AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ನೋ: 9 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ದಾಳಿ

ಬೀದಿ ನಾಯಿ( Stray Dog)ಯೊಂದು ದಾಳಿ ಮಾಡಿದ ಪರಿಣಾಮ 9 ವರ್ಷದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಜ್‌ಗಢ್ ಜಿಲ್ಲೆಯ ಮಚಲ್‌ಪುರ ಪ್ರದೇಶದಲ್ಲಿ ಮಂಗಳವಾರ ನಡೆದಿದೆ. ಬಾಲಕಿಯನ್ನು ಅರ್ಪಿತಾ ಗುರ್ಜರ್ ಎಂದು ಗುರುತಿಸಲಾಗಿದ್ದು, ಆಕೆಯ ಮುಖ ಮತ್ತು ಕುತ್ತಿಗೆಗೆ ಗಾಯಗಳಾಗಿವೆ, ಚಿಕಿತ್ಸೆಯಲ್ಲಿ 17 ಹೊಲಿಗೆಗಳನ್ನು ಹಾಕಲಾಗಿದೆ.

ಲಕ್ನೋ: 9 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ದಾಳಿ
ಬೀದಿ ನಾಯಿ-ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Dec 13, 2023 | 5:59 PM

Share

ಬೀದಿ ನಾಯಿ( Stray Dog)ಯೊಂದು ದಾಳಿ ಮಾಡಿದ ಪರಿಣಾಮ 9 ವರ್ಷದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಜ್‌ಗಢ್ ಜಿಲ್ಲೆಯ ಮಚಲ್‌ಪುರ ಪ್ರದೇಶದಲ್ಲಿ ಮಂಗಳವಾರ ನಡೆದಿದೆ. ಬಾಲಕಿಯನ್ನು ಅರ್ಪಿತಾ ಗುರ್ಜರ್ ಎಂದು ಗುರುತಿಸಲಾಗಿದ್ದು, ಆಕೆಯ ಮುಖ ಮತ್ತು ಕುತ್ತಿಗೆಗೆ ಗಾಯಗಳಾಗಿವೆ, ಚಿಕಿತ್ಸೆಯಲ್ಲಿ 17 ಹೊಲಿಗೆಗಳನ್ನು ಹಾಕಲಾಗಿದೆ.

ಮಚಲ್‌ಪುರ ಪ್ರದೇಶದಲ್ಲಿನ ತನ್ನ ಚಿಕ್ಕಪ್ಪ ಜ್ಞಾನ್ ಸಿಂಗ್ ಗುರ್ಜರ್ ಅವರ ಮನೆಯಲ್ಲಿ ತಂಗಿರುವ ಅರ್ಪಿತಾ ಗುರ್ಜಾರ್ ಸ್ಥಳೀಯ ದಿನಸಿ ಅಂಗಡಿಗೆ ಬಂದಿದ್ದಾಗ ಬೀದಿ ನಾಯಿ ದಾಳಿ ಮಾಡಿದೆ. ಬೀಳುತ್ತಿದ್ದಂತೆಯೇ ನಾಯಿ ಆಕೆಯ ಮುಖ, ಕುತ್ತಿಗೆ ಹಾಗೂ ಬಲ ಕಿವಿಗೆ ಕಚ್ಚಿದೆ.

ಬಾಲಕಿಯ ಮೇಲೆ ನಾಯಿ ದಾಳಿ ನಡೆಸುತ್ತಿರುವುದನ್ನು ಕಂಡ ಅಲ್ಲಿದ್ದವರೊಬ್ಬರು ಆಕೆಯ ಸಹಾಯ ಮಾಡಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಾಲಕಿಗೆ ಒಟ್ಟು 17 ಹೊಲಿಗೆಗಳನ್ನು ಹಾಕಲಾಗಿದೆ. ಕಿರಾಣಿ ಅಂಗಡಿ ಬಳಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇಡೀ ಘಟನೆ ಸೆರೆಯಾಗಿದೆ.

ಮತ್ತಷ್ಟು ಓದಿ: ಜನನಿಬಿಡ ಚೆನ್ನೈ ರಸ್ತೆಯಲ್ಲಿ ಒಂದು ಗಂಟೆಯೊಳಗೆ 29 ಜನರಿಗೆ ಕಚ್ಚಿದ ಬೀದಿನಾಯಿ

ಅದೇ ದಿನ ನಾಲ್ವರ ಮೇಲೆ ಬೀದಿ ನಾಯಿ ದಾಳಿ ಮಾಡಿದೆ ಗ್ರಾಮಸ್ಥರ ಪ್ರಕಾರ, ಅದೇ ದಿನ ಅರ್ಪಿತಾ ಗುರ್ಜರ್ ಹೊರತುಪಡಿಸಿ ನಾಲ್ಕು ಜನರ ಮೇಲೆ ಬೀದಿ ನಾಯಿ ದಾಳಿ ಮಾಡಿದೆ. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ. ಗಂಟೆಗಳ ಹುಡುಕಾಟದ ನಂತರ, ಬೀದಿ ನಾಯಿಯನ್ನು ನಾಗರಿಕ ಮಂಡಳಿಯ ಅಧಿಕಾರಿಗಳು ಪತ್ತೆ ಹಚ್ಚಿ ಹತ್ಯೆ ಮಾಡಿದ್ದಾರೆ.

ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದ ಸಾದತ್‌ಗಂಜ್ ಪ್ರದೇಶದಲ್ಲಿ 6 ವರ್ಷದ ಬಾಲಕಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಬೀದಿ ನಾಯಿಯೊಂದು ದಾಳಿ ಮಾಡಿತ್ತು. ವರದಿಗಳ ಪ್ರಕಾರ, ಆಲಿಯಾ ತನ್ನ ಅಣ್ಣನೊಂದಿಗೆ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಳು. ಇದ್ದಕ್ಕಿದ್ದಂತೆ 6 ನಾಯಿಗಳು ಆಲಿಯಾ ಬಳಿ ಬಂದು ದಾಳಿ ನಡೆಸಿತ್ತು.

ಆಲಿಯಾಳ ಕಿರುಚಾಟವನ್ನು ಕೇಳಿ ಆ ಪ್ರದೇಶದಿಂದ ಹಾದು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಆಕೆಗೆ ಸಹಾಯ ಮಾಡಲು ಧಾವಿಸಿ ನಾಯಿಗಳನ್ನು ಓಡಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ