AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಸದನದಲ್ಲಿ ಬಿಜೆಪಿ ಶಾಸಕರುಗಳ ವಿಡಿಯೋ ಗೇಮ್, ಪಾನ್ ಮಸಾಲ ವಿವಾದ: ವಿಡಿಯೋ ವೈರಲ್ ಮಾಡಿದ ಎಸ್ಪಿ ಪಕ್ಷ

ಸಮಾಜವಾದಿ ಪಕ್ಷ (ಎಸ್‌ಪಿ) ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಎರಡು ಪ್ರತ್ಯೇಕ ವೀಡಿಯೊಗಳನ್ನು ಹಂಚಿಕೊಂಡಿದೆ. ಈ ವೀಡಿಯೋಗಳಲ್ಲಿ ಒಬ್ಬರು ಶಾಸಕರು ವಿಧಾನಸಭೆಯಲ್ಲಿ ಮೊಬೈಲ್ ನಲ್ಲಿ ಆಟ ಆಡುತ್ತಿದ್ದು, ಮತ್ತೊಬ್ಬರು ಪಾನ್ ಮಸಾಲಾ ತಿನ್ನುತ್ತಿರುವುದು ಕಂಡುಬಂದಿದೆ.

Uttar Pradesh: ಸದನದಲ್ಲಿ ಬಿಜೆಪಿ ಶಾಸಕರುಗಳ ವಿಡಿಯೋ ಗೇಮ್, ಪಾನ್ ಮಸಾಲ ವಿವಾದ: ವಿಡಿಯೋ ವೈರಲ್ ಮಾಡಿದ ಎಸ್ಪಿ ಪಕ್ಷ
Uttar Pradesh
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Sep 24, 2022 | 6:25 PM

Share

ಉತ್ತರ ಪ್ರದೇಶ: ಉತ್ತರ ಪ್ರದೇಶ ವಿಧಾನಸಭೆಯ ಮುಂಗಾರು ಅಧಿವೇಶನ ಸೆಪ್ಟೆಂಬರ್ 23 ರಂದು ಕೊನೆಗೊಂಡಿದೆ. ಮುಂಗಾರು ಅಧಿವೇಶನದಲ್ಲಿ ಸಮಾಜವಾದಿ ಪಕ್ಷ ಪಾದಯಾತ್ರೆ ನಡೆಸಿತು. ಯೋಗಿ ಆದಿತ್ಯನಾಥ್ ಸರ್ಕಾರವನ್ನು ಒಂದಲ್ಲ ಒಂದು ವಿಚಾರದಲ್ಲಿ ಎಸ್ಪಿ ಪಕ್ಷ ಗುರಿಯಾಗಿಸುತ್ತಿದೆ. ಸಮಾಜವಾದಿ ಪಕ್ಷ (ಎಸ್‌ಪಿ) ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಎರಡು ಪ್ರತ್ಯೇಕ ವೀಡಿಯೊಗಳನ್ನು ಹಂಚಿಕೊಂಡಿದೆ. ಈ ವೀಡಿಯೋಗಳಲ್ಲಿ ಒಬ್ಬರು ಶಾಸಕರು ವಿಧಾನಸಭೆಯಲ್ಲಿ ಮೊಬೈಲ್ ನಲ್ಲಿ ಆಟ ಆಡುತ್ತಿದ್ದು, ಮತ್ತೊಬ್ಬರು ಪಾನ್ ಮಸಾಲಾ ತಿನ್ನುತ್ತಿರುವುದು ಕಂಡುಬಂದಿದೆ.

ಈ ವಿಡಿಯೋಗಳ ಮೂಲಕ ಸಮಾಜವಾದಿ ಪಕ್ಷ (ಎಸ್‌ಪಿ) ಯೋಗಿ ಆದಿತ್ಯನಾಥ್ ಸರ್ಕಾರವನ್ನು ಟೀಕಿಸುತ್ತಿದೆ. ಸಾರ್ವಜನಿಕ ಸಮಸ್ಯೆಗಳಿಗೂ ಬಿಜೆಪಿ ಶಾಸಕರಿಗೂ ಯಾವುದೇ ಸಂಬಂಧವಿಲ್ಲ ಎಂದು ಟ್ವಿಟರ್‌ನಲ್ಲಿ ಬರೆಯಲಾಗಿದೆ. ಸಮಾಜವಾದಿ ಪಕ್ಷವು ತನ್ನ ಟ್ವಿಟರ್‌ನಲ್ಲಿ ವೀಡಿಯೊವನ್ನು ಬಿಡುಗಡೆ ಮಾಡಿ, ಬಿಜೆಪಿ ಶಾಸಕರು ಸದನದ ಘನತೆಯನ್ನು ಹಾಳು ಮಾಡುತ್ತಿದ್ದಾರೆ! ಸದನದಲ್ಲಿ ಮೊಬೈಲ್ ಗೇಮ್ ಆಡುತ್ತಿರುವ ಮಹೋಬದ ಬಿಜೆಪಿ ಶಾಸಕ, ತಂಬಾಕು ತಿನ್ನುತ್ತಿರುವ ಝಾನ್ಸಿಯ ಬಿಜೆಪಿ ಶಾಸಕ. ಇಂತಹ ಜನರಲ್ಲಿ ಜನರ ಸಮಸ್ಯೆಗಳಿಗೆ ಉತ್ತರವಿಲ್ಲ ಮತ್ತು ಇವರಿಗೆ ಸದನವು ಒಂದು ಮನರಂಜನೆಯ ಸ್ಥಳವಾಗಿದೆ. ಇದು ಅತ್ಯಂತ ಖಂಡನೀಯ ಮತ್ತು ನಾಚಿಕೆಗೇಡು ವಿಚಾರ ಎಂದು ಹೇಳಿದೆ.

ಅದೇ ಸಮಯದಲ್ಲಿ, ಎಸ್ಪಿ ಮತ್ತೊಂದು ವೀಡಿಯೊವನ್ನು ಹಂಚಿಕೊಂಡಿದೆ. ಇದರಲ್ಲಿ ಶಾಸಕರೊಬ್ಬರು ಪಾನ್ ಮಸಾಲ ತಿನ್ನುತ್ತಿರುವುದು ಕಂಡು ಬಂದಿದೆ. ಈ ವಿಡಿಯೋ ಮೂಲಕ ಬಿಜೆಪಿ ಕ್ಯಾನ್ಸರ್‌ಗೆ ಪ್ರಚಾರ ನೀಡುತ್ತಿದೆ ಎಂದು ಎಸ್‌ಪಿ ಆರೋಪಿಸಿದ್ದಾರೆ. ಇದೀಗ ಈ ಎರಡೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋಗೆ ಸಾಕಷ್ಟು ಮಂದಿ ಕಾಮೆಂಟ್ ಮಾಡುತ್ತಿದ್ದಾರೆ.

Published On - 6:25 pm, Sat, 24 September 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!