Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತದ ಮಡುವಿನಲ್ಲಿ ನರಳಾಡುತ್ತಿರುವ ಬಾಲಕಿ: ಸಹಾಯಕ್ಕೆ ಧಾವಿಸದೆ ವಿಡಿಯೋ ಮಾಡುತ್ತಾ ನಿಂತ ಜನ

ರಕ್ತದಲ್ಲಿ ಮಡುವಿನಲ್ಲಿ ನರಳಾಡುತ್ತಿದ್ದ 12 ವರ್ಷದ ಅಪ್ರಾಪ್ತ ಬಾಲಕಿಯ ಸಹಾಯಕ್ಕೆ ಧಾವಿಸದ ಜನರು

ರಕ್ತದ ಮಡುವಿನಲ್ಲಿ ನರಳಾಡುತ್ತಿರುವ ಬಾಲಕಿ: ಸಹಾಯಕ್ಕೆ ಧಾವಿಸದೆ ವಿಡಿಯೋ ಮಾಡುತ್ತಾ ನಿಂತ ಜನ
ರಕ್ತದ ಮಡುವಿನಲ್ಲಿ ಮಲಗಿರುವ ಬಾಲಕಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 25, 2022 | 4:44 PM

ಉತ್ತರಪ್ರದೇಶ: ಕಲೆವೊಂದು ಸಲ ಜನರು ಅಮಾನವೀಯತೆಯಿಂದ ನಡೆದುಕೊಂಡಿರುವುದನ್ನು ಕಾಣಬಹದು. ಇದೇ ರೀತಿಯಾಗಿ ಉತ್ತರ ಪ್ರದೇಶದ ಕನೌಜ್​ನಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದು, ಸಹಾಯಕ್ಕೆ ಅಂಗಲಾಚುತ್ತಿದ್ದಾಳೆ. ಆದರೆ ಈಕೆಯ ಸಹಾಯಕ್ಕೆ ಯಾರು ಕೂಡ ಧಾವಿಸದೆ, ಬಾಲಕಿಯ ನರಳಾಟವನ್ನು ವಿಡಿಯೋ ಮಾಡುತ್ತಾ ನಿಂತಿದ್ದು, ಅಮಾನವಿಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ನಂತರ ಕನೌಜ್​ನ ದಕ್ ಬಾಂಗ್ಲಾ ಅತಿಥಿ ಗೃಹದ ಹಿಂದೆ ಎಸೆಯಲಾಗಿದ್ದು, ಆಕೆಯ ತಲೆ ಸೇರಿದಂತೆ ದೇಹದ ಹಲವು ಕಡೆ ಗಾಯಗಳಾಗಿವೆ ಎಂದು ಸ್ಥಳಿಯರು ಆರೋಪಿಸಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ಇಂಡಿಯಾ ಡಾಟ್​ ಕಾಮ್​ ವರದಿ ಮಾಡಿದೆ.

ವೀಡಿಯೊದಲ್ಲಿ, ಬಾಲಕಿ ಸಹಾಯಕ್ಕಾಗಿ ಅಂಗಲಾಚುತ್ತಿರುವುದನ್ನು ಕಾಣಬಹುದಾಗಿದೆ. ಆದರೆ ಆಕೆಯ ಸುತ್ತ ನಿಂತ ಪುರುಷರು ಆಕೆಯ ಸಹಾಯಕ್ಕೆ ಬರದೆ ವಿಡಿಯೋ ಮಾಡುತ್ತಾ ನಿಂತಿದ್ದಾರೆ. ವೀಡಿಯೊದಲ್ಲಿ ಓರ್ವ ಪುರುಷ ಪೊಲೀಸರಿಗೆ ಮಾಹಿತಿ ನೀಡಿದ್ದೀರಾ ಎಂದು ಕೇಳುತ್ತಿದ್ದಾನೆ. ಇನ್ನೊಬ್ಬ ಪೊಲೀಸ್ ಮುಖ್ಯಸ್ಥರ ಸಂಖ್ಯೆಯನ್ನು ಕೇಳಿದನು. ಆದರೆ ಬಾಲಕಿಗೆ ಸಹಾಯ ಮಾಡುವ ಯಾವುದೇ ಪ್ರಯತ್ನವಿಲ್ಲದೆ ಚಿತ್ರೀಕರಣ ಮಾಡುತ್ತಾ ನಿಂತಿದ್ದಾರೆ. ಪೊಲೀಸರು ಬರುವವರೆಗೂ ಆಕೆ ಸಹಾಯಕ್ಕಾಗಿ ಯಾರು ಕೂಡ ಮುಂದಾಗಲಿಲ್ಲ ಎಂದು ವರದಿಯಾಗಿದೆ.

ಕೆಲವು ಸಮಯದ ಬಳಿಕ ಸ್ಥಳಕ್ಕೆ ಬಂದ ಸ್ಥಳೀಯ ಪೊಲೀಸ್ ಔಟ್‌ಪೋಸ್ಟ್ ಇನ್‌ಚಾರ್ಜ್ ಗಾಯಗೊಂಡ ಹುಡುಗಿಯನ್ನು ಎತ್ತುಕೊಂಡು ಆಟೋರಿಕ್ಷಾದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕುನ್ವರ್ ಅನುಪಮ್ ಸಿಂಗ್ ತಿಳಿಸಿದ್ದಾರೆ.

ಬಾಲಕಿಯ ಕುಟುಂಬದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಎಸೆದಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪೊಲೀಸರು ಅವರ ಹೇಳಿಕೆಯನ್ನು ತಳ್ಳಿಹಾಕಿದ್ದು, ಸದ್ಯ ಯಾವುದೇ ತೀರ್ಮಾನಕ್ಕೆ ಬರಲು ಆಗುವುದಿಲ್ಲ ಗುರ್ಸಹೈಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಮನೋಜ್ ಪಾಂಡೆ ತಿಳಿಸಿದ್ದಾರೆ.

Published On - 4:43 pm, Tue, 25 October 22

ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ