AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೆ ಪಾಠ ಮಾಡುವುದು ಬಿಟ್ಟು ಮೊಬೈಲ್​ನಲ್ಲಿ ಕ್ಯಾಂಡಿಕ್ರಷ್ ಆಡ್ತಿದ್ದ ಶಿಕ್ಷಕ ಅಮಾನತು

ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ಕೆಲಸದ ಸಮಯದಲ್ಲಿ ಕ್ಯಾಂಡಿಕ್ರಷ್ ಆಡುತ್ತಿದ್ದ ಶಿಕ್ಷಕನನ್ನು ಶಿಕ್ಷಣ ಇಲಾಖೆಯು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಮಕ್ಕಳಿಗೆ ಪಾಠ ಮಾಡುವುದು ಬಿಟ್ಟು ಮೊಬೈಲ್​ನಲ್ಲಿ ಕ್ಯಾಂಡಿಕ್ರಷ್ ಆಡ್ತಿದ್ದ ಶಿಕ್ಷಕ ಅಮಾನತು
ಶಿಕ್ಷಕ
ನಯನಾ ರಾಜೀವ್
|

Updated on: Jul 11, 2024 | 12:30 PM

Share

ಮಕ್ಕಳಿಗೆ ಪಾಠ ಮಾಡುವ ಸಮಯದಲ್ಲಿ ಮೊಬೈಲ್​ ಹಿಡಿದು ಕ್ಯಾಂಡಿಕ್ರಶ್​ ಆಟವಾಡುತ್ತಿದ್ದ ಶಿಕ್ಷಕನನ್ನು ಅಮಾನತುಗೊಳಿಸಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಕರ್ತವ್ಯದ ಸಮಯದಲ್ಲಿ ಮೊಬೈಲ್​ನಲ್ಲಿ ಆಟವಾಡುತ್ತಾ ಇದ್ದಿದ್ದಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಪನ್ಸಿಯಾ ಅವರು ಪರಿಶೀಲನೆಗಾಗಿ ಶಾಲೆಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಮಕ್ಕಳ ಪುಸ್ತಕ ತೆಗೆದು ನೋಡಿದಾಗ ಹೆಚ್ಚಿನ ತಪ್ಪುಗಳು ಎದ್ದು ಕಾಣಿಸಿದ್ದವು ಈ ಕುರಿತು ಮಕ್ಕಳನ್ನು ವಿಚಾರಿಸಿದಾಗ ಇದು ತಿಳಿದಿದೆ.

ಅವರು ಕರ್ತವ್ಯದ ಸಮಯದಲ್ಲಿ ಗಂಟೆಗಳ ಕಾಲ ಕ್ಯಾಂಡಿಕ್ರಷ್ ಆಡಿಕೊಂಡು ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂಬುದು ಗೊತ್ತಾಗಿದೆ. ಶಿಕ್ಷಕರು ವಿದ್ಯಾರ್ಥಿಗಳ ಹೋಂವರ್ಕ್​ ಬಗ್ಗೆ ಗಮನಕೊಡುತ್ತಿರಲಿಲ್ಲ, ಶಿಕ್ಷಣ ಗುಣಮಟ್ಟವನ್ನು ಕಾಪಾಡುವಲ್ಲಿ ಸೋತಿದ್ದಾರೆ ಎಂದು ಆರೋಪಿಸಲಾಗಿದೆ.

ಶಾಲಾ ಸಮಯದಲ್ಲಿ ಮೊಬೈಲ್ ಫೋನ್​ಗಳನ್ನು ಬಳಸುವುದು ಸೂಕ್ತವಲ್ಲ, ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಪನ್ಸಿಯಾ ಅವರು ಆರು ವಿದ್ಯಾರ್ಥಿಗಳ ಹೋಂವರ್ಕ್​ನಲ್ಲಿ ಆರು ಪುಟಗಳನ್ನು ಪರಿಶೀಲಿಸಿದರು ಮತ್ತು 95 ತಪ್ಪುಗಳನ್ನು ಗುರುತಿಸಿದರು.

ಮತ್ತಷ್ಟು ಓದಿ: ಯಾದಗಿರಿ: ಎಸ್‌ಎಸ್‌ಎಲ್‌ಸಿ‌ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು

ಒಂಬತ್ತು ಮೊದಲ ಪುಟದಲ್ಲಿಯೇ ಇತ್ತು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು ಸಹಾಯಕ ಶಿಕ್ಷಕಿ ಪ್ರಿಯಾಂ ಗೋಯಲ್ ಅವರ ಫೋನ್ ಪರಿಶೀಲಿಸಿದರು. ಶಿಕ್ಷಕರು ಮೊಬೈಲ್​ನಲ್ಲಿ ಕ್ಯಾಂಡಿಕ್ರಷ್ ಪ್ರತಿದಿನ ಒಂದೂವರೆ ಗಂಟೆಗಳಿಗಿಂತ ಹೆಚ್ಚು ಕಾಲ ಉಪಯೋಗಿಸುತ್ತಾರೆ ಎಂಬುದು ತಿಳಿದುಬಂದಿದೆ.

ಶಾಲೆಯ ಐದೂವರೆ ಗಂಟೆಗಳಲ್ಲಿ, ಪ್ರಿಯಮ್ ಗೋಯಲ್ ಕ್ಯಾಂಡಿ ಕ್ರಷ್‌ನಲ್ಲಿ ಸುಮಾರು ಎರಡು ಗಂಟೆಗಳ ಕಾಲ ಕಳೆಯುತ್ತಾರೆ, 26 ನಿಮಿಷಗಳ ಕಾಲ ಫೋನ್‌ನಲ್ಲಿ ಮಾತನಾಡುತ್ತಾರೆ ಮತ್ತು ಸುಮಾರು 30 ನಿಮಿಷಗಳ ಕಾಲ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್‌ಗಳನ್ನು ಬಳಸುತ್ತಾರೆ ಎಂಬುದು ತಿಳಿದುಬಂದಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ನಂತರ ರಾಜ್ಯ ಶಿಕ್ಷಣ ಇಲಾಖೆಗೆ ವಿಷಯದ ಬಗ್ಗೆ ತಿಳಿಸಿದ್ದು, ನಂತರ ಅವರು ಅದನ್ನು ಅರಿತುಕೊಂಡು ಸಹಾಯಕ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ವಾಯುಭಾರ ಕುಸಿತ: ಕರ್ನಾಟಕದಲ್ಲಿ 3 ದಿನ ಭಾರೀ ಮಳೆ, ಎಲ್ಲೆಲ್ಲಿ?
ವಾಯುಭಾರ ಕುಸಿತ: ಕರ್ನಾಟಕದಲ್ಲಿ 3 ದಿನ ಭಾರೀ ಮಳೆ, ಎಲ್ಲೆಲ್ಲಿ?
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ