AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಘಾಟನೆಯಾದ ಒಂದೇ ವಾರದಲ್ಲಿ ಕುಸಿದ ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇ: ಮೋದಿ, ಯೋಗಿ ವಿರುದ್ಧ ಹರಿಹಾಯ್ದ ಪ್ರತಿಪಕ್ಷಗಳು

ಬಿಜೆಪಿ ಜನರನ್ನು ದಿಕ್ಕುತಪ್ಪಿಸುತ್ತಿದೆ ಎಂದು ಸಮಾಜವಾದಿ ಪಕ್ಷ, ಡಬಲ್ ಎಂಜಿನ್ ಸರ್ಕಾರದ ಕಾರ್ಯವೈಖರಿಗೆ ಈ ಹೆದ್ದಾರಿ ಕನ್ನಡಿ ಹಿಡಿದಿದೆ ಎಂದು ಆಪ್ ವ್ಯಂಗ್ಯವಾಡಿವೆ.

ಉದ್ಘಾಟನೆಯಾದ ಒಂದೇ ವಾರದಲ್ಲಿ ಕುಸಿದ ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇ: ಮೋದಿ, ಯೋಗಿ ವಿರುದ್ಧ ಹರಿಹಾಯ್ದ ಪ್ರತಿಪಕ್ಷಗಳು
ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿದೆ.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 22, 2022 | 8:08 AM

ಲಖನೌ: ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇ (Bundelkhand Expressway) ಹೆದ್ದಾರಿಯ ಒಂದು ಭಾಗ ಕುಸಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪ್ರತಿಪಕ್ಷಗಳು ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ವಿರುದ್ಧ ಹರಿಹಾಯ್ದಿವೆ. ಕಳೆದ ವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ (PM Narendra Modi) ಉದ್ಘಾಟಿಸಿದ್ದ ಈ ಹೆದ್ದಾರಿಯು ಜಾಲೌನ್ ತೆಹ್​ಸೀಲ್​ಗೆ ಸೇರಿದ ಚಿರಿಯಾ ಸಾಲೆಮ್​ಪುರ್​ ಎಂಬಲ್ಲಿ ಕುಸಿದಿದೆ. ಈ ಸಂಬಂಧ ಸಮಾಜವಾದಿ ಪಕ್ಷ ಮತ್ತು ಆಮ್ ಆದ್ಮಿ ಪಕ್ಷಗಳು ವಿಡಿಯೊ ಟ್ವೀಟ್ ಮಾಡಿ, ಹಾಳಾಗಿರುವ ರಸ್ತೆಯ ಭಾಗವನ್ನು ಜೆಸಿಬಿ ಬಳಸಿ ರಿಪೇರಿ ಕೆಲಸ ನಡೆಸುತ್ತಿರುವುದನ್ನು ತೋರಿಸಿವೆ. ‘ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇ ಗುಣಮಟ್ಟ ಎಂಥದ್ದು ಎನ್ನುವುದನ್ನು ಮಳೆ ಬಹಿರಂಗಪಡಿಸಿವೆ. ಬಿಜೆಪಿ ಜನರನ್ನು ದಿಕ್ಕುತಪ್ಪಿಸುತ್ತಿದೆ’ ಎಂದು ಸಮಾಜವಾದಿ ಪಕ್ಷವು (Samajwadi Party – SP) ಟ್ವೀಟ್ ಮಾಡಿದೆ.

ರಸ್ತೆ ಕುಸಿದಿರುವ ಬಗ್ಗೆ ವ್ಯಂಗ್ಯವಾಡಿರುವ ಆಮ್ ಆದ್ಮಿ ಪಕ್ಷವು (Aam Aadmi Party – AAM) ‘ಡಬಲ್ ಎಂಜಿನ್ ಸರ್ಕಾರದ ಕಾರ್ಯವೈಖರಿಗೆ ಈ ಹೆದ್ದಾರಿ ಕನ್ನಡಿ ಹಿಡಿದಿದೆ. ಒಂದು ವಾರವೂ ಈ ರಸ್ತೆ ಸುಸ್ಥಿತಿಯಲ್ಲಿ ಇರಲಿಲ್ಲ’ ಎಂದು ಹೇಳಿದೆ. ಹಾಳಾಗಿರುವ ರಸ್ತೆಯಲ್ಲಿ ಕಾರ್ ಒಂದು ಸಿಲುಕಿ, ಜಖಂಗೊಂಡ ಬಗ್ಗೆ ‘ನವಭಾರತ್ ಟೈಮ್ಸ್​’ ದಿನಪತ್ರಿಕೆ ವರದಿ ಮಾಡಿದೆ. ಹೆದ್ದಾರಿ ಕುಸಿತದ ಕುರಿತು ತನಿಖೆ ನಡೆಸುವಂತೆ ಹಿರಿಯ ಅಧಿಕಾರಿಗಳು ಆದೇಶ ಮಾಡಿದ್ದಾರೆ. ಈ ನಡುವೆ ಬುಂದೇಲ್​ಖಂಡ್ ಹೆದ್ದಾರಿ ಕುಸಿದಿರುವ ದೃಶ್ಯಗಳವಿರುವ ವಿಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ಜುಲೈ 16ರಂದು ಪ್ರಧಾನಿ ನರೇಂದ್ರ ಮೋದಿ ‘ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇ’ಗೆ ಚಾಲನೆ ನೀಡಿದ್ದರು. ಫೆಬ್ರುವರಿ 29, 2020ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದ್ದರು. ಕೇವಲ 28 ತಿಂಗಳಲ್ಲಿ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಲಾಗಿದೆ. 296 ಕಿಮೀ ಉದ್ದದ ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇ ಉತ್ತರ ಪ್ರದೇಶದ 7 ಜಿಲ್ಲೆಗಳನ್ನು ಹಾದು ಹೋಗುತ್ತದೆ. ಚಿತ್ರಕೂಟ, ಬಂಡಾ, ಮಹೋಬಾ, ಹಮೀರ್​ಪುರ್, ಜಲೌನ್, ಔರಿಯಾ ಮತ್ತು ಇಟಾ ಜಿಲ್ಲೆಗಳಿಗೆ ಈ ಹೆದ್ದಾರಿಯು ಸಂಪರ್ಕ ಕಲ್ಪಿಸುತ್ತದೆ. ಈ ಹೆದ್ದಾರಿಯನ್ನು ₹ 14,850 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿತ್ತು.

ಚಿತ್ರಕೂಟ ಜಿಲ್ಲೆಯ ಭರತ್​ಕೂಪ್​ ಸಮೀಪದ ಗೋಂಡಾ ಹಳ್ಳಿಯ ರಾಷ್ಟ್ರೀಯ ಹೆದ್ದಾರಿ 35ರಿಂದ ಆರಂಭವಾಗುವ ಎಕ್ಸ್​ಪ್ರೆಸ್​ವೇ ಇಟಾವ ಜಿಲ್ಲೆಯ ಕುದ್ರೈಲ್ ಗ್ರಾಮದ ಸಮೀಪ ಅಂತ್ಯಗೊಳ್ಳುತ್ತದೆ. ಅಲ್ಲಿ ಇದು ಆಗ್ರಾ-ಲಖನೌ ಹೆದ್ದಾರಿಗೆ ಸೇರುತ್ತದೆ. ನಾಲ್ಕು ಲೇನ್​ಗಳಿರುವ ಚತುಷ್ಪಥ ಎಕ್ಸ್​ಪ್ರೆಸ್​ವೇ ಅನ್ನು ಮುಂದಿನ ದಿನಗಳಲ್ಲಿ ಆರು ಲೇನ್​ಗೆ (ಷಟ್​ಪಥ) ವಿಸ್ತರಿಸಲು ಅನುವಾಗುವಂತೆ ನಿರ್ಮಿಸಲಾಗಿದೆ.

Published On - 7:16 am, Fri, 22 July 22

ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ