AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಬೈಕ್​ಗೆ ಡಿಕ್ಕಿ ಹೊಡೆದು ವ್ಯಕ್ತಿಯನ್ನು 3 ಕಿ.ಮೀ ಎಳೆದೊಯ್ದ ಕಾರು

ಹಿಟ್​ ಆ್ಯಂಡ್​ ರನ್ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಹಾಗೆಯೇ ಕಾರೊಂದು ಬೈಕ್​ಗೆ ಡಿಕ್ಕಿ ಹೊಡೆದು ಬಳಿಕ ಚಾಲಕನನ್ನು 3 ಕಿ.ಮೀ ಎಳೆದೊಯ್ದಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಾರು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಮೂವರ ಪೈಕಿ ಇಬ್ಬರು ಬಾಕ್​ನಿಂದ ಹಾರಿ ಕೆಳಗೆ ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಉತ್ತರ ಪ್ರದೇಶ: ಬೈಕ್​ಗೆ ಡಿಕ್ಕಿ ಹೊಡೆದು ವ್ಯಕ್ತಿಯನ್ನು 3 ಕಿ.ಮೀ ಎಳೆದೊಯ್ದ ಕಾರು
ಕಾರುImage Credit source: NDTV
ನಯನಾ ರಾಜೀವ್
|

Updated on: Feb 04, 2024 | 9:14 AM

Share

ಎಸ್​ಯುವಿ ಕಾರೊಂದು ಬೈಕ್​ಗೆ ಡಿಕ್ಕಿ ಹೊಡೆದು ವ್ಯಕ್ತಿಯನ್ನು 3 ಕಿ.ಮೀ ಎಳೆದೊಯ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಾರೊಂದು ಪತ್ನಿ, ಪತ್ನಿ ಹಾಗೂ ಮಗುವನ್ನು ಕರೆದೊಯ್ಯುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದ್ದಷ್ಟೇ ಅಲ್ಲದೆ ವ್ಯಕ್ತಿಯನ್ನು 3ಕಿ.ಮೀನಷ್ಟು ದೂರ ಎಳೆದೊಯ್ದಿದೆ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಪತ್ನಿ ಹಾಗೂ ಮಗುವಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ವೀರೇಂದ್ರ ಕುಮಾರ್ ಅವರು ಪತ್ನಿ ಮತ್ತು ಐದು ವರ್ಷದ ಮಗನೊಂದಿಗೆ ರಾಯ್ ಬರೇಲಿಯಿಂದ ದಾಲ್ಮೌ ಪಟ್ಟಣಕ್ಕೆ ಮನೆಗೆ ತೆರಳುತ್ತಿದ್ದಾಗ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪತ್ನಿ ಮತ್ತು ಮಗ ಬೈಕ್‌ನಿಂದ ಹಾರಿ ಬಿದ್ದಿದ್ದಾರೆ, ಆದರೆ ವ್ಯಕ್ತಿ ಬೈಕ್​ನಲ್ಲೇ ಸಿಲುಕಿಕೊಂಡಿದ್ದರು, ಅಪಘಾತದ ಪರಿಣಾಮ ಎಸ್‌ಯುವಿ ಮುಂಭಾಗದ ಭಾಗಗಳು ನುಜ್ಜುಗುಜ್ಜಾಗಿವೆ, ವೀರೇಂದ್ರ ಬಲ ಫೆಂಡರ್ ಮತ್ತು ಚಕ್ರದ ನಡುವೆ ಸಿಲುಕಿಕೊಂಡಿದ್ದರು.

ಅಪಘಾತದ ನಂತರ ಚಾಲಕ ನಿಲ್ಲಿಸದೆ ವೀರೇಂದ್ರನನ್ನು ಕಾರಿನೊಂದಿಗೆ ಸುಮಾರು 3 ಕಿ.ಮೀ ಎಳೆದೊಯ್ದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊನೆಗೆ ಆತ ನಿಲ್ಲಿಸಿದಾಗ ದಾರಿಹೋಕರು ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮತ್ತಷ್ಟು ಓದಿ: ಭುವನೇಶ್ವರ: ಬೈಕ್​ಗೆ ಡಿಕ್ಕಿ ಹೊಡೆದು ಒಂದು ಕಿ.ಮೀವರೆಗೆ ಎಳೆದೊಯ್ದ ಕಾರು, ಎದೆ ಝಲ್ಲೆನಿಸುವ ವಿಡಿಯೋ

ವೀರೇಂದ್ರ, ಅವರ ಪತ್ನಿ ರೂಪಾಲ್ ಮತ್ತು ಪುತ್ರ ಅನುರಾಗ್ ಅವರನ್ನು ರಾಯ್ ಬರೇಲಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ನಂತರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ವೀರೇಂದ್ರ ಮೃತಪಟ್ಟಿದ್ದು, ಅವರ ಪತ್ನಿ ಮತ್ತು ಮಗು ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು. ಲಾಲ್‌ಗಂಜ್ ಠಾಣಾಧಿಕಾರಿ ಶಿವಶಂಕರ್ ಸಿಂಗ್ ಮಾತನಾಡಿ, ಚಾಲಕನನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಮತ್ತೊಂದು ಘಟನೆ

ಬೈಕ್​ಗೆ ಡಿಕ್ಕಿ ಹೊಡೆದು ಒಂದು ಕಿ.ಮೀವರೆಗೆ ಎಳೆದೊಯ್ದ ಕಾರು

ವೇಗವಾಗಿ ಬಂದ ಕಾರೊಂದು ಬೈಕ್​ಗೆ ಡಿಕ್ಕಿ ಹೊಡೆದು ಒಂದು ಕಿ.ಮೀ ಎಳೆದೊಯ್ದಿರುವ ಘಟನೆ ಭುವನೇಶ್ವರದಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನವರಿ 31ರ ರಾತ್ರಿ ನಡೆದ ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಸುಮಾರು ಒಂದು ಕಿಲೋಮೀಟರ್ ದೂರ ಬೈಕ್ ಅನ್ನು ಎಳೆದುಕೊಂಡು ಹೋಗುತ್ತಿದ್ದಾಗ ಕಾರಿನ ಕೆಳಗಡೆ ಬೆಂಕಿ ಕಿಡಿಗಳು ಹೊರಬರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಆ ಘಟನೆ ನೋಡಿದರೆ ಬೈಕ್​ ಸವಾರ ಬದುಕುಳಿದಂತೆ ಕಾಣುತ್ತಿಲ್ಲ, ಬೈಕ್ ಸವಾರನ ಮೇಲೆ ಹಳೆಯ ವೈಷಮ್ಯ ಏನಾದರೂ ಇತ್ತೇ, ಅಥವಾ ಕಾರು ಚಾಲಕ ಮದ್ಯದ ನಶೆಯಲ್ಲಿದ್ದನೇ ಎನ್ನುವ ಪ್ರಶ್ನೆ ಕಾಡುತ್ತಿದೆ. ಕಾರು ಬೈಕ್​ಗೆ ಡಿಕ್ಕಿಯಾದಾಗ ನಿಲ್ಲಿಸುವುದು ಬಿಟ್ಟು ಕಿಲೋಮೀಟರ್​ಗಳಷ್ಟು ದೂರ ಏಕೆ ಎಳೆದುಕೊಂಡು ಹೋಗಿದ್ದಾರೆ ಎನ್ನುವ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹಿಟ್​ ಆ್ಯಂಡ್​ ರನ್ ಪ್ರಕರಣಗಳು ಹೆಚ್ಚಾಗುತ್ತಿವೆ. ದೆಹಲಿಯಲ್ಲಿ ಕಳೆದ ವರ್ಷ ನ್ಯೂ ಇಯರ್ ಸಂದರ್ಭದಲ್ಲಿ ಸ್ಕೂಟಿಗೆ ಕಾರೊಂದು ಡಿಕ್ಕಿ ಹೊಡೆದು ಯುವತಿಯೊನ್ನು ಕಿಲೋಮೀಟರ್​ಗಳವರೆಗೆ ಎಳೆದೊಯ್ದ ಘಟನೆಯೂ ನಡೆದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!