AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ ಮೇಲೆ ಹರಿದ ಟ್ರಕ್, ಗರ್ಭದಿಂದ ಜೀವಂತವಾಗಿ ಹೊರ ಬಂತು ಶಿಶು

ಗರ್ಭಿಣಿ ಮೇಲೆ ಟ್ರಕ್ ಒಂದು ಹರಿದಿದ್ದು, ಗರ್ಭದಲ್ಲಿದ್ದ ಶಿಶು ಜೀವಂತವಾಗಿ ಹೊರಬಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಗರ್ಭಿಣಿ ಮೇಲೆ ಹರಿದ ಟ್ರಕ್, ಗರ್ಭದಿಂದ ಜೀವಂತವಾಗಿ ಹೊರ ಬಂತು ಶಿಶು
BabyImage Credit source: Times Of India
TV9 Web
| Edited By: |

Updated on: Jul 21, 2022 | 11:49 AM

Share

ಲಕ್ನೋ: ಗರ್ಭಿಣಿ ಮೇಲೆ ಟ್ರಕ್ ಒಂದು ಹರಿದಿದ್ದು, ಗರ್ಭದಲ್ಲಿದ್ದ ಶಿಶು ಜೀವಂತವಾಗಿ ಹೊರಬಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 26 ವರ್ಷದ ಮಹಿಳೆಯನ್ನು ಆಗ್ರಾ ನಿವಾಸಿ ಕಾಮಿನಿ ಎಂದು ಗುರುತಿಸಲಾಗಿದೆ. ಅವಳು ತನ್ನ ಪತಿಯೊಂದಿಗೆ ಬೈಕ್​ನಲ್ಲಿ ಹೆತ್ತವರ ಮನೆಗೆ ಹೋಗುತ್ತಿದ್ದರು.

ಆ ಸಮಯದಲ್ಲಿ ಎದುರಿಗೆ ಬರುತ್ತಿದ್ದ ಕಾರನ್ನು ತಪ್ಪಿಸಲು ಹೋದಾಗ ಟ್ರಕ್​ ಬೈಕ್​ಗೆ ಬಂದು ಗುದ್ದಿದ್ದು, ಮಗು ತಾಯಿಯ ಗರ್ಭದಿಂದ ಹೊರಬಂದಿತ್ತು. ಬೈಕ್​ನಲ್ಲಿದ್ದ ಮಗುವಿನ ತಂದೆಯೂ ಸುರಕ್ಷಿತವಾಗಿದ್ದಾರೆ, ಆದರೆ ಮಹಿಳೆ ಮೃತಪಟ್ಟಿರುವ ಕುರಿತು ವರದಿಯಾಗಿದೆ.

ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಡೆಯಲು ಯತ್ನಿಸಿದ ಆಕೆಯ ಪತಿ ರಾಮು ಬೈಕ್‌ನ ನಿಯಂತ್ರಣ ಕಳೆದುಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಕಾಮಿನಿ ಕೆಳಗೆ ಬಿದ್ದಿದ್ದು, ವೇಗವಾಗಿ ಬಂದ ಟ್ರಕ್ ಆಕೆಯ ಮೇಲೆ ಹರಿಯಿತು ಎಂದು ತಿಳಿಸಿದ್ದಾರೆ.

ಟ್ರಕ್ ಚಾಲಕ ವಾಹನ ಬಿಟ್ಟು ಓಡಿ ಹೋಗಿರುವ ಸನ್ನಿವೇಶ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪತಿ ನೀಡಿರುವ ಮಾಹಿತಿ ಆಧಾರದ ಮೇಲೆ ಎಫ್​ಐಆರ್ ದಾಖಲಿಸಿಕೊಳ್ಳಲಾಗಿದೆ.

ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಮಗು ಚೇತರಿಸಿಕೊಳ್ಳುತ್ತಿದ್ದು, ಪ್ರಾಣಾಪಾಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಬರ್ತಾರಾ ಹಳ್ಳಿಯ ಸಮೀಪ ನಡೆದಿದೆ. ಇದು ನರ್ಖಿ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರುತ್ತದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ