AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಕುಡಿಸಿ, ಪ್ರಿಯಕರನ ಸಹಾಯದಿಂದ ಗಂಡನ ರುಂಡ ಕತ್ತರಿಸಿದ ಮಹಿಳೆ

ಪ್ರಿಯಕರನ ಜತೆ ಸೇರಿ ಮಹಿಳೆಯೊಬ್ಬಳು ಪತಿಯ ರುಂಡವನ್ನೇ ಕತ್ತರಿಸಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೊದಲು ಪತಿಯ ಶಿರಚ್ಛೇದ ಮಾಡಿ ಬಳಿಕ ದೇಹವನ್ನು ವಿಲೇವಾರಿ ಮಾಡಿದ್ದಾಳೆ. ಆಕೆಯ ಪ್ರಿಯಕರ ಕೊಲೆಗೆ ಸಹಾಯ ಮಾಡಿದ್ದಾನೆ ಎನ್ನಲಾಗಿದ್ದು, ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಇಂದೋರ್‌ನ ರಾಜಾ ರಘುವಂಶಿ ಮತ್ತು ಸೋನಮ್ ರಘುವಂಶಿ ಪ್ರಕರಣಕ್ಕೆ ಹೋಲುವ ಪ್ರಕರಣ ಉತ್ತರ ಪ್ರದೇಶದ ಉನ್ನಾವೋದಲ್ಲಿ ಬೆಳಕಿಗೆ ಬಂದಿದೆ.

ಮದ್ಯ ಕುಡಿಸಿ, ಪ್ರಿಯಕರನ ಸಹಾಯದಿಂದ ಗಂಡನ ರುಂಡ ಕತ್ತರಿಸಿದ ಮಹಿಳೆ
ಕ್ರೈಂ
ನಯನಾ ರಾಜೀವ್
|

Updated on: Jul 11, 2025 | 12:28 PM

Share

ಉನ್ನಾವೋ, ಜುಲೈ 11: ಮಹಿಳೆಯೊಬ್ಬಳು ಗಂಡನಿಗೆ ಮದ್ಯ ಕುಡಿಸಿ ಪ್ರಿಯಕರನ ಸಹಾಯದಿಂದ ಪತಿಯ ರುಂಡವನ್ನು ಕತ್ತರಿಸಿ ಬರ್ಬರ ಹತ್ಯೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದೆ. ಮೊದಲು ಪತಿಯ ಶಿರಚ್ಛೇದ ಮಾಡಿ ಬಳಿಕ ದೇಹವನ್ನು ವಿಲೇವಾರಿ ಮಾಡಿದ್ದಾಳೆ. ಆಕೆಯ ಪ್ರಿಯಕರ ಕೊಲೆಗೆ ಸಹಾಯ ಮಾಡಿದ್ದಾನೆ ಎನ್ನಲಾಗಿದ್ದು, ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.

ಇಂದೋರ್‌ನ ರಾಜಾ ರಘುವಂಶಿ ಮತ್ತು ಸೋನಮ್ ರಘುವಂಶಿ ಪ್ರಕರಣಕ್ಕೆ ಹೋಲುವ ಪ್ರಕರಣ ಉತ್ತರ ಪ್ರದೇಶದ ಉನ್ನಾವೋದಲ್ಲಿ ಬೆಳಕಿಗೆ ಬಂದಿದೆ. ಸೋನಮ್ ಮದುವೆಯಾಗಿ ಕೆಲವೇ ದಿನದಲ್ಲಿ ಪತಿಯನ್ನು ಹನಿಮೂನ್​ಗೆಂದು ಕರೆದೊಯ್ದು ಅಲ್ಲಿ ಪ್ರಿಯಕರನಿಂದ ಹತ್ಯೆ ಮಾಡಿಸಿದ್ದಳು.

ಉನ್ನಾವೋ ಘಟನೆಯಲ್ಲಿ ಮಹಿಳೆಯ ಪ್ರಿಯಕರ ಇತ್ತೀಚೆಗೆ ವಿದೇಶದಿಂದ ಹಿಂದಿರುಗಿದ್ದ. ಆತ ತನ್ನ ಸ್ನೇಹಿತ ಮತ್ತು ಮಹಿಳೆಯೊಂದಿಗೆ ಸೇರಿ ಈ ಕೊಲೆಯನ್ನು ಮಾಡಿದ್ದಾನೆ. ಉನ್ನಾವೋದ ಬದರ್ಕಾ ಪ್ರದೇಶದ ತುರ್ಕಿಹಾ ಬದರ್ಕಾ ಗ್ರಾಮದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು, ಇಮ್ರಾನ್ ಎಂಬ ವ್ಯಕ್ತಿಯ ಪತ್ನಿ ಶೀಬಾ ತನ್ನ ಪ್ರಿಯಕರ ಫರ್ಮಾನ್ ಜೊತೆ ಸೇರಿ ಆತನನ್ನು ಕೊಂದಿದ್ದಾಳೆ.

ಮತ್ತಷ್ಟು ಓದಿ: ಮಗು ತನ್ನದಲ್ಲವೆಂಬ ಅನುಮಾನ ಪ್ರೇಯಸಿ, ಮಗು ಇಬ್ಬರ ಕತ್ತು ಸೀಳಿ ಬರ್ಬರ ಹತ್ಯೆ

ಶೀಬಾ ಕಳೆದ ಮೂರು ವರ್ಷಗಳಿಂದ ಫರ್ಮಾನ್ ಜೊತೆ ಸಂಬಂಧ ಹೊಂದಿದ್ದರು. ಫರ್ಮಾನ್ ಕೇವಲ 25 ದಿನಗಳ ಹಿಂದೆ ಸೌದಿ ಅರೇಬಿಯಾದಿಂದ ತನ್ನ ಸ್ನೇಹಿತ ರಫೀಕ್ ಜೊತೆ ಮರಳಿದ್ದ.

ಇಮ್ರಾನ್ ಮದ್ಯದ ಚಟ ಹೊಂದಿದ್ದ. ಪ್ರತಿದಿನ ಕುಡಿದು ಮನೆಗೆ ಬಂದು ಮನೆಯಲ್ಲಿ ಶೀಬಾ ಜೊತೆ ಜಗಳವಾಡುತ್ತಿದ್ದ. ಇ-ರಿಕ್ಷಾ ಓಡಿಸಿ ಕುಟುಂಬವನ್ನು ಸಲಹುತ್ತಿದ್ದ. ಆದರೆ ಬರುವ ಅಲ್ಪ ಹಣದಲ್ಲಿ ಶೀಬಾಳ ಬೇಕು ಬೇಡಗಳನ್ನು ಈಡೇರಿಸಲು ಸಾಧ್ಯವಾಗುತ್ತಿರಲಿಲ್ಲ. ಫರ್ಮಾನ್ ಸೌದಿಯಿಂದ ಹಿಂತಿರುಗಿದ ನಂತರ, ಅವನು ಶೀಬಾಳನ್ನು ಭೇಟಿಯಾಗಿದ್ದ. ಇದು ಇಮ್ರಾನ್​ಗೂ ತಿಳಿಯಿತು.

ಇಮ್ರಾನ್ ಶೀಬಾಳನ್ನು ಹೊಡೆದು ಮನೆಯಿಂದ ಹೊರಗೆ ಹೋಗದಂತೆ ತಡೆದಿದ್ದ. ಶೀಬಾ ಪ್ರಿಯಕರನ ಜತೆ ಸೇರಿ ಗಂಡನನ್ನು ಕೊಲ್ಲಲು ಸಂಚು ರೂಪಿಸಿದ್ದಳು. ಅದಕ್ಕೆ ಫರ್ಮಾನ್ ಸ್ನೇಹಿತ ರಫೀಕ್ ಸಹಾಯ ಮಾಡಿದ್ದ.

ಇಮ್ರಾನ್‌ಗೆ ಮದ್ಯ ಕುಡಿಸಿ ಬೈಕ್‌ನಲ್ಲಿ ಕರೆದುಕೊಂಡು ಹೋದರು.ಕುತ್ತಿಗೆಯನ್ನು ತಲೆಯಿಂದ ಬೇರ್ಪಡಿಸಿ ಶವವನ್ನು ನಗರದ ಚರಂಡಿಯಲ್ಲಿ ಎಸೆದಿದ್ದರು. ಇದೀಗ ಅವರಿಬ್ಬರನ್ನು ಬಂಧಿಸಿ ಇಮ್ರಾನ್​ ಶಿರ ಹಾಗೂ ದೇಹವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ರಫೀಕ್ ತಲೆಮರೆಸಿಕೊಂಡಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!