಾತದಲ್ಲಿ 25 ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಎಲ್ಲಾ ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಮತ್ತಷ್ಟು ಓದಿ: Porsche Accident: ವೇದಾಂತ್​ ತಂದೆಯ ಸೂಚನೆ ಮೇರೆಗೆ ನಾನು ಪ್ಯಾಸೆಂಜರ್​ ಸೀಟ್​ ಅಲ್ಲಿ ಕೂತಿದ್ದೆ ಎಂದ ಡ್ರೈವರ್

ಬಸ್ ನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದರು. ಇವರೆಲ್ಲರೂ ಉತ್ತರಾಖಂಡದ ಪೂರ್ಣಂಗಿರಿಯಲ್ಲಿರುವ ಮಾತೆಯ ಆಸ್ಥಾನಕ್ಕೆ ಹೋಗುತ್ತಿದ್ದರು. ಪ್ರತಿದಿನ ಮಾತೆಯ ಆಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದರ್ಶನ ಪಡೆಯುತ್ತಾರೆ. ಸೀತಾಪುರದ ಸಿಂಧೌಲಿಯ ಭಕ್ತರು ಇಲ್ಲಿ ದರ್ಶನಕ್ಕೆ ಹೋಗುತ್ತಿದ್ದರು. ಕೆಲವರು ಬಸ್ಸಿನಲ್ಲಿ ಕುಳಿತಿದ್ದರೆ ಕೆಲವರು ಹೊರಗೆ ಅಡ್ಡಾಡುತ್ತಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?