AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೆ ಪಾಠ ಮಾಡುವುದು ಬಿಟ್ಟು ಮೊಬೈಲ್​ನಲ್ಲಿ ಕ್ಯಾಂಡಿಕ್ರಷ್ ಆಡ್ತಿದ್ದ ಶಿಕ್ಷಕ ಅಮಾನತು

ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ಕೆಲಸದ ಸಮಯದಲ್ಲಿ ಕ್ಯಾಂಡಿಕ್ರಷ್ ಆಡುತ್ತಿದ್ದ ಶಿಕ್ಷಕನನ್ನು ಶಿಕ್ಷಣ ಇಲಾಖೆಯು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಮಕ್ಕಳಿಗೆ ಪಾಠ ಮಾಡುವುದು ಬಿಟ್ಟು ಮೊಬೈಲ್​ನಲ್ಲಿ ಕ್ಯಾಂಡಿಕ್ರಷ್ ಆಡ್ತಿದ್ದ ಶಿಕ್ಷಕ ಅಮಾನತು
ಶಿಕ್ಷಕ
ನಯನಾ ರಾಜೀವ್
|

Updated on: Jul 11, 2024 | 12:30 PM

Share

ಮಕ್ಕಳಿಗೆ ಪಾಠ ಮಾಡುವ ಸಮಯದಲ್ಲಿ ಮೊಬೈಲ್​ ಹಿಡಿದು ಕ್ಯಾಂಡಿಕ್ರಶ್​ ಆಟವಾಡುತ್ತಿದ್ದ ಶಿಕ್ಷಕನನ್ನು ಅಮಾನತುಗೊಳಿಸಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಕರ್ತವ್ಯದ ಸಮಯದಲ್ಲಿ ಮೊಬೈಲ್​ನಲ್ಲಿ ಆಟವಾಡುತ್ತಾ ಇದ್ದಿದ್ದಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಪನ್ಸಿಯಾ ಅವರು ಪರಿಶೀಲನೆಗಾಗಿ ಶಾಲೆಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಮಕ್ಕಳ ಪುಸ್ತಕ ತೆಗೆದು ನೋಡಿದಾಗ ಹೆಚ್ಚಿನ ತಪ್ಪುಗಳು ಎದ್ದು ಕಾಣಿಸಿದ್ದವು ಈ ಕುರಿತು ಮಕ್ಕಳನ್ನು ವಿಚಾರಿಸಿದಾಗ ಇದು ತಿಳಿದಿದೆ.

ಅವರು ಕರ್ತವ್ಯದ ಸಮಯದಲ್ಲಿ ಗಂಟೆಗಳ ಕಾಲ ಕ್ಯಾಂಡಿಕ್ರಷ್ ಆಡಿಕೊಂಡು ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂಬುದು ಗೊತ್ತಾಗಿದೆ. ಶಿಕ್ಷಕರು ವಿದ್ಯಾರ್ಥಿಗಳ ಹೋಂವರ್ಕ್​ ಬಗ್ಗೆ ಗಮನಕೊಡುತ್ತಿರಲಿಲ್ಲ, ಶಿಕ್ಷಣ ಗುಣಮಟ್ಟವನ್ನು ಕಾಪಾಡುವಲ್ಲಿ ಸೋತಿದ್ದಾರೆ ಎಂದು ಆರೋಪಿಸಲಾಗಿದೆ.

ಶಾಲಾ ಸಮಯದಲ್ಲಿ ಮೊಬೈಲ್ ಫೋನ್​ಗಳನ್ನು ಬಳಸುವುದು ಸೂಕ್ತವಲ್ಲ, ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಪನ್ಸಿಯಾ ಅವರು ಆರು ವಿದ್ಯಾರ್ಥಿಗಳ ಹೋಂವರ್ಕ್​ನಲ್ಲಿ ಆರು ಪುಟಗಳನ್ನು ಪರಿಶೀಲಿಸಿದರು ಮತ್ತು 95 ತಪ್ಪುಗಳನ್ನು ಗುರುತಿಸಿದರು.

ಮತ್ತಷ್ಟು ಓದಿ: ಯಾದಗಿರಿ: ಎಸ್‌ಎಸ್‌ಎಲ್‌ಸಿ‌ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು

ಒಂಬತ್ತು ಮೊದಲ ಪುಟದಲ್ಲಿಯೇ ಇತ್ತು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು ಸಹಾಯಕ ಶಿಕ್ಷಕಿ ಪ್ರಿಯಾಂ ಗೋಯಲ್ ಅವರ ಫೋನ್ ಪರಿಶೀಲಿಸಿದರು. ಶಿಕ್ಷಕರು ಮೊಬೈಲ್​ನಲ್ಲಿ ಕ್ಯಾಂಡಿಕ್ರಷ್ ಪ್ರತಿದಿನ ಒಂದೂವರೆ ಗಂಟೆಗಳಿಗಿಂತ ಹೆಚ್ಚು ಕಾಲ ಉಪಯೋಗಿಸುತ್ತಾರೆ ಎಂಬುದು ತಿಳಿದುಬಂದಿದೆ.

ಶಾಲೆಯ ಐದೂವರೆ ಗಂಟೆಗಳಲ್ಲಿ, ಪ್ರಿಯಮ್ ಗೋಯಲ್ ಕ್ಯಾಂಡಿ ಕ್ರಷ್‌ನಲ್ಲಿ ಸುಮಾರು ಎರಡು ಗಂಟೆಗಳ ಕಾಲ ಕಳೆಯುತ್ತಾರೆ, 26 ನಿಮಿಷಗಳ ಕಾಲ ಫೋನ್‌ನಲ್ಲಿ ಮಾತನಾಡುತ್ತಾರೆ ಮತ್ತು ಸುಮಾರು 30 ನಿಮಿಷಗಳ ಕಾಲ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್‌ಗಳನ್ನು ಬಳಸುತ್ತಾರೆ ಎಂಬುದು ತಿಳಿದುಬಂದಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ನಂತರ ರಾಜ್ಯ ಶಿಕ್ಷಣ ಇಲಾಖೆಗೆ ವಿಷಯದ ಬಗ್ಗೆ ತಿಳಿಸಿದ್ದು, ನಂತರ ಅವರು ಅದನ್ನು ಅರಿತುಕೊಂಡು ಸಹಾಯಕ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ