AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಹೆದ್ದಾರಿಯಲ್ಲಿ ಬಿದ್ದಿದ್ದ ಸೂಟ್​ಕೇಸ್​ನಲ್ಲಿ ಮಹಿಳೆಯ ಶವ ಪತ್ತೆ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ಬಿದ್ದಿದ್ದ ಸೂಟ್​ಕೇಸ್​ನಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ. ನಗರ ಕೊತ್ವಾಲಿಯ ನಿಜಾಂಪುರ್ ಪ್ರದೇಶದ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಪ್ರಯಾಣಿಕರು ಸೂಟ್‌ಕೇಸ್ ಇರುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನಿಡಿದ್ದರು.

ಉತ್ತರ ಪ್ರದೇಶ: ಹೆದ್ದಾರಿಯಲ್ಲಿ ಬಿದ್ದಿದ್ದ ಸೂಟ್​ಕೇಸ್​ನಲ್ಲಿ ಮಹಿಳೆಯ ಶವ ಪತ್ತೆ
ಸೂಟ್​ಕೇಸ್​Image Credit source: NDTV
ನಯನಾ ರಾಜೀವ್
|

Updated on: Nov 17, 2024 | 10:38 AM

Share

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ಬಿದ್ದಿದ್ದ ಸೂಟ್​ಕೇಸ್​ನಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ. ನಗರ ಕೊತ್ವಾಲಿಯ ನಿಜಾಂಪುರ್ ಪ್ರದೇಶದ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಪ್ರಯಾಣಿಕರು ಸೂಟ್‌ಕೇಸ್ ಇರುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನಿಡಿದ್ದರು.

ಪೊಲೀಸರು ಸೂಟ್‌ಕೇಸ್‌ ಅನ್ನು ಬಿಚ್ಚಿದಾಗ ದೇಹದ ಮೇಲೆಲ್ಲ ಗಾಯದ ಗುರುತುಗಳಿದ್ದವು. ಮಹಿಳೆಯ ಗುರುತು ಪತ್ತೆಹಚ್ಚಲು ಇನ್ನೂ ಸಾಧ್ಯವಾಗಿಲ್ಲ, ಆಕೆ 25 ರಿಂದ 30 ವರ್ಷ ವಯಸ್ಸಿನವಳು ಎಂದು ಅಂದಾಜಿಸಲಾಗಿದೆ.

ಮಾಹಿತಿ ಪಡೆದ ಪೊಲೀಸರು, ವಿಧಿವಿಜ್ಞಾನ ತಜ್ಞರೊಂದಿಗೆ ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ತನಿಖಾಧಿಕಾರಿಗಳು ತಮ್ಮ ಪರೀಕ್ಷೆಯನ್ನು ಪ್ರಾರಂಭಿಸುತ್ತಿದ್ದಂತೆ ಸೂಟ್‌ಕೇಸ್ ಸುತ್ತಮುತ್ತಲಿನ ಪ್ರದೇಶವನ್ನು ಸುತ್ತುವರಿಯಲಾಯಿತು. ಮಹಿಳೆಯ ಶವದ ಜೊತೆಗೆ ಸೂಟ್‌ಕೇಸ್‌ನಲ್ಲಿ ಕೆಲವು ಬಟ್ಟೆಗಳು ಸಹ ಇದ್ದವು.

ಮಹಿಳೆಯ ಮೇಲಿನ ಗಾಯಗಳು ಆಕೆಯ ದೇಹವನ್ನು ಪತ್ತೆಹಚ್ಚುವ ಸುಮಾರು ಒಂದು ದಿನದ ಮೊದಲು ಅವಳು ಸತ್ತಿರಬಹುದು ಎಂದು ಸೂಚಿಸುತ್ತದೆ. ಪ್ರಕರಣದ ತನಿಖೆಯನ್ನು ಆರಂಭಿಸಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ.

ಮಹಿಳೆಯನ್ನು ಕಟ್ಟಿಹಾಕಿ, ಆಕೆಯ ಮುಂದೆಯೇ ಪತಿ ಕತ್ತು ಸೀಳಿ ಹತ್ಯೆ ಉತ್ತರ ಪ್ರದೇಶದ ಇಟಾವಾದಲ್ಲಿ ಕೊಲೆಯಾದ ಭೀಕರ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿ ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ಮನೆಗೆ ನುಗ್ಗಿ ಪತ್ನಿಯನ್ನು ಕಟ್ಟಿ ಹಾಕಿದ್ದಾರೆ. ಇದಾದ ಬಳಿಕ ಆಕೆಯ ಎದುರೇ ಹರಿತವಾದ ಆಯುಧದಿಂದ ಪತಿಯ ಕತ್ತು ಸೀಳಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿ ಪರಾರಿಯಾಗಿದ್ದಾನೆ.

ಮೃತರನ್ನು ಮನೋಜ್ ಜಾತವ್ (45) ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೆಲವು ಅಪರಿಚಿತ ಜನರು ಗಪ್ಚಿಯಾ ಗ್ರಾಮದಲ್ಲಿರುವ ಅವರ ಮನೆಗೆ ಪ್ರವೇಶಿಸಿದ್ದಾರೆ. ದಾಳಿಕೋರರು ಮೊದಲು ಮಹಿಳೆಯ ಕೈಕಾಲುಗಳನ್ನು ಹಗ್ಗದಿಂದ ಕಟ್ಟಿ ಹಾಕಿದ್ದರು. ಮಹಿಳೆಯನ್ನು ಕಟ್ಟಿಹಾಕಿದ ನಂತರ ದುಷ್ಕರ್ಮಿಗಳು ಮನೋಜ್ ಜಾತವ್ ಅವರ ಕುತ್ತಿಗೆಯನ್ನು ಹರಿತವಾದ ಆಯುಧದಿಂದ ಸೀಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು