ಗಂಭೀರವಾಗಿ ಗಾಯಗೊಂಡಿದ್ದ ಉನ್ನಾವೋ ಸಂತ್ರಸ್ತೆ ಇನ್ನಿಲ್ಲ

ದೆಹಲಿ: ಚಿಕಿತ್ಸೆ ಫಲಿಸದೆ ತಡರಾತ್ರಿ ನವದೆಹಲಿಯ ಆಸ್ಪತ್ರೆಯಲ್ಲಿ ಉನ್ನಾವೋ ಸಂತ್ರಸ್ತೆ ಮೃತಪಟ್ಟಿದ್ದಾರೆ. ಡಿಸೆಂಬರ್ 5ರಂದು ಉನ್ನಾವೋ ಸಂತ್ರಸ್ತೆ ಮೇಲೆ ಕೊಲೆ ಯತ್ನ ನಡೆದಿತ್ತು. ಸಂತ್ರಸ್ತೆಯ ಮೇಲೆ ಪೆಟ್ರೋಲ್ ಸುರಿದು ಐವರು ಆರೋಪಿಗಳು ಬೆಂಕಿ ಹಚ್ಚಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಸಂತ್ರಸ್ತೆ ತಡರಾತ್ರಿ 11.40ಕ್ಕೆ ಸಫ್ದರ್​​ಜಂಗ್​​ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಯುವತಿ ಮೇಲೆ ಗ್ಯಾಂಗ್‌ರೇಪ್ ನಡೆದಿತ್ತು. ಪ್ರಕರಣ ಸಂಬಂಧ ರಾಯ್‌ಬರೇಲಿ ನ್ಯಾಯಾಲಯದಲ್ಲಿ ವಿಚಾರಣೆ ಇತ್ತು. ಹೀಗಾಗಿ ರಾಯ್‌ಬರೇಲಿಗೆ ತೆರಳ್ತಿದ್ದಾಗ ಪ್ರಕರಣದ ಆರೋಪಿಗಳು ಸಜೀವ ದಹನಕ್ಕೆ ಯತ್ನಿಸಿದ್ರು. ಸಂತ್ರಸ್ತೆಯನ್ನು ಅಡ್ಡಗಟ್ಟಿ […]

ಗಂಭೀರವಾಗಿ ಗಾಯಗೊಂಡಿದ್ದ ಉನ್ನಾವೋ ಸಂತ್ರಸ್ತೆ ಇನ್ನಿಲ್ಲ
ಸಾಧು ಶ್ರೀನಾಥ್​

Updated on: Dec 07, 2019 | 6:43 AM

ದೆಹಲಿ: ಚಿಕಿತ್ಸೆ ಫಲಿಸದೆ ತಡರಾತ್ರಿ ನವದೆಹಲಿಯ ಆಸ್ಪತ್ರೆಯಲ್ಲಿ ಉನ್ನಾವೋ ಸಂತ್ರಸ್ತೆ ಮೃತಪಟ್ಟಿದ್ದಾರೆ. ಡಿಸೆಂಬರ್ 5ರಂದು ಉನ್ನಾವೋ ಸಂತ್ರಸ್ತೆ ಮೇಲೆ ಕೊಲೆ ಯತ್ನ ನಡೆದಿತ್ತು. ಸಂತ್ರಸ್ತೆಯ ಮೇಲೆ ಪೆಟ್ರೋಲ್ ಸುರಿದು ಐವರು ಆರೋಪಿಗಳು ಬೆಂಕಿ ಹಚ್ಚಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಸಂತ್ರಸ್ತೆ ತಡರಾತ್ರಿ 11.40ಕ್ಕೆ ಸಫ್ದರ್​​ಜಂಗ್​​ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಳೆದ ಮಾರ್ಚ್‌ನಲ್ಲಿ ಯುವತಿ ಮೇಲೆ ಗ್ಯಾಂಗ್‌ರೇಪ್ ನಡೆದಿತ್ತು. ಪ್ರಕರಣ ಸಂಬಂಧ ರಾಯ್‌ಬರೇಲಿ ನ್ಯಾಯಾಲಯದಲ್ಲಿ ವಿಚಾರಣೆ ಇತ್ತು. ಹೀಗಾಗಿ ರಾಯ್‌ಬರೇಲಿಗೆ ತೆರಳ್ತಿದ್ದಾಗ ಪ್ರಕರಣದ ಆರೋಪಿಗಳು ಸಜೀವ ದಹನಕ್ಕೆ ಯತ್ನಿಸಿದ್ರು. ಸಂತ್ರಸ್ತೆಯನ್ನು ಅಡ್ಡಗಟ್ಟಿ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದರು. ಶೇಕಡಾ 90ರಷ್ಟು ಸುಟ್ಟ ಗಾಯಗಳಿಂದ ಬಳಲ್ತಿದ್ದ ಸಂತ್ರಸ್ತೆಯನ್ನು ಸಫ್ದರ್​​ಜಂಗ್​​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಂತ್ರಸ್ತೆ ಸಾವನ್ನಪ್ಪಿದ್ದಾರೆ.

Published On - 6:38 am, Sat, 7 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us