AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ ಮೇಲೆ ಹರಿದ ಟ್ರಕ್, ಗರ್ಭದಿಂದ ಜೀವಂತವಾಗಿ ಹೊರ ಬಂತು ಶಿಶು

ಗರ್ಭಿಣಿ ಮೇಲೆ ಟ್ರಕ್ ಒಂದು ಹರಿದಿದ್ದು, ಗರ್ಭದಲ್ಲಿದ್ದ ಶಿಶು ಜೀವಂತವಾಗಿ ಹೊರಬಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಗರ್ಭಿಣಿ ಮೇಲೆ ಹರಿದ ಟ್ರಕ್, ಗರ್ಭದಿಂದ ಜೀವಂತವಾಗಿ ಹೊರ ಬಂತು ಶಿಶು
BabyImage Credit source: Times Of India
TV9 Web
| Edited By: |

Updated on: Jul 21, 2022 | 11:49 AM

Share

ಲಕ್ನೋ: ಗರ್ಭಿಣಿ ಮೇಲೆ ಟ್ರಕ್ ಒಂದು ಹರಿದಿದ್ದು, ಗರ್ಭದಲ್ಲಿದ್ದ ಶಿಶು ಜೀವಂತವಾಗಿ ಹೊರಬಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 26 ವರ್ಷದ ಮಹಿಳೆಯನ್ನು ಆಗ್ರಾ ನಿವಾಸಿ ಕಾಮಿನಿ ಎಂದು ಗುರುತಿಸಲಾಗಿದೆ. ಅವಳು ತನ್ನ ಪತಿಯೊಂದಿಗೆ ಬೈಕ್​ನಲ್ಲಿ ಹೆತ್ತವರ ಮನೆಗೆ ಹೋಗುತ್ತಿದ್ದರು.

ಆ ಸಮಯದಲ್ಲಿ ಎದುರಿಗೆ ಬರುತ್ತಿದ್ದ ಕಾರನ್ನು ತಪ್ಪಿಸಲು ಹೋದಾಗ ಟ್ರಕ್​ ಬೈಕ್​ಗೆ ಬಂದು ಗುದ್ದಿದ್ದು, ಮಗು ತಾಯಿಯ ಗರ್ಭದಿಂದ ಹೊರಬಂದಿತ್ತು. ಬೈಕ್​ನಲ್ಲಿದ್ದ ಮಗುವಿನ ತಂದೆಯೂ ಸುರಕ್ಷಿತವಾಗಿದ್ದಾರೆ, ಆದರೆ ಮಹಿಳೆ ಮೃತಪಟ್ಟಿರುವ ಕುರಿತು ವರದಿಯಾಗಿದೆ.

ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಡೆಯಲು ಯತ್ನಿಸಿದ ಆಕೆಯ ಪತಿ ರಾಮು ಬೈಕ್‌ನ ನಿಯಂತ್ರಣ ಕಳೆದುಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಕಾಮಿನಿ ಕೆಳಗೆ ಬಿದ್ದಿದ್ದು, ವೇಗವಾಗಿ ಬಂದ ಟ್ರಕ್ ಆಕೆಯ ಮೇಲೆ ಹರಿಯಿತು ಎಂದು ತಿಳಿಸಿದ್ದಾರೆ.

ಟ್ರಕ್ ಚಾಲಕ ವಾಹನ ಬಿಟ್ಟು ಓಡಿ ಹೋಗಿರುವ ಸನ್ನಿವೇಶ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪತಿ ನೀಡಿರುವ ಮಾಹಿತಿ ಆಧಾರದ ಮೇಲೆ ಎಫ್​ಐಆರ್ ದಾಖಲಿಸಿಕೊಳ್ಳಲಾಗಿದೆ.

ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಮಗು ಚೇತರಿಸಿಕೊಳ್ಳುತ್ತಿದ್ದು, ಪ್ರಾಣಾಪಾಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಬರ್ತಾರಾ ಹಳ್ಳಿಯ ಸಮೀಪ ನಡೆದಿದೆ. ಇದು ನರ್ಖಿ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರುತ್ತದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ