AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fight for Rasgulla: ಉತ್ತರ ಪ್ರದೇಶ: ಮದುವೆ ಮನೆಯಲ್ಲಿ ರಸಗುಲ್ಲಕ್ಕಾಗಿ ಹೊಡೆದಾಟ, 6 ಮಂದಿಗೆ ಗಂಭೀರ ಗಾಯ

ಮದುವೆ ಮನೆಯಲ್ಲಿ ಊಟದ ವಿಚಾರಕ್ಕೆ ವಾದಗಳು ನಡೆಯುವುದು ಸಾಮಾನ್ಯ ಆದರೆ, ಕೇವಲ ಜಗಳ ನಡೆದಿಲ್ಲ ಬದಲಾಗಿ ರಸಗುಲ್ಲಕ್ಕಾಗಿ ಹೊಡೆದಾಟವೇ ನಡೆದಿದೆ. ಘಟನೆಯಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾನುವಾರ ಮಧ್ಯರಾತ್ರಿ ಶಂಸಾಬಾದ್ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ.

Fight for Rasgulla: ಉತ್ತರ ಪ್ರದೇಶ: ಮದುವೆ ಮನೆಯಲ್ಲಿ ರಸಗುಲ್ಲಕ್ಕಾಗಿ ಹೊಡೆದಾಟ, 6 ಮಂದಿಗೆ ಗಂಭೀರ ಗಾಯ
ರಸಗುಲ್ಲಾ
ನಯನಾ ರಾಜೀವ್
| Edited By: |

Updated on:Nov 21, 2023 | 10:20 AM

Share

ಮದುವೆ ಮನೆಯಲ್ಲಿ ಊಟದ ವಿಚಾರಕ್ಕೆ ವಾದಗಳು ನಡೆಯುವುದು ಸಾಮಾನ್ಯ ಆದರೆ, ಕೇವಲ ಜಗಳ ನಡೆದಿಲ್ಲ ಬದಲಾಗಿ ರಸಗುಲ್ಲಕ್ಕಾಗಿ ಹೊಡೆದಾಟವೇ ನಡೆದಿದೆ. ಘಟನೆಯಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾನುವಾರ ಮಧ್ಯರಾತ್ರಿ ಶಂಸಾಬಾದ್ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ.

ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಪ್ರಕರಣ ದಾಖಲಾಗಿದ್ದು, ಆಸ್ಪತ್ರೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಶಂಸಾಬಾದ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಅನಿಲ್ ಶರ್ಮಾ ತಿಳಿಸಿದ್ದಾರೆ.

ಬ್ರಿಜ್ಭಾನ್ ಕುಶ್ವಾಹಾ ಅವರ ನಿವಾಸದಲ್ಲಿ ಮದುವೆ ಕಾರ್ಯಕ್ರಮವಿತ್ತು, ಸಮಾರಂಭದಲ್ಲಿ, ರಸಗುಲ್ಲಾಗಳ ಕೊರತೆಯ ಬಗ್ಗೆ ವ್ಯಕ್ತಿಯೊಬ್ಬರು ಕಮೆಂಟ್ ಮಾಡಿದ್ದರು.

ಮತ್ತಷ್ಟು ಓದಿ: ಒಂದು ರಸಗುಲ್ಲಕ್ಕಾಗಿ ಮದುವೆ ಮನೆಯಲ್ಲಿ ಕೊಲೆಯೇ ನಡೆದುಹೋಯ್ತು!

ಇದು ಜಗಳಕ್ಕೆ ಕಾರಣವಾಯಿತು ಮತ್ತು ಭಗವಾನ್ ದೇವಿ, ಯೋಗೇಶ್, ಮನೋಜ್, ಕೈಲಾಶ್, ಧರ್ಮೇಂದ್ರ ಮತ್ತು ಪವನ್ ಗಾಯಗೊಂಡಿದ್ದಾರೆ ಎಂದು ಎಸ್‌ಎಚ್‌ಒ ಶರ್ಮಾ ಹೇಳಿದ್ದಾರೆ.

ಹಾಗೆಯೇ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಎತ್ಮಾದ್‌ಪುರದಲ್ಲಿ ನಡೆದ ಮದುವೆಯೊಂದರಲ್ಲಿ ಸಿಹಿತಿಂಡಿಗಳ ಕೊರತೆ ಬಗ್ಗೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:05 am, Tue, 21 November 23

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?