AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಘಾಟನೆಯಾದ ಒಂದೇ ವಾರದಲ್ಲಿ ಕುಸಿದ ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇ: ಮೋದಿ, ಯೋಗಿ ವಿರುದ್ಧ ಹರಿಹಾಯ್ದ ಪ್ರತಿಪಕ್ಷಗಳು

ಬಿಜೆಪಿ ಜನರನ್ನು ದಿಕ್ಕುತಪ್ಪಿಸುತ್ತಿದೆ ಎಂದು ಸಮಾಜವಾದಿ ಪಕ್ಷ, ಡಬಲ್ ಎಂಜಿನ್ ಸರ್ಕಾರದ ಕಾರ್ಯವೈಖರಿಗೆ ಈ ಹೆದ್ದಾರಿ ಕನ್ನಡಿ ಹಿಡಿದಿದೆ ಎಂದು ಆಪ್ ವ್ಯಂಗ್ಯವಾಡಿವೆ.

ಉದ್ಘಾಟನೆಯಾದ ಒಂದೇ ವಾರದಲ್ಲಿ ಕುಸಿದ ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇ: ಮೋದಿ, ಯೋಗಿ ವಿರುದ್ಧ ಹರಿಹಾಯ್ದ ಪ್ರತಿಪಕ್ಷಗಳು
ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿದೆ.
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jul 22, 2022 | 8:08 AM

Share

ಲಖನೌ: ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇ (Bundelkhand Expressway) ಹೆದ್ದಾರಿಯ ಒಂದು ಭಾಗ ಕುಸಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪ್ರತಿಪಕ್ಷಗಳು ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ವಿರುದ್ಧ ಹರಿಹಾಯ್ದಿವೆ. ಕಳೆದ ವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ (PM Narendra Modi) ಉದ್ಘಾಟಿಸಿದ್ದ ಈ ಹೆದ್ದಾರಿಯು ಜಾಲೌನ್ ತೆಹ್​ಸೀಲ್​ಗೆ ಸೇರಿದ ಚಿರಿಯಾ ಸಾಲೆಮ್​ಪುರ್​ ಎಂಬಲ್ಲಿ ಕುಸಿದಿದೆ. ಈ ಸಂಬಂಧ ಸಮಾಜವಾದಿ ಪಕ್ಷ ಮತ್ತು ಆಮ್ ಆದ್ಮಿ ಪಕ್ಷಗಳು ವಿಡಿಯೊ ಟ್ವೀಟ್ ಮಾಡಿ, ಹಾಳಾಗಿರುವ ರಸ್ತೆಯ ಭಾಗವನ್ನು ಜೆಸಿಬಿ ಬಳಸಿ ರಿಪೇರಿ ಕೆಲಸ ನಡೆಸುತ್ತಿರುವುದನ್ನು ತೋರಿಸಿವೆ. ‘ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇ ಗುಣಮಟ್ಟ ಎಂಥದ್ದು ಎನ್ನುವುದನ್ನು ಮಳೆ ಬಹಿರಂಗಪಡಿಸಿವೆ. ಬಿಜೆಪಿ ಜನರನ್ನು ದಿಕ್ಕುತಪ್ಪಿಸುತ್ತಿದೆ’ ಎಂದು ಸಮಾಜವಾದಿ ಪಕ್ಷವು (Samajwadi Party – SP) ಟ್ವೀಟ್ ಮಾಡಿದೆ.

ರಸ್ತೆ ಕುಸಿದಿರುವ ಬಗ್ಗೆ ವ್ಯಂಗ್ಯವಾಡಿರುವ ಆಮ್ ಆದ್ಮಿ ಪಕ್ಷವು (Aam Aadmi Party – AAM) ‘ಡಬಲ್ ಎಂಜಿನ್ ಸರ್ಕಾರದ ಕಾರ್ಯವೈಖರಿಗೆ ಈ ಹೆದ್ದಾರಿ ಕನ್ನಡಿ ಹಿಡಿದಿದೆ. ಒಂದು ವಾರವೂ ಈ ರಸ್ತೆ ಸುಸ್ಥಿತಿಯಲ್ಲಿ ಇರಲಿಲ್ಲ’ ಎಂದು ಹೇಳಿದೆ. ಹಾಳಾಗಿರುವ ರಸ್ತೆಯಲ್ಲಿ ಕಾರ್ ಒಂದು ಸಿಲುಕಿ, ಜಖಂಗೊಂಡ ಬಗ್ಗೆ ‘ನವಭಾರತ್ ಟೈಮ್ಸ್​’ ದಿನಪತ್ರಿಕೆ ವರದಿ ಮಾಡಿದೆ. ಹೆದ್ದಾರಿ ಕುಸಿತದ ಕುರಿತು ತನಿಖೆ ನಡೆಸುವಂತೆ ಹಿರಿಯ ಅಧಿಕಾರಿಗಳು ಆದೇಶ ಮಾಡಿದ್ದಾರೆ. ಈ ನಡುವೆ ಬುಂದೇಲ್​ಖಂಡ್ ಹೆದ್ದಾರಿ ಕುಸಿದಿರುವ ದೃಶ್ಯಗಳವಿರುವ ವಿಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ಜುಲೈ 16ರಂದು ಪ್ರಧಾನಿ ನರೇಂದ್ರ ಮೋದಿ ‘ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇ’ಗೆ ಚಾಲನೆ ನೀಡಿದ್ದರು. ಫೆಬ್ರುವರಿ 29, 2020ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದ್ದರು. ಕೇವಲ 28 ತಿಂಗಳಲ್ಲಿ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಲಾಗಿದೆ. 296 ಕಿಮೀ ಉದ್ದದ ಬುಂದೇಲ್​ಖಂಡ್ ಎಕ್ಸ್​ಪ್ರೆಸ್​ವೇ ಉತ್ತರ ಪ್ರದೇಶದ 7 ಜಿಲ್ಲೆಗಳನ್ನು ಹಾದು ಹೋಗುತ್ತದೆ. ಚಿತ್ರಕೂಟ, ಬಂಡಾ, ಮಹೋಬಾ, ಹಮೀರ್​ಪುರ್, ಜಲೌನ್, ಔರಿಯಾ ಮತ್ತು ಇಟಾ ಜಿಲ್ಲೆಗಳಿಗೆ ಈ ಹೆದ್ದಾರಿಯು ಸಂಪರ್ಕ ಕಲ್ಪಿಸುತ್ತದೆ. ಈ ಹೆದ್ದಾರಿಯನ್ನು ₹ 14,850 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿತ್ತು.

ಚಿತ್ರಕೂಟ ಜಿಲ್ಲೆಯ ಭರತ್​ಕೂಪ್​ ಸಮೀಪದ ಗೋಂಡಾ ಹಳ್ಳಿಯ ರಾಷ್ಟ್ರೀಯ ಹೆದ್ದಾರಿ 35ರಿಂದ ಆರಂಭವಾಗುವ ಎಕ್ಸ್​ಪ್ರೆಸ್​ವೇ ಇಟಾವ ಜಿಲ್ಲೆಯ ಕುದ್ರೈಲ್ ಗ್ರಾಮದ ಸಮೀಪ ಅಂತ್ಯಗೊಳ್ಳುತ್ತದೆ. ಅಲ್ಲಿ ಇದು ಆಗ್ರಾ-ಲಖನೌ ಹೆದ್ದಾರಿಗೆ ಸೇರುತ್ತದೆ. ನಾಲ್ಕು ಲೇನ್​ಗಳಿರುವ ಚತುಷ್ಪಥ ಎಕ್ಸ್​ಪ್ರೆಸ್​ವೇ ಅನ್ನು ಮುಂದಿನ ದಿನಗಳಲ್ಲಿ ಆರು ಲೇನ್​ಗೆ (ಷಟ್​ಪಥ) ವಿಸ್ತರಿಸಲು ಅನುವಾಗುವಂತೆ ನಿರ್ಮಿಸಲಾಗಿದೆ.

Published On - 7:16 am, Fri, 22 July 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!