AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಬ್​ ಸೀರೀಸ್​ ನೋಡಿ ಮಹಿಳೆಯ ಕತ್ತು ಸೀಳಿದ ವಿದ್ಯಾರ್ಥಿ

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಮಹಿಳೆಯ ಕತ್ತು ಸೀಳಿ ಕೊಂದ ಆರೋಪದ ಮೇಲೆ ಇಬ್ಬರು ಯುವಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಆರೋಪಿಗಳನ್ನು ಮೋಹಿತ್ ಸೈನಿ ಮತ್ತು ಓಂಕಾರ್ ಶರ್ಮಾ ಎಂದು ಗುರುತಿಸಲಾಗಿದ್ದು, ಡಿಸೆಂಬರ್ 25 ರಿಂದ ಅಂಜಲಿ ಎಂಬ ಮಹಿಳೆಯ ಶವ ಅರಣ್ಯ ಪ್ರದೇಶದಲ್ಲಿ ಪತ್ತೆಯಾದಾಗಿನಿಂದ ತಲೆಮರೆಸಿಕೊಂಡಿದ್ದರು.

ವೆಬ್​ ಸೀರೀಸ್​ ನೋಡಿ ಮಹಿಳೆಯ ಕತ್ತು ಸೀಳಿದ ವಿದ್ಯಾರ್ಥಿ
ಆರೋಪಿImage Credit source: India Today
ನಯನಾ ರಾಜೀವ್
|

Updated on:Dec 29, 2024 | 10:50 AM

Share

ವೆಬ್​ಸೀರೀಸ್​, ಸಿನಿಮಾಗಳ ಹುಚ್ಚು ಯುವಕರಲ್ಲಿ ಹೆಚ್ಚಾಗಿದೆ. ಆದರೆ ಅದರಲ್ಲಿ ಬರುವ ಒಳ್ಳೆಯ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಬದಲು ಕೆಟ್ಟದ್ದನ್ನು ಮಾತ್ರ ಕಲಿಯುತ್ತಿರುವುದು ಬೇಸರದ ಸಂಗತಿ. ವಿದ್ಯಾರ್ಥಿಯೊಬ್ಬ ವೆಬ್​ಸೀರೀಸ್ ನೋಡಿ ಮಹಿಳೆಯ ಕತ್ತು ಸೀಳಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ.

ವಿದ್ಯಾರ್ಥಿ ಹಾಗೂ ಆತನ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಮೋಹಿತ್ ಸೈನಿ ಮತ್ತು ಓಂಕಾರ್ ಶರ್ಮಾ ಎಂದು ಗುರುತಿಸಲಾಗಿದ್ದು, ಡಿಸೆಂಬರ್ 25 ರಿಂದ ಅಂಜಲಿ ಎಂಬ ಯುವತಿ ಶವ ಅರಣ್ಯ ಪ್ರದೇಶದಲ್ಲಿ ಪತ್ತೆಯಾದಾಗಿನಿಂದ ತಲೆಮರೆಸಿಕೊಂಡಿದ್ದರು.

ಬಿಕಾಂ ಮೊದಲ  ವರ್ಷದ ವಿದ್ಯಾರ್ಥಿ ಹಾಗೂ ಫುಟ್ಬಾಲ್ ಆಟಗಾರರಾಗಿರುವ ಮೋಹಿತ್ ಕಳೆದ ಎರಡು ವರ್ಷಗಳಿಂದ ಅಂಜಲಿ ಜೊತೆ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದಾನೆ. ಆದರೆ ಅವಳು ತನಗೆ ಮೋಸ ಮಾಡುತ್ತಿದ್ದಾಳೆ ಎಂದು ಮನವರಿಕೆಯಾದಾಗ, ಅವನು ಅವಳನ್ನು ಕೊಲೆ ಮಾಡಲು ನಿರ್ಧರಿಸಿದನು ಎಂದು ಪೊಲೀಸರು ಸೇರಿಸಿದ್ದಾರೆ.

ಮತ್ತಷ್ಟು ಓದಿ: ತಂದೆ, ಚಿಕ್ಕಪ್ಪ, ಅಜ್ಜನಿಂದ ಬಾಲಕಿ ಮೇಲೆ ಅತ್ಯಾಚಾರ, ಆಕೆ ಈಗ ಎರಡು ತಿಂಗಳ ಗರ್ಭಿಣಿ

ಆಕೆಗೆ ಈಗಾಗಲೇ ಬದುವೆಯಾಗಿದೆ ಎಂಬುದ ತಿಳಿದು ಸ್ನೇಹಿತನ ಜತೆ ಸೇರಿ ಆಕೆಯ ಕತ್ತು ಸೀಳಿ ಹತ್ಯೆ ಮಾಡಿ ಅರಣ್ಯ ಪ್ರದೇಶದಲ್ಲಿ ಶವವನ್ನು ಎಸೆದು ಸ್ನೇಹಿತನ ಜತೆ ಪರಾರಿಯಾಗಿದ್ದ. ಪ್ರಕರಣದ ಕುರಿತು ಎಸ್​ಪಿ ಆಕಾಶ್​ ಸಿಂಗ್ ಮಾಹಿತಿ ನೀಡಿದ್ದು, ಆರೋಪಿಯು ಪ್ರಸಿದ್ಧ ವೆಬ್​ ಸೀರೀಸ್​ ನೋಡಿ ಕೊಲೆ ಮಾಡಿದ್ದಾನೆ ಎಂದಿದ್ದಾರೆ.ಅಂಜಲಿ ಇನ್ನೂ ಪತಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಎರಡು ವರ್ಷಗಳ ಹಿಂದೆ ಅಂಜಲಿ ತನ್ನ ಪತಿ ಸದ್ದಾಂನೊಂದಿಗೆ ತನ್ನ ಮನೆಯಲ್ಲಿ ಬಾಡಿಗೆದಾರಳಾಗಿ ವಾಸಿಸಲು ಬಂದಿದ್ದಳು. ಅಂಜಲಿಯ ಪತಿ ದೆಹಲಿಯ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದು, ತಿಂಗಳುಗಟ್ಟಲೆ ಮನೆಗೆ ಬರುವುದಿಲ್ಲ ಎಂದು ಅವರು ಹೇಳಿದರು. ಈ ವೇಳೆ ಅವರು ಮತ್ತು ಅಂಜಲಿ ಹತ್ತಿರವಾಗಿದ್ದಳು.

ಇತ್ತೀಚೆಗೆ ಆಕೆ ತನ್ನ ಪತಿಯೊಂದಿಗೆ ಮತ್ತೆ ಮಾತನಾಡಲು ಆರಂಭಿಸಿದ್ದಳು. ಮೋಹಿತ್ ಸಾಕಷ್ಟು ಮನವೊಲಿಸಿದ ನಂತರವೂ ಅಂಜಲಿ ತನ್ನ ಪತಿಯೊಂದಿಗೆ ಮಾತನಾಡುವುದನ್ನು ನಿಲ್ಲಿಸಲಿಲ್ಲ. ಹತಾಶೆಗೊಂಡ ಮೋಹಿತ್ ಅಂಜಲಿಯನ್ನು ಕೊಲ್ಲಲು ನಿರ್ಧರಿಸಿದನು ಮತ್ತು ಅವಳನ್ನು ಕೊಂದ ನಂತರ ತನ್ನ ಕುಟುಂಬದ ಒಪ್ಪಿಗೆಯೊಂದಿಗೆ ಬೇರೆ ಹುಡುಗಿಯನ್ನು ಮದುವೆಯಾಗಲು ನಿರ್ಧರಿಸಿದ್ದ.

ವೆಬ್ ಸರಣಿಯನ್ನು ವೀಕ್ಷಿಸಿದ ನಂತರ ಅಂಜಲಿಯನ್ನು ಕತ್ತು ಕೊಯ್ದು ಕೊಲ್ಲಲು ನಿರ್ಧರಿಸಿದ್ದಾಗಿ ಮೋಹಿತ್ ಪೊಲೀಸರಿಗೆ ತಿಳಿಸಿದ್ದಾರೆ. ಏತನ್ಮಧ್ಯೆ, ಇಬ್ಬರೂ ಆರೋಪಿಗಳನ್ನು ಜೈಲಿಗೆ ಕಳುಹಿಸಲಾಗಿದೆ ಮತ್ತು ಈ ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:49 am, Sun, 29 December 24

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?