AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಸದನದಲ್ಲಿ ಬಿಜೆಪಿ ಶಾಸಕರುಗಳ ವಿಡಿಯೋ ಗೇಮ್, ಪಾನ್ ಮಸಾಲ ವಿವಾದ: ವಿಡಿಯೋ ವೈರಲ್ ಮಾಡಿದ ಎಸ್ಪಿ ಪಕ್ಷ

ಸಮಾಜವಾದಿ ಪಕ್ಷ (ಎಸ್‌ಪಿ) ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಎರಡು ಪ್ರತ್ಯೇಕ ವೀಡಿಯೊಗಳನ್ನು ಹಂಚಿಕೊಂಡಿದೆ. ಈ ವೀಡಿಯೋಗಳಲ್ಲಿ ಒಬ್ಬರು ಶಾಸಕರು ವಿಧಾನಸಭೆಯಲ್ಲಿ ಮೊಬೈಲ್ ನಲ್ಲಿ ಆಟ ಆಡುತ್ತಿದ್ದು, ಮತ್ತೊಬ್ಬರು ಪಾನ್ ಮಸಾಲಾ ತಿನ್ನುತ್ತಿರುವುದು ಕಂಡುಬಂದಿದೆ.

Uttar Pradesh: ಸದನದಲ್ಲಿ ಬಿಜೆಪಿ ಶಾಸಕರುಗಳ ವಿಡಿಯೋ ಗೇಮ್, ಪಾನ್ ಮಸಾಲ ವಿವಾದ: ವಿಡಿಯೋ ವೈರಲ್ ಮಾಡಿದ ಎಸ್ಪಿ ಪಕ್ಷ
Uttar Pradesh
TV9 Web
| Edited By: |

Updated on:Sep 24, 2022 | 6:25 PM

Share

ಉತ್ತರ ಪ್ರದೇಶ: ಉತ್ತರ ಪ್ರದೇಶ ವಿಧಾನಸಭೆಯ ಮುಂಗಾರು ಅಧಿವೇಶನ ಸೆಪ್ಟೆಂಬರ್ 23 ರಂದು ಕೊನೆಗೊಂಡಿದೆ. ಮುಂಗಾರು ಅಧಿವೇಶನದಲ್ಲಿ ಸಮಾಜವಾದಿ ಪಕ್ಷ ಪಾದಯಾತ್ರೆ ನಡೆಸಿತು. ಯೋಗಿ ಆದಿತ್ಯನಾಥ್ ಸರ್ಕಾರವನ್ನು ಒಂದಲ್ಲ ಒಂದು ವಿಚಾರದಲ್ಲಿ ಎಸ್ಪಿ ಪಕ್ಷ ಗುರಿಯಾಗಿಸುತ್ತಿದೆ. ಸಮಾಜವಾದಿ ಪಕ್ಷ (ಎಸ್‌ಪಿ) ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಎರಡು ಪ್ರತ್ಯೇಕ ವೀಡಿಯೊಗಳನ್ನು ಹಂಚಿಕೊಂಡಿದೆ. ಈ ವೀಡಿಯೋಗಳಲ್ಲಿ ಒಬ್ಬರು ಶಾಸಕರು ವಿಧಾನಸಭೆಯಲ್ಲಿ ಮೊಬೈಲ್ ನಲ್ಲಿ ಆಟ ಆಡುತ್ತಿದ್ದು, ಮತ್ತೊಬ್ಬರು ಪಾನ್ ಮಸಾಲಾ ತಿನ್ನುತ್ತಿರುವುದು ಕಂಡುಬಂದಿದೆ.

ಈ ವಿಡಿಯೋಗಳ ಮೂಲಕ ಸಮಾಜವಾದಿ ಪಕ್ಷ (ಎಸ್‌ಪಿ) ಯೋಗಿ ಆದಿತ್ಯನಾಥ್ ಸರ್ಕಾರವನ್ನು ಟೀಕಿಸುತ್ತಿದೆ. ಸಾರ್ವಜನಿಕ ಸಮಸ್ಯೆಗಳಿಗೂ ಬಿಜೆಪಿ ಶಾಸಕರಿಗೂ ಯಾವುದೇ ಸಂಬಂಧವಿಲ್ಲ ಎಂದು ಟ್ವಿಟರ್‌ನಲ್ಲಿ ಬರೆಯಲಾಗಿದೆ. ಸಮಾಜವಾದಿ ಪಕ್ಷವು ತನ್ನ ಟ್ವಿಟರ್‌ನಲ್ಲಿ ವೀಡಿಯೊವನ್ನು ಬಿಡುಗಡೆ ಮಾಡಿ, ಬಿಜೆಪಿ ಶಾಸಕರು ಸದನದ ಘನತೆಯನ್ನು ಹಾಳು ಮಾಡುತ್ತಿದ್ದಾರೆ! ಸದನದಲ್ಲಿ ಮೊಬೈಲ್ ಗೇಮ್ ಆಡುತ್ತಿರುವ ಮಹೋಬದ ಬಿಜೆಪಿ ಶಾಸಕ, ತಂಬಾಕು ತಿನ್ನುತ್ತಿರುವ ಝಾನ್ಸಿಯ ಬಿಜೆಪಿ ಶಾಸಕ. ಇಂತಹ ಜನರಲ್ಲಿ ಜನರ ಸಮಸ್ಯೆಗಳಿಗೆ ಉತ್ತರವಿಲ್ಲ ಮತ್ತು ಇವರಿಗೆ ಸದನವು ಒಂದು ಮನರಂಜನೆಯ ಸ್ಥಳವಾಗಿದೆ. ಇದು ಅತ್ಯಂತ ಖಂಡನೀಯ ಮತ್ತು ನಾಚಿಕೆಗೇಡು ವಿಚಾರ ಎಂದು ಹೇಳಿದೆ.

ಅದೇ ಸಮಯದಲ್ಲಿ, ಎಸ್ಪಿ ಮತ್ತೊಂದು ವೀಡಿಯೊವನ್ನು ಹಂಚಿಕೊಂಡಿದೆ. ಇದರಲ್ಲಿ ಶಾಸಕರೊಬ್ಬರು ಪಾನ್ ಮಸಾಲ ತಿನ್ನುತ್ತಿರುವುದು ಕಂಡು ಬಂದಿದೆ. ಈ ವಿಡಿಯೋ ಮೂಲಕ ಬಿಜೆಪಿ ಕ್ಯಾನ್ಸರ್‌ಗೆ ಪ್ರಚಾರ ನೀಡುತ್ತಿದೆ ಎಂದು ಎಸ್‌ಪಿ ಆರೋಪಿಸಿದ್ದಾರೆ. ಇದೀಗ ಈ ಎರಡೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋಗೆ ಸಾಕಷ್ಟು ಮಂದಿ ಕಾಮೆಂಟ್ ಮಾಡುತ್ತಿದ್ದಾರೆ.

Published On - 6:25 pm, Sat, 24 September 22

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ