Unnao Accident: ಎಕ್ಸ್​ಪ್ರೆಸ್​ವೇನಲ್ಲಿ ಹಾಲಿನ ಟ್ಯಾಂಕರ್​ಗೆ ಬಸ್​ ಡಿಕ್ಕಿ, 18 ಮಂದಿ ಸಾವು, 20 ಜನರಿಗೆ ಗಾಯ

ಉನ್ನಾವೊದಲ್ಲಿ ಬುಧವಾರ ಬೆಳಗ್ಗೆ ಅತ್ಯಂತ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಒಟ್ಟು 18 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಡಬ್ಬಲ್ ಡೆಕ್ಕರ್ ಬಸ್ ಹಾಲಿನ ಟ್ಯಾಂಕರ್​ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ವೇಗವಾಗಿ ಬಂದ ಬಸ್ ಟ್ಯಾಂಕರ್​ಗೆ ಡಿಕ್ಕಿ ಹೊಡೆದಿತ್ತು, ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

Unnao Accident: ಎಕ್ಸ್​ಪ್ರೆಸ್​ವೇನಲ್ಲಿ ಹಾಲಿನ ಟ್ಯಾಂಕರ್​ಗೆ ಬಸ್​ ಡಿಕ್ಕಿ, 18 ಮಂದಿ ಸಾವು, 20 ಜನರಿಗೆ ಗಾಯ
ಬಸ್Image Credit source: Jagran
Follow us
|

Updated on: Jul 10, 2024 | 8:06 AM

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ(Accident) ಸಂಭವಿಸಿದೆ. ಅಪಘಾತದಲ್ಲಿ ಬಸ್​ ಹಾಗೂ ಹಾಲಿನ ಟ್ಯಾಂಕರ್​ ನಡುವೆ ಡಿಕ್ಕಿ ಉಂಟಾದ ಪರಿಣಾಮ 18 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಿಹಾರದ ಶಿವಗಢದಿಂದ ದೆಹಲಿಗೆ ಹೋಗುತ್ತಿದ್ದ ಸ್ಲೀಪರ್ ಬಸ್ ಬೆಹ್ತಾ ಮುಜಾವರ್ ಪೊಲೀಸ್ ಠಾಣೆ ವ್ಯಾಪ್ತಿಯ ಏರ್‌ಸ್ಟ್ರಿಪ್‌ನಲ್ಲಿ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಟ್ಯಾಂಕರ್ ಹಾರಿ ಹೋಗಿವೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ 18 ಜನರು ಸಾವನ್ನಪ್ಪಿದ್ದಾರೆ. ಅದೇ ವೇಳೆ ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಆಗಮಿಸಿ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ.

ಸಿಒ ಬಂಗಾರ್ಮೌ ಅರವಿಂದ್ ಚೌರಾಸಿಯಾ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಸ್ ಬಿಹಾರದ ಸೀತಾಮರ್ಹಿಯಿಂದ ದೆಹಲಿಗೆ ಹೋಗುತ್ತಿತ್ತು ಎಂದು ಹೇಳಲಾಗುತ್ತಿದೆ. ಅಪಘಾತದ ಮಾಹಿತಿ ಪಡೆದ ಡಿಎಂ ಮತ್ತು ಎಸ್ಪಿ ಕೂಡ ಸ್ಥಳಕ್ಕೆ ಆಗಮಿಸಿದರು.

ಮತ್ತಷ್ಟು ಓದಿ: ಮುಂಬೈ ಬಿಎಂಡಬ್ಲ್ಯು ಅಪಘಾತ ಪ್ರಕರಣ: ಶಿವಸೇನಾ ನಾಯಕ ರಾಜೇಶ್ ಶಾಗೆ ಜಾಮೀನು

ಬೆಹ್ತಾ ಮುಜಾವರ್ ಪ್ರದೇಶದ ಅಡಿಯಲ್ಲಿ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇ ಕಿಮೀ ಸಂಖ್ಯೆ 247 ರಲ್ಲಿ ಬೆಳಿಗ್ಗೆ 05.15 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬಿಹಾರದಿಂದ ದೆಹಲಿಗೆ ಹೋಗುತ್ತಿದ್ದ ಡಬಲ್ ಡೆಕ್ಕರ್ ಬಸ್ ಸಂಖ್ಯೆ UP95 T 4720, ಹಾಲಿನ ಟ್ಯಾಂಕರ್ ಸಂಖ್ಯೆ UP70 CT 3999 ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ 18 ಜನರು ಸಾವನ್ನಪ್ಪಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಬೇಹತ ಮುಜಾವರ ಠಾಣೆ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನೆಲ್ಲ ಹೊರ ತೆಗೆದು ಸಿಎಚ್‌ಸಿ ಬಂಗಾರ್‌ಮೌವ್‌ಗೆ ಚಿಕಿತ್ಸೆಗೆ ದಾಖಲಿಸಿದ್ದು, ಮೃತದೇಹಗಳನ್ನು ವಶಕ್ಕೆ ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.

ಪೊಲೀಸ್ ವರಿಷ್ಠಾಧಿಕಾರಿ ಸರ್ ಉನ್ನಾವ್, ಏರಿಯಾ ಅಧಿಕಾರಿ ಸರ್ ಬಂಗಾರ್ಮೌ ಮತ್ತು ಇತರ ಪೊಲೀಸ್ ಠಾಣೆಗಳ ಪೊಲೀಸ್ ಪಡೆಗಳು ಸ್ಥಳದಲ್ಲಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ