AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP Accident: ಶಹಜಹಾನ್‌ಪುರದಲ್ಲಿ ಬಸ್​ ಮೇಲೆ ಉರುಳಿಬಿದ್ದ ಲಾರಿ, 11 ಮಂದಿ ಸಾವು, 25 ಮಂದಿಗೆ ಗಾಯ

ಉತ್ತರ ಪ್ರದೇಶದ ಶಹಜಹಾನ್​ಪುರದಲ್ಲಿ ಲಾರಿಯೊಂದು ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದು, 25 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

UP Accident: ಶಹಜಹಾನ್‌ಪುರದಲ್ಲಿ ಬಸ್​ ಮೇಲೆ ಉರುಳಿಬಿದ್ದ ಲಾರಿ, 11 ಮಂದಿ ಸಾವು, 25 ಮಂದಿಗೆ ಗಾಯ
ಅಪಘಾತ
ನಯನಾ ರಾಜೀವ್
|

Updated on: May 26, 2024 | 8:23 AM

Share

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತ(Accident)ದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಓವರ್ ಲೋಡ್ ಡಂಪರ್ ನಿಯಂತ್ರಣ ತಪ್ಪಿ ಬಸ್ ಮೇಲೆ ಉರುಳಿಬಿದ್ದು, ಅಪಘಾತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಇವರೆಲ್ಲರೂ ಉತ್ತರ ಪ್ರದೇಶದ ಸೀತಾಪುರದಿಂದ ಉತ್ತರಾಖಂಡದ ಪೂರ್ಣಂಗಿರಿಗೆ ಹೋಗುತ್ತಿದ್ದರು. ಶನಿವಾರ ರಾತ್ರಿ 12.15ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಈ ರಸ್ತೆ ಅಪಘಾತದಲ್ಲಿ 25 ಭಕ್ತರು ಗಾಯಗೊಂಡಿದ್ದಾರೆ.

ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ, ಬಸ್ ಪ್ರಯಾಣಿಕರು ರಾತ್ರಿ ಶಹಜಹಾನ್‌ಪುರದಲ್ಲಿ ಊಟಕ್ಕೆಂದು ಇಳಿದಿದ್ದರು. ಆಗ ಹಿಂಬದಿಯಿಂದ ಬಂದ ಡಂಪರ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಈ ರಸ್ತೆ ಅಪಘಾತದಲ್ಲಿ 25 ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಎಲ್ಲಾ ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಮತ್ತಷ್ಟು ಓದಿ: Porsche Accident: ವೇದಾಂತ್​ ತಂದೆಯ ಸೂಚನೆ ಮೇರೆಗೆ ನಾನು ಪ್ಯಾಸೆಂಜರ್​ ಸೀಟ್​ ಅಲ್ಲಿ ಕೂತಿದ್ದೆ ಎಂದ ಡ್ರೈವರ್

ಬಸ್ ನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದರು. ಇವರೆಲ್ಲರೂ ಉತ್ತರಾಖಂಡದ ಪೂರ್ಣಂಗಿರಿಯಲ್ಲಿರುವ ಮಾತೆಯ ಆಸ್ಥಾನಕ್ಕೆ ಹೋಗುತ್ತಿದ್ದರು. ಪ್ರತಿದಿನ ಮಾತೆಯ ಆಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದರ್ಶನ ಪಡೆಯುತ್ತಾರೆ. ಸೀತಾಪುರದ ಸಿಂಧೌಲಿಯ ಭಕ್ತರು ಇಲ್ಲಿ ದರ್ಶನಕ್ಕೆ ಹೋಗುತ್ತಿದ್ದರು. ಕೆಲವರು ಬಸ್ಸಿನಲ್ಲಿ ಕುಳಿತಿದ್ದರೆ ಕೆಲವರು ಹೊರಗೆ ಅಡ್ಡಾಡುತ್ತಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ
ಶಿವಮೊಗ್ಗದಲ್ಲಿ ಮೈನವಿರೇಳಿಸುವ ಅಪಘಾತ!
ಶಿವಮೊಗ್ಗದಲ್ಲಿ ಮೈನವಿರೇಳಿಸುವ ಅಪಘಾತ!
ರೂಪಾಯಿಗೆ ಬಿಗ್ ಶಾಕ್, ಮೊದಲ ಬಾರಿಗೆ 93ರ ಗಡಿ ದಾಟಿದ ಭಾರತೀಯ ಕರೆನ್ಸಿ
ರೂಪಾಯಿಗೆ ಬಿಗ್ ಶಾಕ್, ಮೊದಲ ಬಾರಿಗೆ 93ರ ಗಡಿ ದಾಟಿದ ಭಾರತೀಯ ಕರೆನ್ಸಿ
‘ಡಿಕೆಡಿ 5’ ಕ್ವಾಟರ್​ ಫಿನಾಲೆ; ಫಿನಾಲೆ ಟಿಕೆಟ್​ ಸಿಗೋದು ಯಾರಿಗೆ?
‘ಡಿಕೆಡಿ 5’ ಕ್ವಾಟರ್​ ಫಿನಾಲೆ; ಫಿನಾಲೆ ಟಿಕೆಟ್​ ಸಿಗೋದು ಯಾರಿಗೆ?
ಕೈಲಾದೇವಿ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದ ವಾಹನ ಅಪಘಾತ
ಕೈಲಾದೇವಿ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದ ವಾಹನ ಅಪಘಾತ
ಮಂಡ್ಯ: ಬೋನಿಗೆ ಬಿದ್ದ ಚಿರತೆ ನೋಡಲು ಮುಗಿಬಿದ್ದ ಜನ
ಮಂಡ್ಯ: ಬೋನಿಗೆ ಬಿದ್ದ ಚಿರತೆ ನೋಡಲು ಮುಗಿಬಿದ್ದ ಜನ
ಕಾಲಿಗೆ ಬೀಳ್ತೀವಿ, ಸಾರಾಯಿ ಬಂದ್ ಮಾಡಿಸಿ: ಶಾಸಕರ ಮುಂದೆ ಮಹಿಳೆಯರು ಕಣ್ಣೀರು
ಕಾಲಿಗೆ ಬೀಳ್ತೀವಿ, ಸಾರಾಯಿ ಬಂದ್ ಮಾಡಿಸಿ: ಶಾಸಕರ ಮುಂದೆ ಮಹಿಳೆಯರು ಕಣ್ಣೀರು
ಇಸ್ರೇಲ್​​ನ ಹೈಫಾ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ
ಇಸ್ರೇಲ್​​ನ ಹೈಫಾ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ
ಟಿಕೆಟ್​​ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಚಿವರ ಪುತ್ರ!
ಟಿಕೆಟ್​​ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಚಿವರ ಪುತ್ರ!
‘ಧುರಂಧರ್ 2’ ನೋಡಲು ದುಬೈನಿಂದ ಭಾರತಕ್ಕೆ ಬಂದ ಖ್ಯಾತ ಇನ್​​ಫ್ಲುಯೆನ್ಸರ್
‘ಧುರಂಧರ್ 2’ ನೋಡಲು ದುಬೈನಿಂದ ಭಾರತಕ್ಕೆ ಬಂದ ಖ್ಯಾತ ಇನ್​​ಫ್ಲುಯೆನ್ಸರ್