AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ವಿದ್ಯಾರ್ಥಿಯೊಬ್ಬ ಫೋನ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್​ನಲ್ಲಿ ನಡೆದಿದೆ. ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆಯ ನಂತರ ಶನಿವಾರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ವಿದ್ಯಾರ್ಥಿ ರಾಹುಲ್ ಕುಮಾರ್ ಅವರನ್ನು ಪತ್ತೆ ಮಾಡಿದ್ದರು. ಆತ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ.

ಉತ್ತರ ಪ್ರದೇಶ: ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು
ಹತ್ರಾಸ್Image Credit source: Hindustan Times
ನಯನಾ ರಾಜೀವ್
|

Updated on: Mar 09, 2025 | 12:52 PM

Share

ಹತ್ರಾಸ್, ಮಾರ್ಚ್​ 9: ವಿದ್ಯಾರ್ಥಿಯೊಬ್ಬ ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್​ನಲ್ಲಿ ನಡೆದಿದೆ. ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆಯ ನಂತರ ಶನಿವಾರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ವಿದ್ಯಾರ್ಥಿ ರಾಹುಲ್ ಕುಮಾರ್ ಅವರನ್ನು ಪತ್ತೆ ಮಾಡಿದ್ದರು. ಆತ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ.

ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಟ್ರಾಕ್ಟರ್ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಸಂಬಂಧಿಕರೊಂದಿಗೆ ಮಾತನಾಡುತ್ತಿದ್ದಾಗ ವಿದ್ಯಾರ್ಥಿ ಬಾವಿಗೆ ಬಿದ್ದಿದ್ದಾನೆ. ರಾತ್ರಿ 11 ಗಂಟೆ ಸುಮಾರಿಗೆ, ಸ್ಥಳವು ಸಂಪೂರ್ಣವಾಗಿ ಕತ್ತಲೆಯಾಗಿತ್ತು. ಬಾವಿ ಪೊದೆಗಳಿಂದ ಆವೃತವಾಗಿತ್ತು.

ಬಾವಿ ತುಂಬಾ ಆಳವಾಗಿದ್ದರಿಂದ ಶೋಧ ಕಾರ್ಯಾಚರಣೆಗಾಗಿ ಪ್ರದೇಶದಲ್ಲಿ ತಾತ್ಕಾಲಿಕ ಬೆಳಕಿನ ವ್ಯವಸ್ಥೆ ಮಾಡಲಾಗಿತ್ತು ಎಂದು ಹತ್ರಾಸ್‌ನ ಠಾಣಾ ಅಧಿಕಾರಿ ಯೋಗೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಮತ್ತಷ್ಟು ಓದಿ:ನೋಯ್ಡಾ: ಸಾವಿನ ಹಾದಿ ತೋರಿದ ಗೂಗಲ್ ಮ್ಯಾಪ್, 30 ಅಡಿ ಆಳದ ಚರಂಡಿಗೆ ಬಿದ್ದು ವ್ಯಕ್ತಿ ಸಾವು

ಹತ್ರಾಸ್‌ನ ನಾಗ್ಲಾ ಪ್ರದೇಶದ ಈ ಯುವಕ ರಾತ್ರಿ ವೇಳೆ ತನ್ನ ಜಮೀನಿಗೆ ಟ್ರ್ಯಾಕ್ಟರ್ ಟ್ರಾಲಿಯಲ್ಲಿ ತುಂಬಿಸಲಾಗುತ್ತಿದ್ದ ಆಲೂಗಡ್ಡೆಯನ್ನು ನೋಡಿಕೊಳ್ಳಲು ಹೋಗಿದ್ದ. ಟ್ರ್ಯಾಕ್ಟರ್ ಕೆಟ್ಟುಹೋದಾಗ, ಅವನು ತನ್ನ ಚಿಕ್ಕಪ್ಪನಿಗೆ ಕರೆ ಮಾಡಲು ಹೋಗಿ ಕಾಲು ಜಾರಿ ಹಳೆಯ ಬಾವಿಗೆ ಬಿದ್ದಿದ್ದ.

ರಾಹುಲ್ ಒಬ್ಬ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ರವೀಂದರ್ ಸಿಂಗ್ ಎಂಬ ಸಹ ಗ್ರಾಮಸ್ಥರು ಹೇಳಿದ್ದಾರೆ. ಇನ್ನು ಕೆಲವರು ವಿದ್ಯಾರ್ಥಿ ರಾತ್ರಿ ವೇಳೆ ಕೃಷಿ ಕೆಲಸಕ್ಕೆ ಸಹಾಯ ಮಾಡುತ್ತಿದ್ದ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ