ಉನ್ನಾವೋ ರೇಪ್ ಸಂತ್ರಸ್ತೆ ಕೊಲೆಗೆ ಯತ್ನ, ಸಂತ್ರಸ್ತೆ ಸ್ಥಿತಿ ಗಂಭೀರ, ದೆಹಲಿಗೆ ಏರ್​ ಲಿಫ್ಟ್​

ದೆಹಲಿ: ಇಂದು ಉನ್ನಾವೋ ರೇಪ್ ಸಂತ್ರಸ್ತೆಯ ಕೊಲೆಗೆ ಯತ್ನ ನಡೆದಿದ್ದು, ಸಂತ್ರಸ್ತೆ ಸ್ಥಿತಿ ಗಂಭೀರಗೊಂಡಿದೆ. ಹಾಗಾಗಿ ತುರ್ತುಚಿಕಿತ್ಸೆಗಾಗಿ ಸಂತ್ರಸ್ತೆಯನ್ನು ದೆಹಲಿಗೆ ಏರ್​ ಲಿಫ್ಟ್ ಮಾಡಲಾಗಿದೆ. ಉತ್ತರ ಪ್ರದೇಶದ ಉನ್ನಾವೋದಲ್ಲಿ ಕಳೆದ ಮಾರ್ಚ್‌ನಲ್ಲಿ ಯುವತಿ ಮೇಲೆ ಗ್ಯಾಂಗ್‌ರೇಪ್ ದುಷ್ಕೃತ್ಯ ನಡೆದಿತ್ತು. ಪ್ರಕರಣದ ಸಂಬಂಧ ರಾಯ್‌ಬರೇಲಿ ಕೋರ್ಟ್‌ನಲ್ಲಿ ಇಂದು ವಿಚಾರಣೆ ನಡೆಯಬೇಕಿತ್ತು. 5 ಆರೋಪಿಗಳು ಜಾಮೀನಿನ ಮೇಲೆ ಹೊರಬಂದಿದ್ದರು. ಇಂದು ಕೋರ್ಟ್‌ ವಿಚಾರಣೆಗೆಂದು ರಾಯ್‌ಬರೇಲಿಗೆ ಹೊರಟಿದ್ದ ಗ್ಯಾಂಗ್‌ರೇಪ್ ಸಂತ್ರಸ್ತೆಯನ್ನು ಅಡ್ಡಗಟ್ಟಿದ ಆರೋಪಿಗಳು ಆಕೆಯ ಮೇಲೆ ಪೆಟ್ರೋಲ್ ಸುರಿದು ಸಜೀವ ದಹನಕ್ಕೆ […]

ಉನ್ನಾವೋ ರೇಪ್ ಸಂತ್ರಸ್ತೆ ಕೊಲೆಗೆ ಯತ್ನ, ಸಂತ್ರಸ್ತೆ ಸ್ಥಿತಿ ಗಂಭೀರ, ದೆಹಲಿಗೆ ಏರ್​ ಲಿಫ್ಟ್​

Updated on: Dec 05, 2019 | 6:21 PM

ದೆಹಲಿ: ಇಂದು ಉನ್ನಾವೋ ರೇಪ್ ಸಂತ್ರಸ್ತೆಯ ಕೊಲೆಗೆ ಯತ್ನ ನಡೆದಿದ್ದು, ಸಂತ್ರಸ್ತೆ ಸ್ಥಿತಿ ಗಂಭೀರಗೊಂಡಿದೆ. ಹಾಗಾಗಿ ತುರ್ತುಚಿಕಿತ್ಸೆಗಾಗಿ ಸಂತ್ರಸ್ತೆಯನ್ನು ದೆಹಲಿಗೆ ಏರ್​ ಲಿಫ್ಟ್ ಮಾಡಲಾಗಿದೆ.

ಉತ್ತರ ಪ್ರದೇಶದ ಉನ್ನಾವೋದಲ್ಲಿ ಕಳೆದ ಮಾರ್ಚ್‌ನಲ್ಲಿ ಯುವತಿ ಮೇಲೆ ಗ್ಯಾಂಗ್‌ರೇಪ್ ದುಷ್ಕೃತ್ಯ ನಡೆದಿತ್ತು. ಪ್ರಕರಣದ ಸಂಬಂಧ ರಾಯ್‌ಬರೇಲಿ ಕೋರ್ಟ್‌ನಲ್ಲಿ ಇಂದು ವಿಚಾರಣೆ ನಡೆಯಬೇಕಿತ್ತು. 5 ಆರೋಪಿಗಳು ಜಾಮೀನಿನ ಮೇಲೆ ಹೊರಬಂದಿದ್ದರು.

ಇಂದು ಕೋರ್ಟ್‌ ವಿಚಾರಣೆಗೆಂದು ರಾಯ್‌ಬರೇಲಿಗೆ ಹೊರಟಿದ್ದ ಗ್ಯಾಂಗ್‌ರೇಪ್ ಸಂತ್ರಸ್ತೆಯನ್ನು ಅಡ್ಡಗಟ್ಟಿದ ಆರೋಪಿಗಳು ಆಕೆಯ ಮೇಲೆ ಪೆಟ್ರೋಲ್ ಸುರಿದು ಸಜೀವ ದಹನಕ್ಕೆ ಯತ್ನಿಸಿದ್ದರು. ಸಾವು ಬದುಕಿನ ನಡುವೆ ಹೋರಾಡುತ್ತಿರುವ ಸಂತ್ರಸ್ತೆಯನ್ನ ಉತ್ತರ ಪ್ರದೇಶದ ರಾಜಧಾನಿ ಲಖನೌ ಆಸ್ಪತ್ರೆಯಿಂದ ಏರ್​ ಌಂಬುಲೆನ್ಸ್​ನಲ್ಲಿ ಶಿಫ್ಟ್ ಮಾಡಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us