ಅಯೋಧ್ಯೆ: ಪತ್ನಿ, ಮೂರು ವರ್ಷದ ಮಗುವನ್ನು ಕೊಂದು ವ್ಯಕ್ತಿ ಪರಾರಿ

ಪತ್ನಿ, ಮೂರು ವರ್ಷದ ಮಗನನ್ನು ಹತ್ಯೆ ಮಾಡಿ ವ್ಯಕ್ತಿ ಓಡಿ ಹೋಗಿರುವ ಘಟನೆ ಅಯೋಧ್ಯೆಯಲ್ಲಿ ನಡೆದಿದೆ. ಗುವಾಹಟಿಯ ಸುಮಾರು 40 ಕುಟುಂಬಗಳು ತಾತ್ಕಾಲಿಕ ಮನೆಗಳಲ್ಲಿ ವಾಸಿಸುತ್ತಿದ್ದು, ತ್ಯಾಜ್ಯ ಸಂಗ್ರಹಿಸುವ ಮೂಲಕ ಜೀವನ ಸಾಗಿಸುತ್ತಿರುವ ಬಚ್ರಾ ಸುಲ್ತಾನ್‌ಪುರ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಶಹಜನ್ ಖಂಡಕರ್ ಎಂದು ಗುರುತಿಸಲಾದ ಆರೋಪಿಯು ರಾತ್ರಿಯ ವೇಳೆ ತನ್ನ 35 ವರ್ಷದ ಪತ್ನಿ ಮತ್ತು ಅವರ ಮಗನನ್ನು ಕೊಂದು ಸ್ಥಳದಿಂದ ಪರಾರಿಯಾಗಿದ್ದಾನೆ .

ಅಯೋಧ್ಯೆ: ಪತ್ನಿ, ಮೂರು ವರ್ಷದ ಮಗುವನ್ನು ಕೊಂದು ವ್ಯಕ್ತಿ ಪರಾರಿ
ಅಯೋಧ್ಯೆ ಮನೆ
Image Credit source: India Today

Updated on: Apr 13, 2025 | 8:12 AM

ಅಯೋಧ್ಯೆ, ಏಪ್ರಿಲ್ 13: ವ್ಯಕ್ತಿಯೊಬ್ಬ ಪತ್ನಿ ಹಾಗೂ ಮೂರು ವರ್ಷದ ಮಗುವನ್ನು ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆ(Ayodhya)ಯಲ್ಲಿ ನಡೆದಿದೆ. ಶನಿವಾರ ಬೆಳಗ್ಗೆ ಮಹಿಳೆ ಮತ್ತು ಆಕೆಯ ಮೂರು ವರ್ಷದ ಮಗ ಶವವಾಗಿ ಪತ್ತೆಯಾಗಿದ್ದು, ಪೊಲೀಸ್ ತನಿಖೆ ಮತ್ತು ವಿಧಿವಿಜ್ಞಾನ ತನಿಖೆ ಮುಂದುವರೆದಿದೆ. ಗುವಾಹಟಿಯ ಸುಮಾರು 40 ಕುಟುಂಬಗಳು ತಾತ್ಕಾಲಿಕ ಮನೆಗಳಲ್ಲಿ ವಾಸಿಸುತ್ತಿದ್ದು, ತ್ಯಾಜ್ಯ ಸಂಗ್ರಹಿಸುವ ಮೂಲಕ ಜೀವನ ಸಾಗಿಸುತ್ತಿದ್ದಾರೆ,  ಬಚ್ರಾ ಸುಲ್ತಾನ್‌ಪುರ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ.

ಶಹಜನ್ ಖಂಡಕರ್ ಎಂದು ಗುರುತಿಸಲಾದ ಆರೋಪಿಯು ರಾತ್ರಿಯ ವೇಳೆ ತನ್ನ 35 ವರ್ಷದ ಪತ್ನಿ ಮತ್ತು ಅವರ ಮಗನನ್ನು ಕೊಂದು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಗೂ ಮುನ್ನ, ತನ್ನ 13 ವರ್ಷದ ಮಗನನ್ನು ಹೊರಗೆ ಮಲಗಲು ಹೇಳಿದ್ದಾನೆ ಎಂದು ವರದಿಯಾಗಿದೆ. ನಂತರ, ತನ್ನ ಹೆಂಡತಿಯ ಮುಖಕ್ಕೆ ಮಾರಕ ಗಾಯಗಳನ್ನುಂಟುಮಾಡಲು ಹರಿತವಾದ ವಸ್ತುವನ್ನು ಬಳಸಿ ಹಲ್ಲೆ ನಡೆಸಿದ್ದಾನೆ. ನಂತರ ಕಿರಿಯ ಮಗುವನ್ನು ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ.

ಹಿರಿಯ ಮಗ ಮರುದಿನ ಬೆಳಗ್ಗೆ ಗುಡಿಸಲು ಒಳಗೆ ಹೋದಾಗ ತಾಯಿ ಹಾಗೂ ತಮ್ಮ ಬರ್ಬರವಾಗಿ ಹತ್ಯೆಯಾಗಿರುವುದನ್ನು ಕೂಗಿಕೊಂಡಿದ್ದಾನೆ. ಬಳಿಕ ಅಕ್ಕಪಕ್ಕದ ಮನೆಯರು ಬಂದು ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದಾರೆ. ಪ್ರದೇಶವನ್ನು ಪರೀಕ್ಷಿಸಲು ವಿಧಿವಿಜ್ಞಾನ ತಂಡವನ್ನು ಕರೆಯಲಾಯಿತು ಮತ್ತು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ
ಭಾರತದ ಮೊದಲ ಕಾಫಿ ತೋಟ ತಾಣದ ಕಥೆಯನ್ನು ಹಂಚಿಕೊಂಡ ಆನಂದ್‌ ಮಹೀಂದ್ರಾ
ಕಾಲೇಜು ಪ್ರೊಫೆಸರ್‌ ಎನರ್ಜಿಗೆ ಫಿದಾ ಆದ ವಿದ್ಯಾರ್ಥಿಗಳು
ಬೆಂಗಳೂರಿನಲ್ಲಿ ಆಟೋ ಬುಕ್ ಮಾಡುವ ಟಿಪ್ಸ್ ನೀಡಬೇಕು
ಒಂದೇ ಮಂಟಪದಲ್ಲಿ, ಒಂದೇ ಸಮಯದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ

ಮತ್ತಷ್ಟು ಓದಿ: ಸರ್ಪ ದೋಷ ನಿವಾರಣೆಗೆ ಮಗಳನ್ನೇ ನರಬಲಿ ನೀಡಿದ ತಾಯಿ, ಮಹತ್ವದ ತೀರ್ಪು ನೀಡಿದ ಕೋರ್ಟ್

ಅವರು ಮೂಲತಃ ಅಸ್ಸಾಂ ಮೂಲದವರು. ತನಿಖೆ ನಡೆಯುತ್ತಿದೆ ಮತ್ತು ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಕಾನೂನುಬದ್ಧ ಅನುಮತಿಯಿಲ್ಲದೆ ಕುಟುಂಬಗಳು ಹಲವಾರು ವರ್ಷಗಳಿಂದ ಅಲ್ಲಿ ವಾಸಿಸುತ್ತಿವೆ ಎಂದು ಪ್ರದೇಶದ ನಿವಾಸಿಗಳು ಹೇಳಿದ್ದಾರೆ.

ಮುಖ್ಯಮಂತ್ರಿಗಳ ಪೋರ್ಟಲ್ ಮತ್ತು ಸ್ಥಳೀಯ ಪೊಲೀಸರಿಗೆ ಹಲವು ದೂರುಗಳನ್ನು ಸಲ್ಲಿಸಿದ್ದೇವೆ, ಆದರೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ನಾವು ಪೊಲೀಸರಿಗೆ ಮತ್ತು ಸಿಎಂ ಪೋರ್ಟಲ್‌ನಲ್ಲಿ ಹಲವಾರು ಬಾರಿ ದೂರುಗಳನ್ನು ಸಲ್ಲಿಸಿದ್ದೇವೆ, ಆದರೆ ಭೂಮಿಯನ್ನು ಎಂದಿಗೂ ತೆರವುಗೊಳಿಸಲಾಗಿಲ್ಲ. ಇಂದು, ಇದೇ ಜಾಗದಲ್ಲಿ ತಾಯಿ, ಮಗನ ಹತ್ಯೆಯಾಗಿದೆ ಎಂದು ಭೂಮಿಯ ಮಾಲೀಕರಾದ ಪಿಯೂಷ್ ಚಂದ್ರ ಹೇಳಿದರು.

ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ಮುಂದುವರೆಸಿದ್ದು, ತನಿಖೆಯ ಭಾಗವಾಗಿ ನೆರೆಹೊರೆಯವರು ಮತ್ತು ಕುಟುಂಬ ಸದಸ್ಯರನ್ನು ಪ್ರಶ್ನಿಸುತ್ತಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ