AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತದ ಮಡುವಿನಲ್ಲಿ ನರಳಾಡುತ್ತಿರುವ ಬಾಲಕಿ: ಸಹಾಯಕ್ಕೆ ಧಾವಿಸದೆ ವಿಡಿಯೋ ಮಾಡುತ್ತಾ ನಿಂತ ಜನ

ರಕ್ತದಲ್ಲಿ ಮಡುವಿನಲ್ಲಿ ನರಳಾಡುತ್ತಿದ್ದ 12 ವರ್ಷದ ಅಪ್ರಾಪ್ತ ಬಾಲಕಿಯ ಸಹಾಯಕ್ಕೆ ಧಾವಿಸದ ಜನರು

ರಕ್ತದ ಮಡುವಿನಲ್ಲಿ ನರಳಾಡುತ್ತಿರುವ ಬಾಲಕಿ: ಸಹಾಯಕ್ಕೆ ಧಾವಿಸದೆ ವಿಡಿಯೋ ಮಾಡುತ್ತಾ ನಿಂತ ಜನ
ರಕ್ತದ ಮಡುವಿನಲ್ಲಿ ಮಲಗಿರುವ ಬಾಲಕಿ
TV9 Web
| Edited By: ವಿವೇಕ ಬಿರಾದಾರ|

Updated on:Oct 25, 2022 | 4:44 PM

Share

ಉತ್ತರಪ್ರದೇಶ: ಕಲೆವೊಂದು ಸಲ ಜನರು ಅಮಾನವೀಯತೆಯಿಂದ ನಡೆದುಕೊಂಡಿರುವುದನ್ನು ಕಾಣಬಹದು. ಇದೇ ರೀತಿಯಾಗಿ ಉತ್ತರ ಪ್ರದೇಶದ ಕನೌಜ್​ನಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದು, ಸಹಾಯಕ್ಕೆ ಅಂಗಲಾಚುತ್ತಿದ್ದಾಳೆ. ಆದರೆ ಈಕೆಯ ಸಹಾಯಕ್ಕೆ ಯಾರು ಕೂಡ ಧಾವಿಸದೆ, ಬಾಲಕಿಯ ನರಳಾಟವನ್ನು ವಿಡಿಯೋ ಮಾಡುತ್ತಾ ನಿಂತಿದ್ದು, ಅಮಾನವಿಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ನಂತರ ಕನೌಜ್​ನ ದಕ್ ಬಾಂಗ್ಲಾ ಅತಿಥಿ ಗೃಹದ ಹಿಂದೆ ಎಸೆಯಲಾಗಿದ್ದು, ಆಕೆಯ ತಲೆ ಸೇರಿದಂತೆ ದೇಹದ ಹಲವು ಕಡೆ ಗಾಯಗಳಾಗಿವೆ ಎಂದು ಸ್ಥಳಿಯರು ಆರೋಪಿಸಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ಇಂಡಿಯಾ ಡಾಟ್​ ಕಾಮ್​ ವರದಿ ಮಾಡಿದೆ.

ವೀಡಿಯೊದಲ್ಲಿ, ಬಾಲಕಿ ಸಹಾಯಕ್ಕಾಗಿ ಅಂಗಲಾಚುತ್ತಿರುವುದನ್ನು ಕಾಣಬಹುದಾಗಿದೆ. ಆದರೆ ಆಕೆಯ ಸುತ್ತ ನಿಂತ ಪುರುಷರು ಆಕೆಯ ಸಹಾಯಕ್ಕೆ ಬರದೆ ವಿಡಿಯೋ ಮಾಡುತ್ತಾ ನಿಂತಿದ್ದಾರೆ. ವೀಡಿಯೊದಲ್ಲಿ ಓರ್ವ ಪುರುಷ ಪೊಲೀಸರಿಗೆ ಮಾಹಿತಿ ನೀಡಿದ್ದೀರಾ ಎಂದು ಕೇಳುತ್ತಿದ್ದಾನೆ. ಇನ್ನೊಬ್ಬ ಪೊಲೀಸ್ ಮುಖ್ಯಸ್ಥರ ಸಂಖ್ಯೆಯನ್ನು ಕೇಳಿದನು. ಆದರೆ ಬಾಲಕಿಗೆ ಸಹಾಯ ಮಾಡುವ ಯಾವುದೇ ಪ್ರಯತ್ನವಿಲ್ಲದೆ ಚಿತ್ರೀಕರಣ ಮಾಡುತ್ತಾ ನಿಂತಿದ್ದಾರೆ. ಪೊಲೀಸರು ಬರುವವರೆಗೂ ಆಕೆ ಸಹಾಯಕ್ಕಾಗಿ ಯಾರು ಕೂಡ ಮುಂದಾಗಲಿಲ್ಲ ಎಂದು ವರದಿಯಾಗಿದೆ.

ಕೆಲವು ಸಮಯದ ಬಳಿಕ ಸ್ಥಳಕ್ಕೆ ಬಂದ ಸ್ಥಳೀಯ ಪೊಲೀಸ್ ಔಟ್‌ಪೋಸ್ಟ್ ಇನ್‌ಚಾರ್ಜ್ ಗಾಯಗೊಂಡ ಹುಡುಗಿಯನ್ನು ಎತ್ತುಕೊಂಡು ಆಟೋರಿಕ್ಷಾದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕುನ್ವರ್ ಅನುಪಮ್ ಸಿಂಗ್ ತಿಳಿಸಿದ್ದಾರೆ.

ಬಾಲಕಿಯ ಕುಟುಂಬದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಎಸೆದಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪೊಲೀಸರು ಅವರ ಹೇಳಿಕೆಯನ್ನು ತಳ್ಳಿಹಾಕಿದ್ದು, ಸದ್ಯ ಯಾವುದೇ ತೀರ್ಮಾನಕ್ಕೆ ಬರಲು ಆಗುವುದಿಲ್ಲ ಗುರ್ಸಹೈಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಮನೋಜ್ ಪಾಂಡೆ ತಿಳಿಸಿದ್ದಾರೆ.

Published On - 4:43 pm, Tue, 25 October 22

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು