AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಮಗುವಾಗಲಿಲ್ಲ ಎಂದು ಮಾಂತ್ರಿಕನ ಬಳಿ ಹೋಗಿ ಶವವಾಗಿ ಬಂದ ಮಹಿಳೆ

ಮದುವೆಯಾಗಿ 10 ವರ್ಷಗಳು ಕಳೆದರೂ ಮಗುವಾಗಿಲ್ಲ ಎಂದು ಮಾಂತ್ರಿಕನ ಮೊರೆ ಹೋಗಿದ್ದ ಮಹಿಳೆ ಶವವಾಗಿ ಮನೆಗೆ ಬಂದಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಉತ್ತರ ಪ್ರದೇಶದ ಅಜಮ್‌ಗಢ ಮೂಲದ ಮಹಿಳೆ ಮೂಢನಂಬಿಕೆಗೆ ಬಲಿಯಾಗಿದ್ದಾಳೆ. ಮದುವೆಯಾಗಿ ಹತ್ತು ವರ್ಷಗಳಾದರೂ ಮಗುವಿಗೆ ಜನ್ಮ ನೀಡಲು ಸಾಧ್ಯವಾಗದ ಕಾರಣ ಮಹಿಳೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು.

ಉತ್ತರ ಪ್ರದೇಶ: ಮಗುವಾಗಲಿಲ್ಲ ಎಂದು ಮಾಂತ್ರಿಕನ ಬಳಿ ಹೋಗಿ ಶವವಾಗಿ ಬಂದ ಮಹಿಳೆ
ಮಹಿಳೆImage Credit source: Kerala Kaumudi
ನಯನಾ ರಾಜೀವ್
|

Updated on: Jul 09, 2025 | 1:27 PM

Share

ಲಕ್ನೋ, ಜುಲೈ 09: ಮದುವೆಯಾಗಿ 10 ವರ್ಷಗಳು ಕಳೆದರೂ ಮಗುವಾಗಿಲ್ಲ ಎಂದು ಮಾಂತ್ರಿಕನ ಮೊರೆ ಹೋಗಿದ್ದ ಮಹಿಳೆ ಶವವಾಗಿ ಮನೆಗೆ ಬಂದಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಉತ್ತರ ಪ್ರದೇಶದ ಅಜಮ್‌ಗಢ ಮೂಲದ ಮಹಿಳೆ ಮೂಢನಂಬಿಕೆಗೆ ಬಲಿಯಾಗಿದ್ದಾಳೆ. ಮದುವೆಯಾಗಿ ಹತ್ತು ವರ್ಷಗಳಾದರೂ ಮಗುವಿಗೆ ಜನ್ಮ ನೀಡಲು ಸಾಧ್ಯವಾಗದ ಕಾರಣ ಮಹಿಳೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು.

ನಂತರ ಕುಟುಂಬವು ಮಾಂತ್ರಿಕನ ಬಳಿಗೆ ಕರೆದುಕೊಂಡು ಹೋಗಿತ್ತು. ಯಾವುದೋ ಪೂಜೆ ಮಾಡುತ್ತೇವೆ 1 ಲಕ್ಷ ರೂ ಕೊಡಿ ಆಮೇಲೆ ನಿಮಗೆ ಮಕ್ಕಾಗುತ್ತದೆ ಎಂದು ಮಾಂತ್ರಕ ಹೇಳಿದ್ದ, ಅದನ್ನು ನಂಬಿ 2,200 ರೂ. ಮುಂಗಡ ಹಣ ಕೊಟ್ಟು ಬಂದಿದ್ದರು.

ಜುಲೈ 6 ರಂದು ಅನುರಾಧಾ ತ್ನ ಅತ್ತೆಯ ಮನೆಯಿಂದ ಆಚರಣೆಗಾಗಿ ತವರು ಮನೆ ಬಂದಿದ್ದರು. ಮಾಂತ್ರಕನ ಹೆಂಡತಿ ಹಾಗೂ ಸಹಾಯಕರು ಆಕೆಯ ಕೂದಲನ್ನು ಎಳೆದು, ಉಸಿರುಗಟ್ಟಿಸಿದ್ದರು. ಚರಂಡಿ ಹಾಗ ಶೌಚಾಲಯದ ನೀರನ್ನು ಕುಡಿಸಿದ್ದರು.

ಮತ್ತಷ್ಟು ಓದಿ: ಬಿಹಾರ: ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

ಈ ಆಚರಣೆಗಳಿಂದ ಮಿಳೆಯ ಕುಟುಂಬ ಆಘಾತಕ್ಕೊಳಗಾಗಿತ್ತು, ಆರೋಗ್ಯ ತೀವ್ರ ಹದಗೆಟ್ಟ ಕಾರಣ ಈ ಆಚರಣೆಗಳನ್ನು ನಿಲ್ಲಿಸುಂತೆ ಮನವಿ ಮಾಡಲಾಯಿತು. ಆದರೆ ಅವರು ಒಪ್ಪಲಿಲ್ಲ. ಆಕೆಯ ಸ್ಥಿತಿ ತೀರಾ ಹದಗೆಟ್ಟಿರುವುದನ್ನು ಗಮನಿಸಿ ಕೊನೆಗೂ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲು ಒಪ್ಪಿಗೆ ನೀಡಿದರು. ಅಲ್ಲಿಆಕೆ ಮೃತಪಟ್ಟಿರುವುದಾಗಿ ಘೋಷಿಸಲಾಯಿತು.

ಈ ಸುದ್ದಿ ತಿಳಿದ ಬಳಿಕ ಮಾಂತ್ರಿಕನ ಕಟುಂಬ ಪರಾರಿಯಾಗಿದೆ.ಅನುರಾಧಾಳ ಶವವನ್ನು ಮರಳಿ ತಂದ ಕುಟುಂಬದವರು ಕಠಿಣ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ದೂರು ನೀಡಿದರು. ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದರು. ಮಾಂತ್ರಿಕ ಮತ್ತು ಅವನ ಸಹಾಯಕರು ಇನ್ನೂ ತಲೆಮರೆಸಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ