AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗಾತಿಯ ಕೊಂದವರ ಮನೆಗೆ ನುಗ್ಗಿ ಸೇಡು ತೀರಿಸಿಕೊಂಡ ಹೆಣ್ಣು ಹಾವು

ಹಾವಿನ ದ್ವೇಷ 12 ವರುಷ  ಎಂಬುದನ್ನು ನೀವು ಕೇಳಿರುತ್ತೀರಿ. ಆದರೆ  ನಮ್ಮ ಗಮನಕ್ಕೆ ಬರುವವರೆಗೂ ಇದು ಸುಳ್ಳಿರಬಹುದು ಎಂದೇ ಎನಿಸುತ್ತಿರುತ್ತದೆ. ಆದರೆ ಸತ್ಯ ಕಣ್ಣೆದುರೇ ಇದ್ದಾಗ ನಂಬಲೇಬೇಕಾಗುತ್ತದೆ. ಆದರೆ ತನ್ನ ಸಂಗಾತಿಯನ್ನು ಕೊಂದ ಮನೆಗೆ ನುಗ್ಗಿ ಹೆಣ್ಣು ಹಾವೊಂದು ಪ್ರತೀಕಾರ ತೀರಿಸಿಕೊಂಡಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಮಥುರಾದಲ್ಲಿ ಈ ಘಟನೆ ನಡೆದಿದೆ.

ಸಂಗಾತಿಯ ಕೊಂದವರ ಮನೆಗೆ ನುಗ್ಗಿ ಸೇಡು ತೀರಿಸಿಕೊಂಡ ಹೆಣ್ಣು ಹಾವು
ಹಾವುImage Credit source: News Crab
ನಯನಾ ರಾಜೀವ್
|

Updated on: Jul 18, 2025 | 2:20 PM

Share

ಉತ್ತರ ಪ್ರದೇಶ, ಜುಲೈ 18:  ಹಾವಿನ ದ್ವೇಷ 12 ವರುಷ  ಎಂಬುದನ್ನು ನೀವು ಕೇಳಿರುತ್ತೀರಿ. ಆದರೆ  ನಮ್ಮ ಗಮನಕ್ಕೆ ಬರುವವರೆಗೂ ಇದು ಸುಳ್ಳಿರಬಹುದು ಎಂದೇ ಎನಿಸುತ್ತಿರುತ್ತದೆ. ಆದರೆ ಸತ್ಯ ಕಣ್ಣೆದುರೇ ಇದ್ದಾಗ ನಂಬಲೇಬೇಕಾಗುತ್ತದೆ. ಆದರೆ ತನ್ನ ಸಂಗಾತಿಯನ್ನು ಕೊಂದ ಮನೆಗೆ ನುಗ್ಗಿ ಹೆಣ್ಣು ಹಾವೊಂದು ಪ್ರತೀಕಾರ ತೀರಿಸಿಕೊಂಡಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಮಥುರಾದಲ್ಲಿ ಈ ಘಟನೆ ನಡೆದಿದೆ.

ಸಿಹೋರಾ ಗ್ರಾಮದ ನಿವಾಸಿ ಮನೋಜ್ ಅವರ ಪತ್ನಿ ಕಳೆದ ತಿಂಗಳಷ್ಟೇ ಹೆಣ್ಣುಮಗುವಿಗೆ ಜನ್ಮ ನೀಡಿದ್ದರು. ಜುಲೈ 2ರಂದು ನಾಮಕರಣ ಸಮಾರಂಭ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮಕ್ಕೆ ಸಂಬಂಧಿಕರೆಲ್ಲಾ ಮನೆಗೆ ಬಂದಿದ್ದರು. ಹಾಗೆಯೇ ಮನೋಜ್ ಅವರ ಪತ್ನಿಯ ಸಹೋದರ ಸಚಿನ್ ಕೂಡ ಅಲ್ಲಿಗೆ ಬಂದಿದ್ದರು.

ಮನೆಯ ಒಳಗೆ ಕೋಣೆಯಲ್ಲಿ ಹಾವು ಇರುವುದನ್ನು ಕಂಡು ಬೆಚ್ಚಿಬಿದ್ದ ಸಚಿನ್ ಕೂಡಲೇ ದೊಣ್ಣೆಯಿಂದ ಗಂಡು ಹಾವನ್ನು ಹೊಡೆದು ಸಾಯಿಸಿದ್ದಾರೆ. ಬಳಿಕ ಕೆಲವೇ ದಿನಗಳಲ್ಲಿ ಆ ಗಂಡು ಹಾವಿನ ಸಂಗಾತಿ ಮೂವರಿಗೆ ಕಚ್ಚಿ ಸೇಡು ತೀರಿಸಿಕೊಂಡಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಮನೋಜ್ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮತ್ತಷ್ಟು ಓದಿ: Video: ಅಬ್ಬಬ್ಬಾ… ಹೂವು ಹಿಡಿದಷ್ಟು ಸಲೀಸಾಗಿ ನಾಗರಹಾವು ಹಿಡಿದ ವ್ಯಕ್ತಿ

ಗ್ರಾಮಸ್ಥರು ಆ ಹೆಣ್ಣು ಹಾವನ್ನು ಹಿಡಿದು ಕೊಂದಿದ್ದಾರೆ. ಮರುದಿನ ಸಚಿನ್ ತನ್ನ ಗ್ರಾಮಕ್ಕೆ ಹಿಂದಿರುಗಿದ್ದ, ನಾಲ್ಕು ದಿನಗಳ ನಂತರ, ಮನೆಯೊಳಗೆ ಕಪ್ಪು ಬಣ್ಣದ ಹಾವು ಕಾಣಿಸಿಕೊಂಡಿತ್ತು. ಅದನ್ನು ನೋಡಿದಾಗ ಮನೆಯೊಳಗೆ ಗದ್ದಲ ಉಂಟಾಯಿತು. ಶಬ್ದದಿಂದಾಗಿ, ಹಾವು ಮನೆಯೊಳಗೆ ಅಡಗಿಕೊಂಡಿತ್ತು. ಮನೆಯ ಹೊರಗೆ ಓಡಾಡುತ್ತಿದ್ದ ಹಾವನ್ನು ಜನರು ನೋಡಿದ್ದರು ಆದರೆ ನಿರ್ಲಕ್ಷ್ಯಸಿದ್ದರು.

ಬುಧವಾರ ರಾತ್ರಿ ಮನೋಜ್ ತಮ್ಮ ಹೆಂಡತಿ ಹಾಗೂ ಮಗುವೊಂದಿಗೆ ಮಲಗಿದ್ದಾಗ ಬೆಳಗ್ಗೆ 4 ಗಂಟೆ ಸುಮಾರಿಗೆ ಮನೋಜ್​​ಗೆ ಹಾವು ಕಚ್ಚಿತ್ತು. ಹಾವು ನೋಡಿದ ತಕ್ಷಣ ಆಕೆ ಕಿರುಚಿದ್ದಾರೆ.ಕೂಡಲೇ ಮನೋಜ್​ರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಲಾಯಿತು. ಆದರೆ ಸ್ವಲ್ಪ ಸಮಯದ ಬಳಿಕ ಆರೋಗ್ಯ ತುಂಬಾ ಹದಗೆಟ್ಟಿತ್ತು, ಎರಡೆರಡು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಯಾವುದೇ ಪ್ರಯೋಜನವಾಗಿಲ್ಲ. ಬಳಿಕ ಅವರು ಮೃತಪಟ್ಟಿದ್ದಾರೆ.

ಮನೋಜ್ ಅವರ ತಮ್ಮ ದಿನೇಶ್ ಸೇರಿ ಮೂವರಿಗೆ ಹಾವು ಕಚ್ಚಿತ್ತು. ಅವರ ಸ್ಥಿತಿ ಸ್ಥಿರವಾಗಿದೆ. ಗ್ರಾಮಸ್ಥರು ಆ ಹೆಣ್ಣು ಹಾವನ್ನು ಹೊಡೆದು ಸಾಯಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!