AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಮಗುವಾಗಲಿಲ್ಲ ಎಂದು ಮಾಂತ್ರಿಕನ ಬಳಿ ಹೋಗಿ ಶವವಾಗಿ ಬಂದ ಮಹಿಳೆ

ಮದುವೆಯಾಗಿ 10 ವರ್ಷಗಳು ಕಳೆದರೂ ಮಗುವಾಗಿಲ್ಲ ಎಂದು ಮಾಂತ್ರಿಕನ ಮೊರೆ ಹೋಗಿದ್ದ ಮಹಿಳೆ ಶವವಾಗಿ ಮನೆಗೆ ಬಂದಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಉತ್ತರ ಪ್ರದೇಶದ ಅಜಮ್‌ಗಢ ಮೂಲದ ಮಹಿಳೆ ಮೂಢನಂಬಿಕೆಗೆ ಬಲಿಯಾಗಿದ್ದಾಳೆ. ಮದುವೆಯಾಗಿ ಹತ್ತು ವರ್ಷಗಳಾದರೂ ಮಗುವಿಗೆ ಜನ್ಮ ನೀಡಲು ಸಾಧ್ಯವಾಗದ ಕಾರಣ ಮಹಿಳೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು.

ಉತ್ತರ ಪ್ರದೇಶ: ಮಗುವಾಗಲಿಲ್ಲ ಎಂದು ಮಾಂತ್ರಿಕನ ಬಳಿ ಹೋಗಿ ಶವವಾಗಿ ಬಂದ ಮಹಿಳೆ
ಮಹಿಳೆImage Credit source: Kerala Kaumudi
ನಯನಾ ರಾಜೀವ್
|

Updated on: Jul 09, 2025 | 1:27 PM

Share

ಲಕ್ನೋ, ಜುಲೈ 09: ಮದುವೆಯಾಗಿ 10 ವರ್ಷಗಳು ಕಳೆದರೂ ಮಗುವಾಗಿಲ್ಲ ಎಂದು ಮಾಂತ್ರಿಕನ ಮೊರೆ ಹೋಗಿದ್ದ ಮಹಿಳೆ ಶವವಾಗಿ ಮನೆಗೆ ಬಂದಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಉತ್ತರ ಪ್ರದೇಶದ ಅಜಮ್‌ಗಢ ಮೂಲದ ಮಹಿಳೆ ಮೂಢನಂಬಿಕೆಗೆ ಬಲಿಯಾಗಿದ್ದಾಳೆ. ಮದುವೆಯಾಗಿ ಹತ್ತು ವರ್ಷಗಳಾದರೂ ಮಗುವಿಗೆ ಜನ್ಮ ನೀಡಲು ಸಾಧ್ಯವಾಗದ ಕಾರಣ ಮಹಿಳೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು.

ನಂತರ ಕುಟುಂಬವು ಮಾಂತ್ರಿಕನ ಬಳಿಗೆ ಕರೆದುಕೊಂಡು ಹೋಗಿತ್ತು. ಯಾವುದೋ ಪೂಜೆ ಮಾಡುತ್ತೇವೆ 1 ಲಕ್ಷ ರೂ ಕೊಡಿ ಆಮೇಲೆ ನಿಮಗೆ ಮಕ್ಕಾಗುತ್ತದೆ ಎಂದು ಮಾಂತ್ರಕ ಹೇಳಿದ್ದ, ಅದನ್ನು ನಂಬಿ 2,200 ರೂ. ಮುಂಗಡ ಹಣ ಕೊಟ್ಟು ಬಂದಿದ್ದರು.

ಜುಲೈ 6 ರಂದು ಅನುರಾಧಾ ತ್ನ ಅತ್ತೆಯ ಮನೆಯಿಂದ ಆಚರಣೆಗಾಗಿ ತವರು ಮನೆ ಬಂದಿದ್ದರು. ಮಾಂತ್ರಕನ ಹೆಂಡತಿ ಹಾಗೂ ಸಹಾಯಕರು ಆಕೆಯ ಕೂದಲನ್ನು ಎಳೆದು, ಉಸಿರುಗಟ್ಟಿಸಿದ್ದರು. ಚರಂಡಿ ಹಾಗ ಶೌಚಾಲಯದ ನೀರನ್ನು ಕುಡಿಸಿದ್ದರು.

ಮತ್ತಷ್ಟು ಓದಿ: ಬಿಹಾರ: ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

ಈ ಆಚರಣೆಗಳಿಂದ ಮಿಳೆಯ ಕುಟುಂಬ ಆಘಾತಕ್ಕೊಳಗಾಗಿತ್ತು, ಆರೋಗ್ಯ ತೀವ್ರ ಹದಗೆಟ್ಟ ಕಾರಣ ಈ ಆಚರಣೆಗಳನ್ನು ನಿಲ್ಲಿಸುಂತೆ ಮನವಿ ಮಾಡಲಾಯಿತು. ಆದರೆ ಅವರು ಒಪ್ಪಲಿಲ್ಲ. ಆಕೆಯ ಸ್ಥಿತಿ ತೀರಾ ಹದಗೆಟ್ಟಿರುವುದನ್ನು ಗಮನಿಸಿ ಕೊನೆಗೂ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲು ಒಪ್ಪಿಗೆ ನೀಡಿದರು. ಅಲ್ಲಿಆಕೆ ಮೃತಪಟ್ಟಿರುವುದಾಗಿ ಘೋಷಿಸಲಾಯಿತು.

ಈ ಸುದ್ದಿ ತಿಳಿದ ಬಳಿಕ ಮಾಂತ್ರಿಕನ ಕಟುಂಬ ಪರಾರಿಯಾಗಿದೆ.ಅನುರಾಧಾಳ ಶವವನ್ನು ಮರಳಿ ತಂದ ಕುಟುಂಬದವರು ಕಠಿಣ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ದೂರು ನೀಡಿದರು. ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದರು. ಮಾಂತ್ರಿಕ ಮತ್ತು ಅವನ ಸಹಾಯಕರು ಇನ್ನೂ ತಲೆಮರೆಸಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?