AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತದ ಮಡುವಿನಲ್ಲಿ ನರಳಾಡುತ್ತಿರುವ ಬಾಲಕಿ: ಸಹಾಯಕ್ಕೆ ಧಾವಿಸದೆ ವಿಡಿಯೋ ಮಾಡುತ್ತಾ ನಿಂತ ಜನ

ರಕ್ತದಲ್ಲಿ ಮಡುವಿನಲ್ಲಿ ನರಳಾಡುತ್ತಿದ್ದ 12 ವರ್ಷದ ಅಪ್ರಾಪ್ತ ಬಾಲಕಿಯ ಸಹಾಯಕ್ಕೆ ಧಾವಿಸದ ಜನರು

ರಕ್ತದ ಮಡುವಿನಲ್ಲಿ ನರಳಾಡುತ್ತಿರುವ ಬಾಲಕಿ: ಸಹಾಯಕ್ಕೆ ಧಾವಿಸದೆ ವಿಡಿಯೋ ಮಾಡುತ್ತಾ ನಿಂತ ಜನ
ರಕ್ತದ ಮಡುವಿನಲ್ಲಿ ಮಲಗಿರುವ ಬಾಲಕಿ
TV9 Web
| Updated By: ವಿವೇಕ ಬಿರಾದಾರ|

Updated on:Oct 25, 2022 | 4:44 PM

Share

ಉತ್ತರಪ್ರದೇಶ: ಕಲೆವೊಂದು ಸಲ ಜನರು ಅಮಾನವೀಯತೆಯಿಂದ ನಡೆದುಕೊಂಡಿರುವುದನ್ನು ಕಾಣಬಹದು. ಇದೇ ರೀತಿಯಾಗಿ ಉತ್ತರ ಪ್ರದೇಶದ ಕನೌಜ್​ನಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದು, ಸಹಾಯಕ್ಕೆ ಅಂಗಲಾಚುತ್ತಿದ್ದಾಳೆ. ಆದರೆ ಈಕೆಯ ಸಹಾಯಕ್ಕೆ ಯಾರು ಕೂಡ ಧಾವಿಸದೆ, ಬಾಲಕಿಯ ನರಳಾಟವನ್ನು ವಿಡಿಯೋ ಮಾಡುತ್ತಾ ನಿಂತಿದ್ದು, ಅಮಾನವಿಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ನಂತರ ಕನೌಜ್​ನ ದಕ್ ಬಾಂಗ್ಲಾ ಅತಿಥಿ ಗೃಹದ ಹಿಂದೆ ಎಸೆಯಲಾಗಿದ್ದು, ಆಕೆಯ ತಲೆ ಸೇರಿದಂತೆ ದೇಹದ ಹಲವು ಕಡೆ ಗಾಯಗಳಾಗಿವೆ ಎಂದು ಸ್ಥಳಿಯರು ಆರೋಪಿಸಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ಇಂಡಿಯಾ ಡಾಟ್​ ಕಾಮ್​ ವರದಿ ಮಾಡಿದೆ.

ವೀಡಿಯೊದಲ್ಲಿ, ಬಾಲಕಿ ಸಹಾಯಕ್ಕಾಗಿ ಅಂಗಲಾಚುತ್ತಿರುವುದನ್ನು ಕಾಣಬಹುದಾಗಿದೆ. ಆದರೆ ಆಕೆಯ ಸುತ್ತ ನಿಂತ ಪುರುಷರು ಆಕೆಯ ಸಹಾಯಕ್ಕೆ ಬರದೆ ವಿಡಿಯೋ ಮಾಡುತ್ತಾ ನಿಂತಿದ್ದಾರೆ. ವೀಡಿಯೊದಲ್ಲಿ ಓರ್ವ ಪುರುಷ ಪೊಲೀಸರಿಗೆ ಮಾಹಿತಿ ನೀಡಿದ್ದೀರಾ ಎಂದು ಕೇಳುತ್ತಿದ್ದಾನೆ. ಇನ್ನೊಬ್ಬ ಪೊಲೀಸ್ ಮುಖ್ಯಸ್ಥರ ಸಂಖ್ಯೆಯನ್ನು ಕೇಳಿದನು. ಆದರೆ ಬಾಲಕಿಗೆ ಸಹಾಯ ಮಾಡುವ ಯಾವುದೇ ಪ್ರಯತ್ನವಿಲ್ಲದೆ ಚಿತ್ರೀಕರಣ ಮಾಡುತ್ತಾ ನಿಂತಿದ್ದಾರೆ. ಪೊಲೀಸರು ಬರುವವರೆಗೂ ಆಕೆ ಸಹಾಯಕ್ಕಾಗಿ ಯಾರು ಕೂಡ ಮುಂದಾಗಲಿಲ್ಲ ಎಂದು ವರದಿಯಾಗಿದೆ.

ಕೆಲವು ಸಮಯದ ಬಳಿಕ ಸ್ಥಳಕ್ಕೆ ಬಂದ ಸ್ಥಳೀಯ ಪೊಲೀಸ್ ಔಟ್‌ಪೋಸ್ಟ್ ಇನ್‌ಚಾರ್ಜ್ ಗಾಯಗೊಂಡ ಹುಡುಗಿಯನ್ನು ಎತ್ತುಕೊಂಡು ಆಟೋರಿಕ್ಷಾದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕುನ್ವರ್ ಅನುಪಮ್ ಸಿಂಗ್ ತಿಳಿಸಿದ್ದಾರೆ.

ಬಾಲಕಿಯ ಕುಟುಂಬದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಎಸೆದಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪೊಲೀಸರು ಅವರ ಹೇಳಿಕೆಯನ್ನು ತಳ್ಳಿಹಾಕಿದ್ದು, ಸದ್ಯ ಯಾವುದೇ ತೀರ್ಮಾನಕ್ಕೆ ಬರಲು ಆಗುವುದಿಲ್ಲ ಗುರ್ಸಹೈಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಮನೋಜ್ ಪಾಂಡೆ ತಿಳಿಸಿದ್ದಾರೆ.

Published On - 4:43 pm, Tue, 25 October 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!