AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಈ ಊರಿನಲ್ಲಿ ನೊಣಗಳ ಕಾಟ, ಯುವಕರಿಗೆ ಯಾರು ಹೆಣ್ಣು ಕೊಡ್ತಿಲ್ವಂತೆ, ನೀರಿನ ಬೃಹತ್ ಟ್ಯಾಂಕ್ ಹತ್ತಿ ಗ್ರಾಮಸ್ಥರ ಪ್ರತಿಭಟನೆ

ಕೋಳಿಫಾರಂ ಕೊಳಕಿನಿಂದಾಗಿ ಊರಿನಲ್ಲಿ ನೊಣಗಳ ಕಾಟ ಹೆಚ್ಚಾಗಿದೆ ಎಂದು ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯ ಹಳ್ಳಿಯ ಜನರು ನೀರಿನ ಬೃಹತ್ ಟ್ಯಾಂಕ್ ಏರಿ ಪ್ರತಿಭಟನೆ ನಡೆಸಿದರು.

ಉತ್ತರ ಪ್ರದೇಶ: ಈ ಊರಿನಲ್ಲಿ ನೊಣಗಳ ಕಾಟ, ಯುವಕರಿಗೆ ಯಾರು ಹೆಣ್ಣು ಕೊಡ್ತಿಲ್ವಂತೆ, ನೀರಿನ ಬೃಹತ್ ಟ್ಯಾಂಕ್ ಹತ್ತಿ ಗ್ರಾಮಸ್ಥರ ಪ್ರತಿಭಟನೆ
ನೀರಿನ ಟ್ಯಾಂಕ್Image Credit source: India Today
ನಯನಾ ರಾಜೀವ್
|

Updated on: Aug 09, 2023 | 7:58 AM

Share

ಕೋಳಿಫಾರಂ ಕೊಳಕಿನಿಂದಾಗಿ ಊರಿನಲ್ಲಿ ನೊಣಗಳ ಕಾಟ ಹೆಚ್ಚಾಗಿದೆ ಎಂದು ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯ ಹಳ್ಳಿಯ ಜನರು ನೀರಿನ ಬೃಹತ್ ಟ್ಯಾಂಕ್ ಏರಿ ಪ್ರತಿಭಟನೆ ನಡೆಸಿದರು. ಕುಯ್ಯ ಗ್ರಾಮದಲ್ಲಿ 2017ರಲ್ಲಿ ಸಾಂಗ್ವಾನ್ ಫಾರ್ಮ್​ ಉತ್ಪಾದನೆಯನ್ನು ಪ್ರಾರಂಭಿಸಿತ್ತು, ಈ ಪ್ರದೇಶದಲ್ಲಿ ನೊಣಗಳ ಸಂಖ್ಯೆ ಹೆಚ್ಚಾಗಿದ್ದು, ಜನರಿಗೆ ಸಮಸ್ಯೆಯುಂಟಾಗಿದೆ.

ನೊಣಗಳ ಸಮಸ್ಯೆಯಿಂದಾಗಿ ಈ ಊರಿಗೆ ಮದುವೆಯಾಗಿ ಬರಲು ಹೆಣ್ಣುಮಕ್ಕಳು ನಿರಾಕರಿಸುತ್ತಿದ್ದಾರೆ, ಹಾಗೆಯೇ ಮದುವೆಯಾದ ಹೆಣ್ಣುಮಕ್ಕಳು ಕೂಡ ತವರುಮನೆಗೆ ಹೋಗಿದ್ದಾರೆ ಎನ್ನುವುದು ಕೆಲವರ ಅಳಲು.

ನೊಣಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಜನರು ಊಟ ಮಾಡಲು, ಕುಡಿಯುವ ನೀರನ್ನು ತೆರೆದಿಡಲು ಕೂಡ ಕಷ್ಟವಾಗಿದ್ದು, ಸೊಳ್ಳೆ ಪರದೆ ಹಾಕಿಕೊಂಡು ಮಲಗುವುದು ಅನಿವಾರ್ಯವಾಗಿದೆ.

ಈ ಸಮಸ್ಯೆಯು ಎಷ್ಟು ತೀವ್ರವಾಗಿದೆಯೆಂದರೆ, ಇದು ಗ್ರಾಮದ ನಿವಾಸಿಗಳ ಪ್ರಕಾರ, ಪ್ರದೇಶದ ಯುವಕರ ವಿವಾಹದ ವಿವಾಹದ ಮೇಲೂ ಪರಿಣಾಮ ಬೀರಿದೆ.

ಮತ್ತಷ್ಟು ಓದಿ: ಕೇರಳ: ಹಿಂಬಾಲಿಸಿದಕ್ಕೆ ತನ್ನ ಮೇಲೆ ದೂರು ನೀಡಿದ ಹುಡುಗಿಯ ಮನೆಯೊಳಗೆ ಹಾವು ಎಸೆದ ವ್ಯಕ್ತಿ

ನೊಣಗಳ ಸಮಸ್ಯೆಯಿಂದ ಕೆಲ ಮಹಿಳೆಯರು ಅತ್ತೆ ಮನೆ ಬಿಟ್ಟು ಹೋಗಿದ್ದು, ಸಂಬಂಧಿಕರು ಭೇಟಿ ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಈ ಹಿಂದೆ ಹಲವು ಬಾರಿ ಆಡಳಿತಕ್ಕೆ ಮನವಿ ಸಲ್ಲಿಸಿದರೂ ಏನೂ ಆಗಿಲ್ಲ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರೊಬ್ಬರು ತಿಳಿಸಿದರು. ಈ ಹಿಂದೆ ಹಲವು ಬಾರಿ ಆಡಳಿತಕ್ಕೆ ಮನವಿ ಸಲ್ಲಿಸಿದರೂ ಏನೂ ಆಗಿಲ್ಲ ಎಂದು ಗ್ರಾಮಸ್ಥರೊಬ್ಬರು ತಿಳಿಸಿದರು.

ಗಂಟೆಗಳ ಮಾತುಕತೆಯ ನಂತರ ಗ್ರಾಮಸ್ಥರನ್ನು ನೀರಿನ ಟ್ಯಾಂಕ್‌ನಿಂದ ಸುರಕ್ಷಿತವಾಗಿ ಕೆಳಗೆ ಇಳಿಸಲಾಯಿತು. ಗ್ರಾಮಸ್ಥರ ಸಮಸ್ಯೆ ಬಗೆಹರಿಸಿ ನೊಣಗಳ ಸಮಸ್ಯೆ ಬಗೆಹರಿಸುವುದಾಗಿ ಆಡಳಿತ ಭರವಸೆ ನೀಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!