AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಘಾಟನೆಯಾದ ಒಂದೇ ವಾರದಲ್ಲಿ ಕುಸಿದ ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇ: ಮೋದಿ, ಯೋಗಿ ವಿರುದ್ಧ ಹರಿಹಾಯ್ದ ಪ್ರತಿಪಕ್ಷಗಳು

ಬಿಜೆಪಿ ಜನರನ್ನು ದಿಕ್ಕುತಪ್ಪಿಸುತ್ತಿದೆ ಎಂದು ಸಮಾಜವಾದಿ ಪಕ್ಷ, ಡಬಲ್ ಎಂಜಿನ್ ಸರ್ಕಾರದ ಕಾರ್ಯವೈಖರಿಗೆ ಈ ಹೆದ್ದಾರಿ ಕನ್ನಡಿ ಹಿಡಿದಿದೆ ಎಂದು ಆಪ್ ವ್ಯಂಗ್ಯವಾಡಿವೆ.

ಉದ್ಘಾಟನೆಯಾದ ಒಂದೇ ವಾರದಲ್ಲಿ ಕುಸಿದ ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇ: ಮೋದಿ, ಯೋಗಿ ವಿರುದ್ಧ ಹರಿಹಾಯ್ದ ಪ್ರತಿಪಕ್ಷಗಳು
ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿದೆ.
TV9 Web
| Edited By: |

Updated on:Jul 22, 2022 | 8:08 AM

Share

ಲಖನೌ: ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇ (Bundelkhand Expressway) ಹೆದ್ದಾರಿಯ ಒಂದು ಭಾಗ ಕುಸಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪ್ರತಿಪಕ್ಷಗಳು ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ವಿರುದ್ಧ ಹರಿಹಾಯ್ದಿವೆ. ಕಳೆದ ವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ (PM Narendra Modi) ಉದ್ಘಾಟಿಸಿದ್ದ ಈ ಹೆದ್ದಾರಿಯು ಜಾಲೌನ್ ತೆಹ್​ಸೀಲ್​ಗೆ ಸೇರಿದ ಚಿರಿಯಾ ಸಾಲೆಮ್​ಪುರ್​ ಎಂಬಲ್ಲಿ ಕುಸಿದಿದೆ. ಈ ಸಂಬಂಧ ಸಮಾಜವಾದಿ ಪಕ್ಷ ಮತ್ತು ಆಮ್ ಆದ್ಮಿ ಪಕ್ಷಗಳು ವಿಡಿಯೊ ಟ್ವೀಟ್ ಮಾಡಿ, ಹಾಳಾಗಿರುವ ರಸ್ತೆಯ ಭಾಗವನ್ನು ಜೆಸಿಬಿ ಬಳಸಿ ರಿಪೇರಿ ಕೆಲಸ ನಡೆಸುತ್ತಿರುವುದನ್ನು ತೋರಿಸಿವೆ. ‘ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇ ಗುಣಮಟ್ಟ ಎಂಥದ್ದು ಎನ್ನುವುದನ್ನು ಮಳೆ ಬಹಿರಂಗಪಡಿಸಿವೆ. ಬಿಜೆಪಿ ಜನರನ್ನು ದಿಕ್ಕುತಪ್ಪಿಸುತ್ತಿದೆ’ ಎಂದು ಸಮಾಜವಾದಿ ಪಕ್ಷವು (Samajwadi Party – SP) ಟ್ವೀಟ್ ಮಾಡಿದೆ.

ರಸ್ತೆ ಕುಸಿದಿರುವ ಬಗ್ಗೆ ವ್ಯಂಗ್ಯವಾಡಿರುವ ಆಮ್ ಆದ್ಮಿ ಪಕ್ಷವು (Aam Aadmi Party – AAM) ‘ಡಬಲ್ ಎಂಜಿನ್ ಸರ್ಕಾರದ ಕಾರ್ಯವೈಖರಿಗೆ ಈ ಹೆದ್ದಾರಿ ಕನ್ನಡಿ ಹಿಡಿದಿದೆ. ಒಂದು ವಾರವೂ ಈ ರಸ್ತೆ ಸುಸ್ಥಿತಿಯಲ್ಲಿ ಇರಲಿಲ್ಲ’ ಎಂದು ಹೇಳಿದೆ. ಹಾಳಾಗಿರುವ ರಸ್ತೆಯಲ್ಲಿ ಕಾರ್ ಒಂದು ಸಿಲುಕಿ, ಜಖಂಗೊಂಡ ಬಗ್ಗೆ ‘ನವಭಾರತ್ ಟೈಮ್ಸ್​’ ದಿನಪತ್ರಿಕೆ ವರದಿ ಮಾಡಿದೆ. ಹೆದ್ದಾರಿ ಕುಸಿತದ ಕುರಿತು ತನಿಖೆ ನಡೆಸುವಂತೆ ಹಿರಿಯ ಅಧಿಕಾರಿಗಳು ಆದೇಶ ಮಾಡಿದ್ದಾರೆ. ಈ ನಡುವೆ ಬುಂದೇಲ್​ಖಂಡ್ ಹೆದ್ದಾರಿ ಕುಸಿದಿರುವ ದೃಶ್ಯಗಳವಿರುವ ವಿಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ಜುಲೈ 16ರಂದು ಪ್ರಧಾನಿ ನರೇಂದ್ರ ಮೋದಿ ‘ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇ’ಗೆ ಚಾಲನೆ ನೀಡಿದ್ದರು. ಫೆಬ್ರುವರಿ 29, 2020ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದ್ದರು. ಕೇವಲ 28 ತಿಂಗಳಲ್ಲಿ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಲಾಗಿದೆ. 296 ಕಿಮೀ ಉದ್ದದ ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇ ಉತ್ತರ ಪ್ರದೇಶದ 7 ಜಿಲ್ಲೆಗಳನ್ನು ಹಾದು ಹೋಗುತ್ತದೆ. ಚಿತ್ರಕೂಟ, ಬಂಡಾ, ಮಹೋಬಾ, ಹಮೀರ್​ಪುರ್, ಜಲೌನ್, ಔರಿಯಾ ಮತ್ತು ಇಟಾ ಜಿಲ್ಲೆಗಳಿಗೆ ಈ ಹೆದ್ದಾರಿಯು ಸಂಪರ್ಕ ಕಲ್ಪಿಸುತ್ತದೆ. ಈ ಹೆದ್ದಾರಿಯನ್ನು ₹ 14,850 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿತ್ತು.

ಚಿತ್ರಕೂಟ ಜಿಲ್ಲೆಯ ಭರತ್​ಕೂಪ್​ ಸಮೀಪದ ಗೋಂಡಾ ಹಳ್ಳಿಯ ರಾಷ್ಟ್ರೀಯ ಹೆದ್ದಾರಿ 35ರಿಂದ ಆರಂಭವಾಗುವ ಎಕ್ಸ್​ಪ್ರೆಸ್​ವೇ ಇಟಾವ ಜಿಲ್ಲೆಯ ಕುದ್ರೈಲ್ ಗ್ರಾಮದ ಸಮೀಪ ಅಂತ್ಯಗೊಳ್ಳುತ್ತದೆ. ಅಲ್ಲಿ ಇದು ಆಗ್ರಾ-ಲಖನೌ ಹೆದ್ದಾರಿಗೆ ಸೇರುತ್ತದೆ. ನಾಲ್ಕು ಲೇನ್​ಗಳಿರುವ ಚತುಷ್ಪಥ ಎಕ್ಸ್​ಪ್ರೆಸ್​ವೇ ಅನ್ನು ಮುಂದಿನ ದಿನಗಳಲ್ಲಿ ಆರು ಲೇನ್​ಗೆ (ಷಟ್​ಪಥ) ವಿಸ್ತರಿಸಲು ಅನುವಾಗುವಂತೆ ನಿರ್ಮಿಸಲಾಗಿದೆ.

Published On - 7:16 am, Fri, 22 July 22

Follow Us
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ